ಚಾರಿತ್ರಿಕ ದಾಖಲೆಗಳ ಉಪಯೋಗದ ಅರಿವು ಮೂಡಿಸಿ: ಡಾ| ವಂಶಿಕೃಷ್ಣ


Team Udayavani, Apr 27, 2018, 10:38 AM IST

27-April-5.jpg

ಮಹಾನಗರ : ವಿದ್ಯಾರ್ಥಿಗಳಿಗೆ ನಮ್ಮ ದೇಶದ ಸಂಸ್ಕೃತಿ ಬಗ್ಗೆ ಪೂರ್ಣ ಪ್ರಮಾಣದ ಅರಿವು ಇಲ್ಲದೇ ಇರುವುದರಿಂದ ಚಾರಿತ್ರಿಕ ದಾಖಲೆಗಳ ಉಪಯೋಗದ ಬಗ್ಗೆ ಅರಿವು ಮೂಡಿಸಬೇಕು ಎಂದು ಪಲಿಮಾರು ತತ್ವ ಸಂಶೋಧನ ಕೇಂದ್ರದ ನಿರ್ದೇಶಕ ಡಾ| ವಂಶಿಕೃಷ್ಣ ಆಚಾರ್ಯ ಅಭಿಪ್ರಾಯಪಟ್ಟರು.

ಮಂಗಳೂರಿನ ರಥಬೀದಿಯ ಡಾ| ಪಿ.ದಯಾನಂದ ಪೈ, ಪಿ.ಸತೀಶ್‌ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ದಶಮಾನೋತ್ಸವದ ಅಂಗವಾಗಿ ಕಾಲೇಜಿನ ಇತಿಹಾಸ ವಿಭಾಗ, ಐಕ್ಯೂಎಸಿ, ವಿಭಾಗೀಯ ಪತ್ರಾಗಾರ ಕಚೇರಿ ಮೈ ಮೈಸೂರು, ಮಂಗಳೂರು ವಿವಿ ಇತಿಹಾಸ ಪ್ರಾಧ್ಯಾಪಕರ ಸಂಘ (ಮಾನುಷ)ಇದರ ಜಂಟಿ ಆಶ್ರಯದಲ್ಲಿ ‘ಚಾರಿತ್ರಿಕ ದಾಖಲೆಗಳ ಮಹತ್ವ ಅದರ ಅರಿವು ‘ವಿಷಯದ ಕುರಿತು ಚರಿತ್ರೆಯ ವಿದ್ಯಾರ್ಥಿಗಳಿಗೆ ಮತ್ತು ಇತಿಹಾಸ ಪ್ರಾಧ್ಯಾಪಕರುಗಳಿಗೆ ಉಡುಪಿಯ ನಿರ್ಮಿತಿ ಕೇಂದ್ರದ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ವಿಚಾರ ಸಂಕಿರಣದ ಸಮಾರೋಪ ಭಾಷಣ ನೆರವೇರಿಸಿ ಅವರು ಮಾತನಾಡಿದರು.

ದೇಶದ ಸಂಸ್ಕೃತಿಯನ್ನು ತಿಳಿಸುವ ಗ್ರಂಥಗಳು ತಾಡವೊಲೆ ಕಡತಗಳ ರೂಪದಲ್ಲಿದ್ದು, ಅವುಗಳ ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಗ್ರಾಮೀಣ ಪ್ರದೇಶದಲ್ಲಿ ನಿಜವಾದ ಸಂಪತ್ತುಗಳಿದ್ದು, ಮಠ-ಮಂದಿರಗಳಲ್ಲಿ ದಾಖಲೆಗಳು ಇನ್ನು ಉಳಿದಿದೆ. ವಿದ್ಯಾರ್ಥಿಗಳು ತಮ್ಮ ಸ್ಥಾನದಲ್ಲಿ ಇಂತಹ ದಾಖಲೆಗಳು ಸಿಕ್ಕಾಗ ಅದನ್ನು ಸಂರಕ್ಷಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.

ರಥಬೀದಿ ಸರಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಜ ಶೇಖರ ಹೆಬ್ಟಾರ್‌ ಅಧ್ಯಕ್ಷತೆ ವಹಿಸಿ, ಬದುಕು ಇತಿಹಾಸವಾಗಬೇಕು, ವಿದ್ಯಾರ್ಥಿಗಳು ಸಂಶೋಧನೆಗೆ ಒತ್ತು ನೀಡಬೇಕು ಎಂದರು.

ಮುಖ್ಯ ಅತಿಥಿಗಳಾಗಿ ನಿರ್ಮಿತ ಕೇಂದ್ರ ಯೋಜನಾ ನಿರ್ದೇಶಕ ಅರುಣ್‌ ಕುಮಾರ್‌, ಪ್ರಾಜೆಕ್ಟ್ ಇಂಜಿನಿಯರ್‌ ಚೇತನ್‌, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ| ಬಾಲಕೃಷ್ಣ ಹೆಗ್ಡೆ, ಅಜ್ಜರಕಾಡು ಸರಕಾರಿ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ| ಭಾಸ್ಕರ ಶೆಟ್ಟಿ ಭಾಗವಹಿಸಿದ್ದರು. 

ಮಾನುಷದ ಅಧ್ಯಕ್ಷ ಡಾ| ತಾರಾ ರಾವ್‌ ಉಪಸ್ಥಿತಿಯಲ್ಲಿ ವಿವಿಧ ಕಾಲೇಜಿ ನಿಂದ ಆಗಮಿಸಿದ ವಿದ್ಯಾರ್ಥಿಗಳು ಪ್ರಬಂಧಗಳನ್ನು ಮಂಡಿಸಿದರು. ಮಾನುಷದ ಕಾರ್ಯದರ್ಶಿ ಡಾ| ಗಣಪತಿ ಗೌಡ ಸ್ವಾಗತಿಸಿದರು. ವಿಚಾರ ಸಂಕಿರಣದ ಸಂಯೋಜಕ ಡಾ| ನವೀನ್‌ ಎನ್‌.ಕೊಣಾಜೆ ವಂದಿಸಿದರು. ರಥಬೀದಿ ವಿದ್ಯಾರ್ಥಿನಿ ಪೂರ್ಣಿಮಾ ನಿರೂಪಿಸಿದರು.

ವಿಚಾರಗೋಷ್ಠಿ
ವಿಚಾರಸಂಕಿರಣದ ಪ್ರಥಮ ಅವಧಿಯಲ್ಲಿ ಪತ್ರಾಗಾರದ ವೀಕ್ಷಣೆಯನ್ನು ಡಾ| ಮೋಹಿತ್‌ ಸುವರ್ಣ ಅವರ ನೇತೃತ್ವದಲ್ಲಿ ಏರ್ಪಡಿಸಲಾಯಿತು. ಎರಡನೇ ಗೋಷ್ಠಿಯಲ್ಲಿ ಡಾ| ಹರೀಶ್‌ ಪೈ ಅವರು ಮಣಿಪಾಲದ ಪಾರಂಪರಿಕ ಕಲಾಗ್ರಾಮ ಬಗ್ಗೆ ಪ್ರಾತ್ಯಕ್ಷಿಕತೆ ನಡೆಸಿಕೊಟ್ಟರು. ಮೂರನೇ ಗೋಷ್ಠಿಯಲ್ಲಿ ಡಾ| ಗಣಪತಿ ಗೌಡ ಚಾರಿತ್ರಿಕ ದಾಖಲೆಗಳನ್ನು ಜನಸಾಮಾನ್ಯರು ಅರಿವಿಲ್ಲದೇ ಹೇಗೆ ವಿರೂಪಗೊಳಿಸುತ್ತಾರೆ ಮತ್ತು ಅವಜ್ಞೆಗೆ ಒಳಗಾಗುವುದನ್ನು ಉದಾಹರಣೆ ಸಹಿತ ವಿವರಿಸಿದರು.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.