5 ಟ್ರಿಲಿಯನ್‌ ಆರ್ಥಿಕತೆಯಲ್ಲಿ ರಾಜ್ಯದ ಪಾಲು ಗಣನೀಯ: ಕಪಿಲ್‌ ಮೋಹನ್‌


Team Udayavani, Oct 21, 2022, 4:04 AM IST

5 ಟ್ರಿಲಿಯನ್‌ ಆರ್ಥಿಕತೆಯಲ್ಲಿ ರಾಜ್ಯದ ಪಾಲು ಗಣನೀಯ: ಕಪಿಲ್‌ ಮೋಹನ್‌

ಮಂಗಳೂರು: ಕಳೆದ ವರ್ಷ ಜಾರಿಗೆ ಬಂದಿರುವ ಪ್ರಧಾನ ಮಂತ್ರಿ ಗತಿಶಕ್ತಿ ಯೋಜನೆ ಮಹಾತ್ವಾಕಾಂಕ್ಷೆಯದಾಗಿದ್ದು, ಭಾರತವನ್ನು 5 ಟ್ರಿಲಿಯನ್‌ ಆರ್ಥಿಕತೆಯಾಗಿ ರೂಪಿಸುವ ಉದ್ದೇಶ ಹೊಂದಿದೆ. ಅದರಲ್ಲಿ ಕನಿಷ್ಠ 1 ಟ್ರಿಲಿಯನ್‌ ಆರ್ಥಿಕತೆಯ ಕೊಡುಗೆ ನಮ್ಮದಾಗಬೇಕೆಂದು ಈಗಾಗಲೇ ನಮ್ಮ ಮುಖ್ಯಮಂತ್ರಿಯವರು ಹೇಳಿದ್ದು, ಆ ನಿಟ್ಟಿನಲ್ಲಿ ಎಲ್ಲ ಯತ್ನ ಮಾಡಲಾಗುವುದು ಎಂದು ಕರ್ನಾಟಕ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕಪಿಲ್‌ ಮೋಹನ್‌ ಹೇಳಿದ್ದಾರೆ.

ನವಮಂಗಳೂರು ಬಂದರು ಪ್ರಾಧಿಕಾರ, ಮರ್ಮಗೋವಾ ಹಾಗೂ ಕೊಚ್ಚಿ ಬಂದರು ಪ್ರಾಧಿಕಾರಗಳ ಸಹಯೋಗದಲ್ಲಿ ಅ. 20, 21ರಂದು ಹಮ್ಮಿಕೊಂಡ ಪಿಎಂ ಗತಿ ಶಕ್ತಿ ಮಲ್ಟಿಮೋಡಲ್‌ ಮೆರಿಟೈಂ ರೀಜನಲ್‌ ಸಮ್ಮಿಟ್‌-2022 ಉದ್ಘಾಟನ ಸಮಾರಂಭದಲ್ಲಿ ಗುರುವಾರ ಅವರು ಅತಿಥಿಯಾಗಿ ವರ್ಚುವಲ್‌ ಮೂಲಕ ಪಾಲ್ಗೊಂಡು ಮಾತನಾಡಿದರು.

ಗತಿ ಶಕ್ತಿ ಯೋಜನೆಯು ಕರಾವಳಿಯ ಭವಿಷ್ಯದ ಅಭಿವೃದ್ಧಿಗೊಂದು ನೀಲ ನಕ್ಷೆಯಂತಿದೆ. ಸಾಗರೋತ್ತರ ವಲಯದಲ್ಲಿ ಆಗಬಹುದಾದ ಬೆಳವಣಿಗೆಗಳಿಗೆ ನಿರ್ಧಾರಕ ಆಂಶವಾಗಲಿದೆ ಎನ್ನುವುದನ್ನು ನಿರ್ಧರಿಸಲಿದೆ ಎಂದು ಅವರು ವಿವರಿಸಿದರು.

ಇಸ್ರೋ ನೆರವು :

ಮುಖ್ಯ ಅತಿಥಿಯಾಗಿದ್ದ ಕೇಂದ್ರ ಬಂದರು, ನೌಕಾಯಾನ ಸಚಿವಾಲಯದ ಮಲ್ಟಿಮೋಡಲ್‌ ಕನೆಕ್ಟಿವಿಟಿ ಕಮಿಟಿ ಚೇರ್‌ಮನ್‌ ವಿನೀತ್‌ ಕುಮಾರ್‌ ಮಾತನಾಡಿ, ಹಲವು ಇಲಾಖೆಗಳ ಸಮನ್ವಯದ ಉದ್ದೇಶದಿಂದ ಮಾಹಿತಿ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗಿದೆ. ಇಸ್ರೋ ನೆರವು ಪಡೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.

ಒಂದು ವರ್ಷದ ಹಿಂದೆ ಯೋಜನೆ ಜಾರಿಗೊಂಡಿದೆ. ಇನ್ನೂ ಎಲ್ಲ ಇಲಾಖೆಗಳು ಅದರಲ್ಲಿ ಪೂರ್ಣವಾಗಿ ತಯಾರಾಗಿಲ್ಲ, ಹಾಗಿರುವಾಗ ಎಲ್ಲವನ್ನೂ ಒಟ್ಟು ಸೇರಿಸಿಕೊಂಡು ಸಮನ್ವಯದಿಂದ ಕೆಲಸ ಮಾಡಲು ಬೇಕಾದ ಸವಾಲು ನಮ್ಮ ಮುಂದಿದೆ. ಮುಂದೆ ಗತಿಶಕ್ತಿ ಪೋರ್ಟಲ್‌ ಬಳಸಿಕೊಂಡು ಬಂದರುಗಳ ವಿವಿಧ ಯೋಜನೆಗಳ ಅನುಮೋದನೆಗಳನ್ನು ಸುಲಭವಾಗಿ ಪಡೆಯುವ ಸಾಧ್ಯತೆಯೂ ಇದೆ ಎಂದರು.

ನವಮಂಗಳೂರು ಬಂದರು ಪ್ರಾಧಿಕಾರದ ಅಧ್ಯಕ್ಷ ಡಾ| ಎ.ವಿ. ರಮಣ ಮಾತನಾಡಿ, ಪಿಎಂ ಗತಿಶಕ್ತಿ ಯೋಜನೆಯಡಿ ನೌಕಾಯಾನ ಮತ್ತು ಬಂದರು ಸಚಿವಾಲಯದಡಿ 101 ಯೋಜನೆಗಳನ್ನು 2024ರೊಳಗೆ ಪೂರ್ಣಗೊಳಿಸಬೇಕಾಗಿದೆ. ಇದರಲ್ಲಿ ನವಮಂಗಳೂರು ಬಂದರು ವ್ಯಾಪ್ತಿಯ ಬರ್ತ್‌ ನಂ. 14, ಬರ್ತ್‌ ನಂ. 17 ಮತ್ತು ಕುಳಾç ಮೀನುಗಾರಿಕ ಜೆಟ್ಟಿ ಕೂಡ ಸೇರಿಕೊಂಡಿದೆ. ಗತಿ ಶಕ್ತಿ ಯೋಜನೆಯ ಮೂಲಕ ನಮ್ಮ ಕೈಗಾರಿಕಾ ಸುಧಾರಣೆಯಾಗಿ ಚೀನ, ತೈವಾನ್‌ಗಳಿಗೆ ಸ್ಪರ್ಧೆಯೊಡ್ಡುವ ಗುರಿ ಇರಿಸಿಕೊಳ್ಳಲಾಗಿದೆ ಎಂದರು.

ಕೊಚ್ಚಿ ಪೋರ್ಟ್‌ ಉಪಾಧ್ಯಕ್ಷ ವಿಕಾಸ್‌ ನಲ್ವಾರ್‌, ಮರ್ಮಗೊವಾ ಪೋರ್ಟ್‌ ಉಪಾಧ್ಯಕ್ಷ ಜಿ.ಪಿ. ರೈ, ಎನ್‌ಎಂಪಿಎ ಉಪಾಧ್ಯಕ್ಷ ಕೆ.ಜಿ. ನಾಥ್‌ ಹಾಜರಿದ್ದರು.

ಗೇಮ್‌ ಚೇಂಜರ್‌’ :

ರಾಜ್ಯದಲ್ಲಿರುವ ಕಿರು ಬಂದರುಗಳ ಸುಧಾರಣೆ, ಒಳನಾಡಿನೊಂದಿಗೆ ಸಂಪರ್ಕ ಉತ್ತಮಗೊಳಿಸುವ ಕೆಲಸ ಆಗಬೇಕಿದೆ. 14 ಪ್ರಮುಖ ರಸ್ತೆಗಳ ಸಂಪರ್ಕ ಆಗಬೇಕಿದೆ. ಅದರಲ್ಲಿ 9 ಇನ್ನೂ ಡಿಪಿಆರ್‌ ಹಂತದಲ್ಲಿವೆ. 8 ರೈಲು ಯೋಜನೆಗಳು ಪ್ರಕಟಗೊಂಡಿದ್ದು, 6 ಇನ್ನೂ ಪ್ರಿ ಡಿಪಿಆರ್‌ ಹಂತದಲ್ಲೇ ಇವೆ. ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗದ ವಿಚಾರದಲ್ಲಿ ಆಶಾಭಾವ ಇದ್ದು, ಅದು ಜಾರಿಯಾದರೆ “ಗೇಮ್‌ ಚೇಂಜರ್‌’ ಎನ್ನಿಸಿಕೊಳ್ಳಲಿದೆ, ಕರಾವಳಿಯನ್ನು ಖನಿಜ ಸಂಪದ್ಭರಿತವಾದ ಉತ್ತರ ಕರ್ನಾಟಕದೊಂದಿಗೆ ಬೆಸೆಯಲಿದೆ ಎಂದು ಕಪಿಲ್‌ ಮೋಹನ್‌ ಹೇಳಿದರು.

ಟಾಪ್ ನ್ಯೂಸ್

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.