ಬೀದಿ ಬದಿ ವಲಯದಲ್ಲಿ ವ್ಯಾಪಾರ ಆರಂಭ


Team Udayavani, Oct 25, 2017, 10:18 AM IST

25-Mng-2.jpg

ಸ್ಟೇಟ್‌ಬ್ಯಾಂಕ್‌: ನಗರದ ಬೀದಿ ಬದಿ ವ್ಯಾಪಾರಿಗಳ ಬೇಡಿಕೆಯ ಹಿನ್ನೆಲೆಯಲ್ಲಿ ಪಾಲಿಕೆಯು ಪುರಭವನದ ಹಿಂಭಾಗದಲ್ಲಿ ಪ್ರಾರಂಭಿಸಿದ ಬೀದಿ ಬದಿ ವ್ಯಾಪಾರಿಗಳ ವಲಯದೊಳಗೆ ಮಂಗಳವಾರ ವ್ಯಾಪಾರ ಆರಂಭವಾಗಿದ್ದು, ನನೆಗುದಿಗೆ ಬಿದ್ದು, ಬಿಕೋ ಎನ್ನುತ್ತಿದ್ದ ಈ ವಲಯಕ್ಕೆ ಜೀವಕಳೆ ಬಂದಂತಾಗಿದೆ.

ಸೆಂಟ್ರಲ್‌ ಮಾರುಕಟ್ಟೆ ಮುಂಭಾಗ ತರಕಾರಿ ವ್ಯಾಪಾರ ನಡೆಸುತ್ತಿರುವ ಸುಮಾರು 50 ರೈತ ಮಹಿಳೆಯರು ಸಾಮಾಜಿಕ ಕಾರ್ಯಕರ್ತೆ ರೀಟಾ ನೊರೋನ್ಹಾ ನೇತೃತ್ವದಲ್ಲಿ ಬೀದಿ ಬದಿ ವ್ಯಾಪಾರಿ ವಲಯದೊಳಗೆ ಮಂಗಳವಾರ ವ್ಯಾಪಾರ ಆರಂಭಿಸಿದ್ದಾರೆ. ಸಾರ್ವಜನಿಕರಿಗೆ ಸೂಕ್ತ ಮಾಹಿತಿ ಇರದ ಕಾರಣ ಮೊದಲ ದಿನದ ವ್ಯಾಪಾರ ಕಡಿಮೆಯಾಗಿತ್ತು.

ಮೊದಲ ದಿನ; ಬಿಸಿಲಿನ ಪೆಟ್ಟು!
ಇಲ್ಲಿನ ವ್ಯಾಪಾರಿಗಳು ಮೊದಲ ದಿನವೇ ಬಿಸಿಲಿನ ಪೆಟ್ಟಿಗೆ ಕಂಗಾಲಾದರು. ವಲಯದೊಳಗೆ ಒಂದು ವಾರ ಕುಳಿತು ವ್ಯಾಪಾರ ಮಾಡಿದರೆ, ಎಲ್ಲ ಅಗತ್ಯ ವ್ಯವಸ್ಥೆ, ಬಿಸಿಲಿನಿಂದ ಮುಕ್ತಿ ನೀಡುವ ಸೌಕರ್ಯವನ್ನು ಕಲ್ಪಿಸುವುದಾಗಿ ಪಾಲಿಕೆ ತಿಳಿಸಿದೆಯಾದರೂ, ಒಂದು ವಾರದವರೆಗೆ ಬಿಸಿಲಿನಲ್ಲಿ ಹೇಗೆ ವ್ಯಾಪಾರ ನಡೆಸುವುದು ಎಂಬ ಪ್ರಶ್ನೆಯಲ್ಲಿದ್ದಾರೆ. ಜತೆಗೆ ವಲಯದ ಸುತ್ತಲೂ ಕಾಂಪೌಂಡ್‌ ಇರುವುದರಿಂದ ಹೊರಭಾಗದ ಸಾರ್ವಜನಿಕರಿಗೆ ವಲಯದ ಬಗ್ಗೆ ಗೊತ್ತಾಗುತ್ತಿಲ್ಲ. ಹೀಗಾಗಿ ವ್ಯಾಪಾರ ಆಗುತ್ತಿಲ್ಲ ಎಂಬ ಆರೋಪವೂ ಕೇಳಿ ಬಂತು. ಬುಧವಾರ ನಗರದ ಬೀದಿ ಬದಿ ವ್ಯಾಪಾರಿಗಳು ಇದೇ ವಲಯದೊಳಗೆ ವ್ಯಾಪಾರ ಆರಂಭಿಸುವ ನಿರೀಕ್ಷೆ ಇದೆ.

ಈ ವಲಯದಲ್ಲಿ ಸುಮಾರು 1 ಎಕರೆಗಿಂತಲೂ ಅಧಿಕ ಸ್ಥಳವಿದ್ದು, 250 ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶವಿದೆ. ಪ್ರಸ್ತುತ ಪಾಲಿಕೆ ವತಿಯಿಂದ ಗುರುತು ಚೀಟಿ ನೀಡಲಾದ 208 ಬೀದಿ ಬದಿ ವ್ಯಾಪಾರಿಗಳ ಸಂಘದ ಸದಸ್ಯರಿಗೆ ಇಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ.

ಕಳೆದ ವರ್ಷ ಡಿ.9ರಂದು ಇದರ ಉದ್ಘಾಟನೆ ನೆರವೇರಿಸಿ, ವ್ಯಾಪಾರಿಗಳಿಗೆ ಪ್ರವೇಶ ನೀಡಲಾಗಿತ್ತು. ಹಲವು ದಿನಗಳ ಬಳಿಕ ಕೆಲವು ವ್ಯಾಪಾರಿಗಳು ಇಲ್ಲಿ ವ್ಯಾಪಾರಕ್ಕೂ ಮುಂದಾದರೂ ವಿವಿಧ ಕಾರಣಗಳಿಂದಾಗಿ ಮತ್ತೆ ಬೀದಿ ಬದಿಯಲ್ಲಿ ವ್ಯಾಪಾರ ಶುರು ಮಾಡಿದ್ದರು. ಬಳಿಕ ಪಾಲಿಕೆ ಬೀದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯನ್ನು ನಡೆಸಿತ್ತು. ಜತೆಗೆ ಪಾಲಿಕೆ ವತಿಯಿಂದ ಮೇಯರ್‌ ಕವಿತಾ ಸನಿಲ್‌ ನೇತೃತ್ವದಲ್ಲಿ ಗುರುತಿನ ಚೀಟಿ ನೀಡುವ ಕೆಲಸ ನಡೆಸಲಾಗಿತ್ತು.

‘ವಾರದೊಳಗೆ ಮೂಲಸೌಲಭ್ಯ’
 ಸ್ಟೇಟ್‌ಬ್ಯಾಂಕ್‌ನ ಬೀದಿ ಬದಿ ವ್ಯಾಪಾರಿ ವಲಯದೊಳಗೆ ಗುರುತಿನ ಚೀಟಿ ಪಡೆದುಕೊಂಡವರ ಪೈಕಿ ಮಂಗಳವಾರ ಕೆಲವು ಮಹಿಳೆಯರು ವ್ಯಾಪಾರ ಆರಂಭಿಸಿದ ಬಗ್ಗೆ ತಿಳಿದಿದೆ. ಇದೇ ರೀತಿ ಗುರುತಿನ ಚೀಟಿ ಪಡೆದುಕೊಂಡವರು ಇಲ್ಲಿ ವ್ಯಾಪಾರ ನಡೆಸಿದರೆ, ಒಂದು ವಾರದೊಳಗೆ ಎಲ್ಲ ರೀತಿಯ ಮೂಲಸೌಲಭ್ಯಗಳನ್ನು ಕಲ್ಪಿಸುತ್ತೇವೆ. ವ್ಯಾಪಾರಿಗಳಿಗೆ ಬಿಸಿಲಿನಿಂದ ರಕ್ಷಣೆ ಹಾಗೂ ಎದುರಿನ ಕಾಂಪೌಂಡ್‌ ತೆರವು ಮಾಡಲಾಗುವುದು.
ಕವಿತಾ ಸನಿಲ್‌, ಮೇಯರ್‌

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.