ರಾಜ್ಯ ಬಜೆಟ್‌: ಗರಿಗೆದರಿವೆ ಕರಾವಳಿಯ ನಿರೀಕ್ಷೆಗಳು


Team Udayavani, Feb 25, 2020, 6:50 AM IST

mangalore

ಮಂಗಳೂರು: ರಾಜ್ಯ ಬಜೆಟ್‌ ಮಂಡನೆ ಸನ್ನಿಹಿತವಾಗುತ್ತಿದ್ದಂತೆ ಕರಾವಳಿಯಲ್ಲಿ ನಿರೀಕ್ಷೆಗಳು ಹುಟ್ಟಿಕೊಂಡಿವೆ. ಹೊಸ ಯೋಜನೆ-ಕೊಡುಗೆಗಳ ಕಡೆಗೂ ಆಶಾವಾದ ಮೂಡಿವೆ.

ಈ ಹಿಂದಿನ ಬಜೆಟ್‌ನಲ್ಲಿ ನೀಡಿರುವ ಯೋಜನೆಗಳಲ್ಲಿ ಹಲವು ಕಾರ್ಯಗತಗೊಂಡಿಲ್ಲ. 2008ರಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಬಜೆಟ್‌ನಲ್ಲಿ ಘೋಷಿಸಿದ್ದ ಮೋನೋ ರೈಲು ಪ್ರಸ್ತಾವನೆ ಹಳ್ಳ ಹಿಡಿದಿದೆ. 2018ರಲ್ಲಿ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದ ಮಂಗಳೂರು ಹಳೇ ಬಂದರಿನಲ್ಲಿ 65 ಕೋ.ರೂ. ವೆಚ್ಚದಲ್ಲಿ ಕೋಸ್ಟಲ್‌ ಬರ್ತ್‌ ನಿರ್ಮಾಣ, ನೇತ್ರಾವತಿ ಮತ್ತು ಗುರುಪುರ ನದಿಗಳ ಆಯ್ದ ಕಡೆ ಹೌಸ್‌ಬೋಟ್‌ಗಳು, ಪ್ರತಿ ತಾಲೂಕಿನ ಸರಕಾರಿ ಆಸ್ಪತ್ರೆಗಳನ್ನು ಸೂಪರ್‌ಸ್ಪೆಷಾಲಿಟಿ ಆಗಿ ಉನ್ನತೀಕರಣ, ಪ್ರತಿ ಜಿಲ್ಲೆಯಲ್ಲಿ ಐಟಿ ಪಾರ್ಕ್‌, ಕೈಗಾರಿಕೆಗಳ ಸ್ಥಾಪನೆ ಪ್ರಸ್ತಾವನೆಯಾಗಿಯೇ ಉಳಿದಿದೆ.

2018ರಲ್ಲಿ ಕುಮಾರಸ್ವಾಮಿ ಸಿಎಂ ಆದಾಗ ಮತ್ತೆ ಬಜೆಟ್‌ ಮಂಡನೆಯಾಗಿದ್ದು, ಆಗ ಘೋಷಿಸಿದ್ದ ಬೆಂಗಳೂರು ಮಾದರಿಯ ಮೆಟ್ರೋ ಅನುಷ್ಠಾನದ ಬಗ್ಗೆ ಪೂರ್ವ ಕಾರ್ಯ ಸಾಧ್ಯತೆ ವರದಿ ತಯಾರಿ, ಮಂಗಳೂರು ಸೇರಿದಂತೆ ರಾಜ್ಯದ ಕೆಲವು ಕಡೆ ಮ್ಯಾಮೋಗ್ರಾಮ್‌ ಮತ್ತು ಪ್ಯಾಪ್‌ಸ್ಮಿಯರ್‌ ಸ್ಕ್ಯಾನಿಂಗ್‌, ಕೊಣಾಜೆ -ಮಣಿಪಾಲ ನಾಲೆಡ್ಜ್, ಹೆಲ್ತ್‌ ಕಾರಿಡಾರ್‌ ಕಾರ್ಯರೂಪಕ್ಕೆ ಬಂದಿಲ್ಲ. ನಾಲೆಡ್ಜ್, ಹೆಲ್ತ್‌ ಕಾರಿಡಾರ್‌ ಯೋಜನೆಯಲ್ಲಿ ಕಳೆದ ತಿಂಗಳು ಕಾರ್ಯಾಗಾರ ನಡೆದಿರುವುದು ಬಿಟ್ಟರೆ ಹೆಚ್ಚಿನ ಪ್ರಗತಿಯಾಗಿಲ್ಲ.

ಕರಾವಳಿಯ ನಿರೀಕ್ಷೆಗಳು
ಅವಿಭಜಿತ ದ.ಕ. ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಇದನ್ನು ಬಳಸಿಕೊಳ್ಳುವುದಕ್ಕಾಗಿ ಬಜೆಟ್‌ನಲ್ಲಿ ಈ ಭಾಗಕ್ಕೆ ಸಮಗ್ರವಾದ ವಿಶೇಷ ಯೋಜನೆ ಅವಶ್ಯ. ಪೂರಕವಾಗಿ ಕರಾವಳಿಗೆ ವಿಶೇಷ ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರ ರಚನೆ ಆಗಬೇಕಿದೆ.

ರಬ್ಬರ್‌ ಮತ್ತು ಅಡಿಕೆ ಬೆಳೆಗಾರರಿಗೆ ಬೆಂಬಲ ಬೆಲೆ, ಅಡಿಕೆ ಹಳದಿ ರೋಗಕ್ಕೆ ಪರಿಹಾರಕ್ಕಾಗಿ ಪ್ರಯೋಗಾಲಯ ಸ್ಥಾಪನೆಯ ಬೇಡಿಕೆ ಹಲವಾರು ವರ್ಷಗಳದ್ದು. ಕರಾವಳಿ ಜಿಲ್ಲೆಗೆ ವಿಶೇಷ ಮರಳು ನೀತಿ, ಕೋಮು ಸಂಘರ್ಷ, ಹತ್ಯೆ ತಡೆಗೆ ವಿಶೇಷ ಕಾರ್ಯಪಡೆ ಮತ್ತು ವಿಶೇಷ ದಳಗಳ ರಚನೆ, ಉದ್ಯೋಗ ಸೃಷ್ಟಿಗೆ ಯೋಜನೆಗಳು, ಸೋಲಾರ್‌ ಪಾರ್ಕ್‌ಗಳ ಸ್ಥಾಪನೆ, ಮಂಗಳೂರಿನಲ್ಲಿ ಸಂಚಾರ ದಟ್ಟನೆ ನಿವಾರಣೆಗೆ ಬೆಂಗಳೂರು ಮಾದರಿಯ ಮೆಟ್ರೋ ಮುಂತಾದ ಬೇಡಿಕೆ ಹಲವಾರು ವರ್ಷಗಳಿಂದ ಇದೆ.

ದ.ಕ. ಜಿಲ್ಲೆ ಬೃಹತ್‌ ಬಂದರು, ರೈಲು -ವಾಯು ಸಂಪರ್ಕ, ಮೂರು ರಾಷ್ಟ್ರೀಯ ಹೆದ್ದಾರಿಗಳ ಸಹಿತ ಉದ್ದಿಮೆಗಳು ಮತ್ತು ಹೂಡಿಕೆಗೆ ಅವಶ್ಯ ಮೂಲಸೌಕರ್ಯಗಳನ್ನು ಹೊಂದಿದೆ. ಐಟಿ, ಆಹಾರ ಸಂಸ್ಕರಣೆ ಮತ್ತು ವಸ್ತ್ರೋದ್ಯಮ, ಪ್ರವಾಸೋದ್ಯಮಗಳಿಗೆ ಜಿಲ್ಲೆಯ ಪರಿಸರ ಮತ್ತು ಭೌಗೋಳಿಕ ಸನ್ನಿವೇಶ ಹೆಚ್ಚು ಸೂಕ್ತ. ಇದೇ ನೆಲೆಯಲ್ಲಿ ಜಿಲ್ಲೆಗೆ ಪ್ಲಾಸ್ಟಿಕ್‌ ಪಾರ್ಕ್‌, ಜವುಳಿ ಪಾರ್ಕ್‌, ಆಹಾರ ಸಂಸ್ಕರಣ ಉದ್ಯಮ ಪಾರ್ಕ್‌, ಐಟಿ ಪಾರ್ಕ್‌, ಔಷಧ ತಯಾರಿ ಪಾರ್ಕ್‌, ಆಟೋಮೊಬೈಲ್‌ ಪಾರ್ಕ್‌, ಸೋಲಾರ್‌ ಪಾರ್ಕ್‌ ಸ್ಥಾಪನೆ ಮುಂತಾದ ಯೋಜನೆಗಳನ್ನು ಪ್ರಸ್ತಾವಿಸಲಾಗಿತ್ತು. ಆದರೆ ಯಾವುವೂ ಕಾರ್ಯರೂಪಕ್ಕೆ ಬಂದಿಲ್ಲ.

ಮೂಲ ಸೌಕರ್ಯ, ಮೀನುಗಾರಿಕೆ, ಪಶ್ಚಿಮ ವಾಹಿನಿ, ಹೂಡಿಕೆಗಳಿಗೆ ಪೂರಕ ಯೋಜನೆಗಳು ಸೇರಿದಂತೆ ಜಿಲ್ಲೆಯ ಅಭಿವೃದ್ಧಿಯ ನಿಟ್ಟಿನಲ್ಲಿ ಮುಂದಿನ ಬಜೆಟ್‌ನಲ್ಲಿ ಹೆಚ್ಚು ಅನುದಾನ ಮತ್ತು ಯೋಜನೆಗಳನ್ನು ನೀಡಬೇಕು ಎಂದು ಸಿಎಂಗೆ ಮನವಿ ಮಾಡಿದ್ದೇನೆ. ಪೂರಕವಾಗಿ ಸ್ಪಂದಿಸುವ ಭರವಸೆ ಇದೆ.
– ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವರು

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.