ಇಂದಿನಿಂದ ಎಸೆಸೆಲ್ಸಿ ಪರೀಕ್ಷೆ: ಕೇಂದ್ರಗಳು ಸಜ್ಜು
ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುವವರಿಗೆ ಪರೀಕ್ಷೆ ಬರೆಯಲು ಅವಕಾಶ
Team Udayavani, Mar 28, 2022, 7:03 AM IST
ಮಂಗಳೂರು: ರಾಜ್ಯದಲ್ಲಿ ಮಾ. 28ರಿಂದ ಎಸೆಸೆಲ್ಸಿ ಪರೀಕ್ಷೆ ನಡೆಯಲಿದ್ದು, ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅಧ್ಯಕ್ಷತೆಯಲ್ಲಿ ಅಂತಿಮ ಹಂತದ ಪೂರ್ವಭಾವಿ ಸಿದ್ಧತೆ ಪರಿಶೀಲನ ಸಭೆ ನಡೆಯಿತು.
ಖಾಸಗಿ ಶಾಲೆಗಳಲ್ಲಿ ಸಮವಸ್ತ್ರದ ಭಾಗವಾಗಿ ಹಿಜಾಬ್ ಧರಿಸುತ್ತಿರುವ ವಿದ್ಯಾರ್ಥಿನಿ ಯರಿಗೆ ಹಿಜಾಬ್ ಧರಿಸಿಕೊಂಡೇ ಪರೀಕ್ಷೆ ಬರೆಯಲು ರಾಜ್ಯ ಸರಕಾರ ಅವಕಾಶ ಕಲ್ಪಿಸಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ರಾಜ್ಯ ಸರಕಾರ ಮಾ. 25ರಂದು ಹೊರಡಿಸಿದ ಆದೇಶದ ಪ್ರಕಾರ ಇದು ಖಾಸಗಿ ಶಾಲೆಗಳ ವಿದ್ಯಾರ್ಥಿನಿಯರಿಗೆ ಮಾತ್ರ ಅನ್ವಯ. ಸರಕಾರಿ ಶಾಲೆಗಳ ವಿದ್ಯಾರ್ಥಿನಿಯರು ಸರಕಾರ ರೂಪಿಸಿದ ಸಮವಸ್ತ್ರ ವನ್ನಷ್ಟೇ ಧರಿಸಿಕೊಂಡು ಪರೀಕ್ಷೆ ಬರೆಯ ಬಹುದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಹಿಜಾಬ್ ಸಮವಸ್ತ್ರವನ್ನಾಗಿ ಹೊಂದಿರುವ ಶಾಲೆಗಳ ವಿದ್ಯಾರ್ಥಿಗಳು ಯಾವ ಯಾವ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಲಿದ್ದಾರೆ ಎಂಬ ಮಾಹಿತಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಪಡೆದು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ ಎಂದು ವಿವರಿಸಿದ್ದಾರೆ.
ಇದನ್ನೂ ಓದಿ:ಹಿಜಾಬ್ಗಾಗಿ ಪರೀಕ್ಷೆ ಬಹಿಷ್ಕರಿಸಿದರೆ ಮತ್ತೆ ಬರೆಯಲು ಅವಕಾಶವಿಲ್ಲ : ಬಿ.ಸಿ.ನಾಗೇಶ್ ಸೂಚನೆ
ಅಂತಹ ವಿದ್ಯಾರ್ಥಿನಿಯರು ಶಾಲಾ ಮುಖ್ಯಸ್ಥರ ಸಹಿಯುಳ್ಳ ಪತ್ರವನ್ನು ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ತೋರಿಸಿ ಪರೀಕ್ಷೆ ಬರೆಯ ಬಹುದಾಗಿದೆ ಎಂದು ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಮೂಸಬ್ಬ ಬ್ಯಾರಿ ತಿಳಿಸಿದ್ದಾರೆ.
ಕೇರಳ ವಿದ್ಯಾರ್ಥಿಗಳಿಗೆ ವಾಹನ ವ್ಯವಸ್ಥೆ
ಮಾ. 28, 29ರಂದು ಕೇರಳದಲ್ಲಿ ಹರತಾಳವಿದ್ದು, ದ.ಕ. ಜಿಲ್ಲೆಯಲ್ಲಿ ಪರೀಕ್ಷೆ ಬರೆಯುವ ಕಾಸರಗೋಡಿನ ಮಕ್ಕಳ ಅನುಕೂಲಕ್ಕೆ ಆ ದಿನಗಳಂದು ಗಡಿಯಿಂದ ವಿಶೇಷ ವಾಹನ ವ್ಯವಸ್ಥೆ ಇದೆ ಎಂದು ಡಿಸಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್ ಸಾವು
MUST WATCH
ಹೊಸ ಸೇರ್ಪಡೆ
Sandalwood; ‘ಫಾರೆಸ್ಟ್’ನಲ್ಲಿ ಚಿಕ್ಕಣ್ಣ & ಟೀಂ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ