ವಿದ್ಯುತ್‌ ಅಭಾವ, ಸಿಬಂದಿ ಕೊರತೆ: ಸೊರಗಿದೆ ಮೆಸ್ಕಾಂ


Team Udayavani, Jun 28, 2018, 2:10 AM IST

mescom-27-6.jpg

ಸುಳ್ಯ: ಸಮರ್ಪಕ ವಿದ್ಯುತ್‌ ಪೂರೈಕೆ ಕೊರತೆಯಿಂದ ಹೈರಣಾಗಿರುವ ತಾಲೂಕಿನ ಮೆಸ್ಕಾಂ ಕಚೇರಿಯಲ್ಲಿ ಸಿಬಂದಿ ಹುದ್ದೆಗಳು ಖಾಲಿ ಬಿದ್ದಿವೆ. ವಿದ್ಯುತ್‌ ಪರಿಕರಗಳು ಅತಿ ಹೆಚ್ಚು ಹಾನಿಯಾಗುವ ಸುಳ್ಯ ಮತ್ತು ಸುಬ್ರಹ್ಮಣ್ಯ ಡಿವಿಜನ್‌ ನಲ್ಲಿ ಪೂರ್ಣಕಾಲಿಕ ಸಿಬಂದಿ ಆವಶ್ಯಕತೆ ಇದೆ. ಆದರೆ ಇಲ್ಲಿ ಶೇ. 30ಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ ಬಾಕಿ ಇದೆ.

ಲೈನ್‌ಮೆನ್‌ ಹುದ್ದೆ
ಎರಡು ಡಿವಿಷನ್‌ ವ್ಯಾಪ್ತಿಯಲ್ಲಿ ತುರ್ತಾಗಿ ಕಾರ್ಯನಿರ್ವಹಣೆಗೆ ಅಗತ್ಯವಿರುವ ಲೈನ್‌ ಮೆನ್‌ ಹುದ್ದೆ ಖಾಲಿ ಇವೆ. ಸುಳ್ಯ ಶಾಖೆಯಲ್ಲಿ 34 ಮಂಜೂರಾತಿ ಹುದ್ದೆಯಲ್ಲಿ 10, ಬೆಳ್ಳಾರೆ ಶಾಖೆಯಲ್ಲಿ 31ರಲ್ಲಿ 8, ಆರಂತೋಡು ಶಾಖೆಯಲ್ಲಿ 21ರಲ್ಲಿ 6, ಜಾಲ್ಸೂರು ಶಾಖೆಯಲ್ಲಿ 24ರಲ್ಲಿ 11 ಹುದ್ದೆಗಳು ಭರ್ತಿ ಆಗಿಲ್ಲ. ಸುಬ್ರಹ್ಮಣ್ಯ ಉಪ ವಿಭಾಗದಲ್ಲಿ ಸುಬ್ರಹ್ಮಣ್ಯ ಶಾಖೆಯಲ್ಲಿ 23ರಲ್ಲಿ 10, ಗುತ್ತಿಗಾರು ಶಾಖೆಯಲ್ಲಿ 19ರಲ್ಲಿ 7, ಪಂಜ ಶಾಖೆಯಲ್ಲಿ 21ರಲ್ಲಿ 9 ಹುದ್ದೆಗಳು ಖಾಲಿ ಇವೆ. ಸುಳ್ಯ ಡಿವಿಷನ್‌ನಲ್ಲಿ 33 ಕೆವಿ, ಲೈನ್‌ಮನ್‌, ಕಚೇರಿ ಸಿಬಂದಿ ಸೇರಿ 145 ಮಂಜುರಾತಿ ಹುದ್ದೆಗಳಿದ್ದು, ಅದರಲ್ಲಿ 87 ಭರ್ತಿ ಆಗಿವೆ. ಉಳಿದ 58 ಹುದ್ದೆಗಳು ಖಾಲಿ ಇವೆ. ಸುಬ್ರಹ್ಮಣ್ಯ ವಿಭಾಗದಲ್ಲಿ ಮಂಜೂರಾತಿ 79 ಹುದ್ದೆಗಳ ಪೈಕಿ 41 ಭರ್ತಿ ಆಗಿವೆ. 38 ಖಾಲಿ ಇವೆ. ಾಲೂಕಿನಲ್ಲಿ 224 ಮಂಜೂರಾತಿ ಹುದ್ದೆಗಳ ಪೈಕಿ 96ರಲ್ಲಿ  ಸಿಬಂದಿ ಇಲ್ಲ.

ಸ.ಕಾ. ಎಂಜಿನಿಯರ್‌ಗಳು ಇಲ್ಲ
ಸಬ್‌ ಡಿವಿಷನ್‌ ಕಚೇರಿಗಳಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಸ್ಥಾನಗಳೇ ಅಪೂರ್ಣವಾಗಿವೆ. ಪುತ್ತೂರು ಉಪವಿಭಾಗದಲ್ಲಿ 8 ಮಂಜೂರಾತಿ ಹುದ್ದೆಗಳಿದ್ದು, ಅದರಲ್ಲಿ 7 ಖಾಲಿ ಇವೆ. ಪುತ್ತೂರು ಗ್ರಾಮಾಂತರ ಕಚೇರಿಯಲ್ಲಿ ಮಾತ್ರ ಆ ಹುದ್ದೆ ಭರ್ತಿ ಆಗಿದೆ. ಉಳಿದಂತೆ ಪುತ್ತೂರು ನಗರ, ಸುಳ್ಯ, ಸುಬ್ರಹ್ಮಣ್ಯ, ಕಡಬಗಳಲ್ಲಿ ಸೆಕ್ಷನ್‌ ಆಫೀಸರ್‌ ಗಳೇ ಪ್ರಭಾರ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದರಿಂದ ಸೆಕ್ಷನ್‌ ಆಫೀಸರ್‌ ಗಳು ಕ್ಷೇತ್ರ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಮಳೆಗಾಲದಲ್ಲಿ ಭೇಟಿ ನೀಡುವುದು ಅಗತ್ಯವಾಗಿದ್ದರೂ, ಪ್ರಭಾರ ಹುದ್ದೆ ಅವರ ಮೂಲ ಕರ್ತವ್ಯಕ್ಕೆ ಅಡ್ಡಿಪಡಿಸಿದೆ.

53,960 ಸಂಪರ್ಕ
ತಾಲೂಕಿನಲ್ಲಿ 37,099 ಗೃಹ ಬಳಕೆದಾರರು, 4,552 ವಾಣಿಜ್ಯ, 11,021 ಕೃಷಿ ಪಂಪ್‌ಸೆಟ್‌, 439 ಕೈಗಾರಿಕೆ, 423 ಕುಡಿಯುವ ನೀರು, 315 ದಾರಿದೀಪ, 81 ತಾತ್ಕಾಲಿಕ ಸಹಿತ ಒಟ್ಟು 53,960 ವಿದ್ಯುತ್‌ ಸಂಪರ್ಕಗಳಿವೆ. ಪುತ್ತೂರು ತಾಲೂಕಿನ ಮಾಡಾವಿನಲ್ಲಿ 110 ಕೆವಿ ಸಬ್‌ ಸ್ಟೇಷನ್‌ ನಿರ್ಮಾಣದ ಹಂತದಲ್ಲಿದ್ದರೆ, ಸುಳ್ಯದಲ್ಲಿ 110 ಕೆವಿ ಸಬ್‌ಸ್ಟೇಷನ್‌ ಸರ್ವೆ ಕಾರ್ಯ ಹಂತದಲ್ಲಿ ಮೊಟಕುಗೊಂಡಿದೆ. ಇವೆರಡೂ ಪೂರ್ಣಗೊಳ್ಳುವ ಜತೆಗೆ ಸಿಬಂದಿ ನೇಮಕಕ್ಕೂ ಕ್ರಮ ಕೈಗೊಳ್ಳಬೇಕಿದೆ.

53,960 ಸಂಪರ್ಕ
ಸುಳ್ಯ ತಾಲೂಕಿನಲ್ಲಿ 37,099 ಗೃಹ ಬಳಕೆದಾರರು, 4,552 ವಾಣಿಜ್ಯ, 11,021 ಕೃಷಿ ಪಂಪ್‌ಸೆಟ್‌, 439 ಕೈಗಾರಿಕೆ, 423 ಕುಡಿಯುವ ನೀರು, 315 ದಾರಿದೀಪ, 81 ತಾತ್ಕಾಲಿಕ ಸಹಿತ ಒಟ್ಟು 53,960 ವಿದ್ಯುತ್‌ ಸಂಪರ್ಕಗಳಿವೆ. ಪುತ್ತೂರು ತಾಲೂಕಿನ ಮಾಡಾವಿನಲ್ಲಿ 110 ಕೆವಿ ಸಬ್‌ ಸ್ಟೇಷನ್‌ ನಿರ್ಮಾಣದ ಹಂತದಲ್ಲಿದ್ದರೆ, ಸುಳ್ಯದಲ್ಲಿ 110 ಕೆವಿ ಸಬ್‌ ಸ್ಟೇಷನ್‌ ಸರ್ವೆ ಹಂತದಲ್ಲಿ ಮೊಟಕುಗೊಂಡಿದೆ. ಸಿಬಂದಿ ನೇಮಕಕ್ಕೂ ಕ್ರಮ ಕೈಗೊಳ್ಳಬೇಕಿದೆ.

ಗಮನಕ್ಕೆ ತರಲಾಗಿದೆ
ಸಿಬಂದಿ ಬೇಡಿಕೆ ಬಗ್ಗೆ ಎಂ.ಡಿ. ಅವರ ಗಮನಕ್ಕೆ ತಂದಿದ್ದೇವೆ. ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ನೇಮಕದ ಬಗ್ಗೆ ಚರ್ಚೆ ನಡೆಸಿದ್ದೇವೆ. ಈ ಬಗ್ಗೆ ಸ್ಪಂದನೆ ಸಿಗಲಿದೆ.
– ನರಸಿಂಹ, ಕಾರ್ಯಪಾಲಕ ಎಂಜಿನಿಯರ್‌, ಪುತ್ತೂರು ವಿಭಾಗ

— ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

Kerala “ವೆಸ್ಟ್‌ನೈಲ್‌’ ಜ್ವರದ ಆತಂಕ; ದ.ಕ. ಜಿಲ್ಲೆಯಲ್ಲೂ ವಿಶೇಷ ನಿಗಾ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ

ನೈಋತ್ಯ ಕ್ಷೇತ್ರ; ಬಿಜೆಪಿ- ಜೆಡಿಎಸ್‌ ಒಮ್ಮತದ ಅಭ್ಯರ್ಥಿಗೆ ಗೆಲುವು: ಡಾ| ಧನಂಜಯ ಸರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Vasantha ಬಂಗೇರರ ಮನೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ಸಾಂತ್ವನ

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Bantwal ಅಕ್ರಮ ಸಾಗಾಟದ ಮರಳು ವಶ; ಪ್ರಕರಣ ದಾಖಲು

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

Road Mishap ಅರಂತೋಡು: ಬೈಕ್‌- ಜೀಪ್‌ ಢಿಕ್ಕಿ; ಗಾಯ

Road Mishap ಕಾರು ಅಪಘಾತ: 6 ಮಂದಿಗೆ ಗಾಯ

Road Mishap ಕಾರು ಅಪಘಾತ: 6 ಮಂದಿಗೆ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

ISREL

Israel–ಹಮಾಸ್‌ಯುದ್ಧ: 70 ಹಮಾಸ್‌ ಉಗ್ರರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.