ಕಂಬಳದ `ಉಸೇನ್ ಬೋಲ್ಟ್ ‘ ಶ್ರೀನಿವಾಸ ಗೌಡರ ನಿಂದನೆಗೆ ವ್ಯಾಪಕ ಖಂಡನೆ

ಶಾಸಕರು, ಮಾಜಿ ಸಚಿವರ ಸಹಿತ ಕಂಬಳ ಪ್ರಮುಖರ ಖಂಡನೆ, ಕಾನೂನು ಕ್ರಮಕ್ಕೆ ಆಗ್ರಹ

Team Udayavani, Jul 16, 2021, 9:10 PM IST

cats

ಮೂಡುಬಿದಿರೆ: ಕಂಬಳ ಕ್ಷೇತ್ರದ `ಉಸೇನ್ ಬೋಲ್ಟ್’ ಖ್ಯಾತಿಯ, `ಕರ್ನಾಟಕ ಕ್ರೀಡಾರತ್ನ’ ಪ್ರಶಸ್ತಿ ಪುರಸ್ಕೃತ, ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರನ್ನು ಯುವಕನೋರ್ವ ದೂರವಾಣಿ ಕರೆಯ ಮುಖಾಂತರ ನಿಂದಿಸಿರುವ ಪ್ರಕರಣ ಮೂಡುಬಿದಿರೆ ಪೊಲೀಸ್ ಠಾಣೆಯ ಮೆಟ್ಟಲೇರಿದೆ.

ಗುರುವಾರ ಪ್ರಶಾಂತ್ ಎಂಬ ವ್ಯಕ್ತಿ ದೂರವಾಣಿಯಲ್ಲಿ ಕಂಬಳದ ಕುರಿತು ಮಾತನಾಡಿ, ತನ್ನನ್ನು, ತನ್ನ ಕುಟುಂಬದವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿರುವುದಾಗಿ ಶ್ರೀನಿವಾಸ ಗೌಡ ಅವರು ಮೂಡುಬಿದಿರೆ ಠಾಣೆಗೆ ದೂರು ನೀಡಿದ್ದಾರೆ.

ಸಾಧಕ ಓಟಗಾರನನ್ನು ಅವಹೇಳನ ಮಾಡಿರುವುದನ್ನು ಜನಪ್ರತಿನಿಧಿಗಳು, ಕಂಬಳ ಕ್ಷೇತ್ರದ ಪ್ರಮುಖರು, ಕಂಬಳಾಭಿಮಾನಿಗಳು ಖಂಡಿಸಿದ್ದಾರೆ.

ಶಾಸಕ ಉಮಾನಾಥ ಕೋಟ್ಯಾನ್ ಖಂಡನೆ, ಕಾನೂನು ಕ್ರಮಕ್ಕೆ ಸೂಚನೆ:  ಕಂಬಳ ರಂಗದಲ್ಲಿ ಸಾಧಕನಾಗಿ ಮಿಂಚುತ್ತ ಊರಿಗೆ, ದೇಶಕ್ಕೆ ಕೀರ್ತಿ ತಂದಿರುವ ಶ್ರೀನಿವಾಸ ಗೌಡರನ್ನು, ಅವರ ಕುಟುಂಬದವರನ್ನು ನಿಂದಿಸಿರುವುದು ಅವರಿಗೆ ಮಾಡಿರುವ ಅವಮಾನ ಮಾತ್ರವಲ್ಲ, ಇಡೀ ಕಂಬಳ ರಂಗಕ್ಕೆ, ಈ ನಾಡಿಗೆ ಮಾಡಿರುವ ಮಾಡಿರುವ ಅಪಮಾನ; ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕನಾಗಿ, ಮೂಡುಬಿದಿರೆಯ ಕೋಟಿ ಚೆನ್ನಯ ಕಂಬಳ ಸಮಿತಿ ಅಧ್ಯಕ್ಷನಾಗಿ ಸದಾ ಶ್ರೀನಿವಾಸ ಗೌಡರ ಜತೆ ನಾನಿದ್ದೇನೆ. ಅವರನ್ನು ನಿಂದಿಸಿರುವ ಯುವಕನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ’ ಎಂದು ಶಾಸಕ ಉಮಾನಾಥ ಕೋಟ್ಯಾನ್ ತಿಳಿಸಿದ್ದಾರೆ.

ಅಭಯಚಂದ್ರ ಖಂಡನೆ: ಕರ್ನಾಟಕ ಸರಕಾರದಿಂದ ಕ್ರೀಡಾರತ್ನ ಪ್ರಶಸ್ತಿಯನ್ನು ಪಡೆದಿರುವ ಕಂಬಳದ ಶ್ರೇಷ್ಟ ಓಟಗಾರ, ಕುಡುಬಿ ಸಮಾಜದ ಮುಗ್ಧ ಯುವಕ ಶ್ರೀನಿವಾಸ ಗೌಡರಿಗೆ ಕಿಡಿಗೇಡಿಗಳು ಜೀವ ಬೆದರಿಕೆಯನ್ನು ಹಾಕಿರುವುದಕ್ಕೆ ಖಂಡಿಸುತ್ತೇನೆ. ಜಾನಪದ ಕ್ರೀಡೆ ಉಳಿಯಬೇಕು, ಅದಕ್ಕೆ ಪ್ರೋತ್ಸಾಹ ನೀಡಬೇಕು ಎಂಬ ನಿಟ್ಟಿನಲ್ಲಿ ತಾನು ಕ್ರೀಡಾ ಸಚಿವನಾಗಿದ್ದಾಗ ಕಂಬಳ ಕ್ಷೇತ್ರದ ಓಟಗಾರರಿಗೆ ಮತ್ತು ಕಂಬಳದ ಸಂಯೋಜಕರಿಗೆ ಕ್ರೀಡಾರತ್ನ ಪ್ರಶಸ್ತಿಯನ್ನು ಘೋಷಿಸುವಂತಹ ಕೆಲಸ ಮಾಡಿದ್ದೆ. ಕಂಬಳದ ಓರ್ವ ಸಾಧಕ ಓಟಗಾರನಿಗೆ ಅವಮಾನ ಮಾಡಿರುವಾತನನ್ನು ಉನ್ನತ ಪೊಲೀಸ್ ಅ ಕಾರಿಗಳು ಜೈಲಿಗಟ್ಟಬೇಕು’ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಹೇಳಿದ್ದಾರೆ.

ನಾಳೆ (ಜು.17) ಶ್ರೀನಿವಾಸ ಗೌಡ ಅಭಿಮಾನಿಗಳ ಸಭೆ :

ಪ್ರಕರಣದ ಕುರಿತು, ಮೂಡುಬಿದಿರೆ ಸಮಾಜ ಮಂದಿರದಲ್ಲಿ ಶನಿವಾರ ಅಪರಾಹ್ನ 3 ಗಂಟೆಗೆ ಶ್ರೀನಿವಾಸ ಗೌಡರ ಅಭಿಮಾನಿಗಳು ತುರ್ತು ಸಭೆ ಕರೆಯಲಾಗಿದೆ.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.