ಕೋವಿಡ್ ಆತಂಕದ ಮಧ್ಯೆ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ
ಎಸ್ಎಸ್ಎಲ್ ಸಿ ಪರೀಕ್ಷೆ: ದ.ಕ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ 30368 ವಿದ್ಯಾರ್ಥಿಗಳು
Team Udayavani, Jun 25, 2020, 8:57 AM IST
ಮಂಗಳೂರು: ಕೋವಿಡ್-19 ಸೋಂಕು ಆತಂಕದ ಕಾರಣ ಮುಂದೂಡಿಕೆಯಾಗಿದ್ದ ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆಗಳು ಬಹು ಚರ್ಚೆಯ ನಂತರ ಇಂದು ಆರಂಭವಾಗಲಿದೆ. ಮುಂದಿನ ಹತ್ತು ದಿನಗಳ ಕಾಲ ಪರೀಕ್ಷೆ ನಡೆಸಲಾಗುತ್ತಿದ್ದು, ಸರ್ಕಾರ ಸಕಲ ಸಿದ್ದತೆ ಮಾಡಿಕೊಂಡಿದೆ.
ಮಂಗಳೂರಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಿದ್ಧತೆ ಪೂರ್ಣವಾಗಿದ್ದು, ವಿದ್ಯಾರ್ಥಿಗಳು ಹೆತ್ತವರೊಂದಿಗೆ ಶಾಲೆಗೆ ಬರುತ್ತಿರುವ ದೃಶ್ಯ ಕಂಡುಬಂತು.
ಪ್ರತಿ ವಿದ್ಯಾರ್ಥಿಗಳ ಥರ್ಮಲ್ ಸ್ಕ್ರೀನಿಂಗ್ ಮಾಡಲು ಬಾಕ್ಸ್ ರಚನೆ ಮಾಡಲಾಗಿದ್ದು, ಪರೀಕ್ಷಾ ಕೊಠಡಿಗೆ ತೆರಳುವ ಮುನ್ನ ಪ್ರತೀ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ.
ಪ್ರತೀ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ವಿತರಣೆಗೆ ಮಾಡಲಾಗುವುದು, ಪ್ರತಿ ಶಾಲೆಗೆ ಇಬ್ಬರು ಪೊಲೀಸರು, ಇಬ್ಬರು ಸ್ಕೌಟ್ & ಗೈಡ್ಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗುವುದು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 95 ಪರೀಕ್ಷಾ ಕೇಂದ್ರಗಳಿದ್ದು, 30,368 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ನೆರೆಯ ಕಾಸರಗೋಡು ಜಿಲ್ಲೆಯಿಂದಲೂ ವಿದ್ಯಾರ್ಥಿಗಳು ಆಗಮಿಸಲಿದ್ದು, 367 ಮಂದಿ ವಿದ್ಯಾರ್ಥಿಗಳು ಕಾಸರಗೋಡಿನಿಂದ ಮಂಗಳೂರಿಗೆ ಬಂದು ಪರೀಕ್ಷೆ ಬರೆಯಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
Pilikula: “ಫ್ಯಾನ್-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!
Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ
Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ
Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ