ಹಲವು ವೈಶಿಷ್ಟ್ಯಗಳಿಗೆ ಸಾಕ್ಷಿಯಾಗಲಿದೆ ಸಮ್ಮೇಳನ !

ರಾಜ್ಯ ಮಟ್ಟದ ಪರಿಸರ ಸಮ್ಮೇಳನಕ್ಕೆ ದಿನಗಣನೆ

Team Udayavani, Feb 27, 2020, 4:01 AM IST

JADU-28

ಮಹಾನಗರ: ಪರಿಸರಾಸಕ್ತರು ಸೇರಿಕೊಂಡು ಆಯೋಜಿಸುತ್ತಿರುವ ರಾಜ್ಯ ಮಟ್ಟದ ಪರಿಸರ ಸಮ್ಮೇಳನಕ್ಕೆ ದಿನಗಣನೆ ಆರಂಭಗೊಂಡಿದೆ. ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ (ಎನ್‌ಇಸಿಎಫ್‌) ವತಿಯಿಂದ ಮಾ. 1ರಂದು ನಗರದ ತಣ್ಣೀರುಬಾವಿ ಟ್ರೀ ಪಾರ್ಕ್‌ನಲ್ಲಿ ನಡೆಯಲಿರುವ ಎರಡನೇ ವರ್ಷದ ರಾಜ್ಯ ಮಟ್ಟದ ಪರಿಸರ ಸಮ್ಮೇಳನವು ಹಲವು ವಿಶೇಷತೆಗಳಿಗೆ ಕಾರಣವಾಗಲಿದೆ.

ಪರಿಸರ ಸಮ್ಮೇಳನದ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಾದ್ಯಂತ “ಪರಿಸರ ರಥ’ ಸುತ್ತಾಟ ಈಗಾಗಲೇ ಆರಂಭಗೊಂಡಿದೆ. ಪ್ರಮುಖವಾಗಿ ಉಭಯ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಈ ರಥ ತೆರಳಲಿದ್ದು, ಸಂಯೋಜಕರು ಅಲ್ಲಿನ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಕರೆಯೋಲೆ ನೀಡಲಾಗುತ್ತಿದೆ. ಈ ಮುಖೇನ ಪರಿಸರ ಸಮ್ಮೇಳನಕ್ಕೆ ವಿದ್ಯಾರ್ಥಿಗಳನ್ನೂ ಕಳುಹಿಸುವಂತೆ ಶಾಲಾ-ಕಾಲೇಜು ಮುಖ್ಯಸ್ಥರಲ್ಲಿ ಮನವಿ ಮಾಡಲಾಗುತ್ತಿದೆ. ಪಜೀರು ಬಳಿಯ ಗೋವನಿತಾಶ್ರಯ ಟ್ರಸ್ಟ್‌ನಿಂದ ಮಲೆನಾಡ ಗಿಡ್ಡ ಗೋ ತಳಿ ಪ್ರದರ್ಶನ ಇರಲಿದೆ. ಅದೇ ರೀತಿ ರೈತರು ತಮ್ಮ ಮನೆಯಲ್ಲಿ ಬೆಳೆದ ಹಣ್ಣು ಹಂಪಲು ಪ್ರದರ್ಶನ-ಮಾರಾಟ, ಕಸಿ ಕಟ್ಟಿದ ಹಣ್ಣಿನ ಗಿಡಗಳ ಮಾರಾಟ ಕೂಡ ಪರಿಸರಾಸಕ್ತರನ್ನು ಸೆಳೆಯಲಿದೆ. ಕರಾವಳಿ ಚಿತ್ರಕಲಾ ಚಾವಡಿ, ಸ್ವರೂಪ ಅಧ್ಯಯನ ಕೇಂದ್ರ, ಮಂಗಳೂರಿಯನ್ಸ್‌ ಅರ್ಬನ್‌ ಸ್ಕೆಚ್ಚರ್ ಕಲಾವಿದರು ಪರಿಸರ ಬಗೆಗಿನ ಸಂದೇಶ ಸಾರುವ ಚಿತ್ರಗಳನ್ನು ಸ್ಥಳದಲ್ಲಿಯೇ ರಚಿಸಲಿದ್ದಾರೆ.

ಸಾವಯವ ಕೃಷಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಿಶೇಷ ಪ್ರದರ್ಶನ ಕೂಡ ಇರಲಿದೆ. ಪರಿಸರ ಸಮ್ಮೇಳನ ನಡೆಯುವ ಜಾಗದಲ್ಲಿ “ಟೀಂ ಮಂಗಳೂರು’ ಗಾಳಿಪಟ ತಂಡದಿಂದ ಗಾಳಿಪಟ ಉತ್ಸವ ನಡೆಯಲಿದೆ.

ಸಾಧಕರಿಗೆ ಪ್ರಶಸ್ತಿ
ಸಮ್ಮೇಳನಕ್ಕೆ ತಗಲುವ ಖರ್ಚನ್ನು ಪರಿಸರಾಸಕ್ತರೇ ಹೊಂದಿಸುತ್ತಿದ್ದಾರೆ. ಕೆಲವು ಮಂದಿ ಹಸುರು ಹೊರೆಕಾಣಿಕೆಯ ಮುಖೇನ ಅಕ್ಕಿ, ದವಸ-ಧಾನ್ಯಗಳನ್ನು ನೀಡುತ್ತಿದ್ದಾರೆ. ಸಮ್ಮೇಳನದ ನ್ಯಾಯಪಥದಲ್ಲಿ ಡಾ| ರವೀಂದ್ರನಾಥ್‌ ಶಾನುಭೋಗ್‌ ಭಾಗವಹಿಸಲಿದ್ದಾರೆ. ಪದ್ಮಶ್ರೀ ಸುಕ್ರಿಬೊಮ್ಮ ಗೌಡ, ಪಾಡªನ ಹಾಡುಗಾರರಾದ ಕುತ್ತಾರು ತಿಮ್ಮಕ್ಕ ಅವರಿಗೆ “ಜನಪದ ರತ್ನ ಪ್ರಶಸ್ತಿ’ ನೀಡಿ ಗೌರವಿಸಲಾಗುತ್ತಿದೆ. ಸಿದ್ಧಿ ಜನಾಂಗದ ಡಿಯಾಗೋ ಬಸ್ಕಾ ವ್‌ ಸಿದ್ಧಿ, ಪದ್ಮಶ್ರೀ ಪುರಸ್ಕೃತ ತುಳಸೀ ಗೌಡ ಅವರಿಗೆ “ವನರತ್ನ ಪ್ರಶಸಿ’¤ ನೀಡಲಾಗುತ್ತಿದೆ. ಚೇತನ್‌ ಕೊಪ್ಪ ನಿದೇರ್ಶನದ “ಕಾಡೇ ಕೂಗು’ ಎಂಬ ನಾಟಕ ಪ್ರದರ್ಶನಗೊಳ್ಳಲಿದೆ.

ಸಮುದ್ರ ದೇವರಿಗೆ ಪ್ರಾರ್ಥನೆ
ಪರಿಸರ ಸಮ್ಮೇಳನದ ಸಮಾರೋಪದ ಬದಲಾಗಿ ಸಂಜೆ 5 ಗಂಟೆಗೆ ಸಮುದ್ರ ದೇವರಿಗೆ ದೂರುಕೊಡುವ ನಿಟ್ಟಿನಲ್ಲಿ ಸಮುದ್ರ ಪ್ರಾರ್ಥನೆ ನಡೆಯಲಿದೆ. ಪರಿಸರ ಸಮ್ಮೇಳನದಲ್ಲಿ ಅಧ್ಯಕ್ಷರೇ ಇಲ್ಲದ ಕಾರಣ, ಸಮಾರೋಪ ಕೂಡ ಇರುವುದಿಲ್ಲ. ಕಾಡು, ಕಡಲುಗಳ್ಳರಿಂದ ರಕ್ಷಿಸು ಎಂದು ಸಮುದ್ರ ದೇವರಿಗೆ ಮೊರೆಯಿಡುವುದು ಇದರ ವಿಶೇಷ.

ತಾರ್ಲೆ ನೃತ್ಯದ ಮುಖೇನ ಉದ್ಘಾಟನೆ
ಪರಿಸರ ಸಮ್ಮೇಳನದ ಉದ್ಘಾಟನೆಯು ವಿಶಿಷ್ಟ ರೀತಿಯಲ್ಲಿ ನಡೆಯಲಿದೆ. ಟ್ರೀ ಪಾರ್ಕ್‌ನಲ್ಲಿ ನೆರೆದವರೆಲ್ಲರೂ ಬೆಳಗ್ಗೆ 9.45ಕ್ಕೆ ಜಾನಪದ ಸಾಧಕಿ, ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮ ಗೌಡ ಅವರ ಜತೆ ಹಾಲಕ್ಕಿ ಜನಾಂಗದ “ತಾರ್ಲೆ’ ನೃತ್ಯಕ್ಕೆ ಹೆಜ್ಜೆ ಹಾಕಲಿದ್ದಾರೆ. ಈ ಮುಖೇನ ಕಾರ್ಯಕ್ರಮ ಉದ್ಘಾಟನೆಗೊಳ್ಳುತ್ತದೆ.

ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ
ಬೀದಿ ಹೋರಾಟಕ್ಕಿಂತ ಕಾನೂನು ಹೋರಾಟದಲ್ಲಿ ಪರಿಹಾರ ಸಿಗಬೇಕು ಎನ್ನುವುದು ಈ ಸಮ್ಮೇಳನದ ಒಂದು ಪ್ರಮುಖ ವಿಷಯ. ಪರಿಸರಕ್ಕೆ ಪೆಟ್ಟು ಬೀಳುವಂತಹ ರಾಜ್ಯ, ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಸಮ್ಮೇಳನದಲ್ಲಿ ಚರ್ಚೆ ನಡೆಯಲಿದೆ. ಸಮ್ಮೇಳನದಲ್ಲಿ ನಡೆದ ಚರ್ಚೆ, ನಿರ್ಧಾರಗಳನ್ನು ಮುಂದಿನ ದಿನಗಳಲ್ಲಿ ಫಾಲೋಅಪ್‌ ಮಾಡಲಾಗುವುದು.
– ದಿನೇಶ್‌ ಹೊಳ್ಳ, , ಪರಿಸರವಾದಿ

ತಯಾರಿ ನಡೆಯುತ್ತಿದೆ
ರಾಜ್ಯ ಮಟ್ಟದ ಪರಿಸರ ಸಮ್ಮೇಳನಕ್ಕೆ ಈಗಾಗಲೇ ತಯಾರಿಗಳು ನಡೆಯುತ್ತಿವೆ. ರಾಜ್ಯದ ಎಲ್ಲ ಶಾಸಕರು, ಜಿಲ್ಲಾಧಿಕಾರಿ, ಪೊಲೀಸ್‌ ಠಾಣೆ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಸಹಿತ ಅಧಿಕಾರಿಗಳಿಗೆಂದು ಸುಮಾರು 1,500 ಆಮಂತ್ರಣ ಪತ್ರಿಕೆ ಕಳುಹಿಸಲಾಗಿದೆ.
– ಶಶಿಧರ ಶೆಟ್ಟಿ,ಎನ್‌ಇಸಿಎಫ್‌ ಪ್ರಧಾನ ಕಾರ್ಯದರ್ಶಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.