ದಕ್ಷಿಣ ಕನ್ನಡ: 15 ತಿಂಗಳಲ್ಲಿ 9,573 ನಾಯಿ ಕಡಿತ ಪ್ರಕರಣ


Team Udayavani, Apr 1, 2021, 3:20 AM IST

ದಕ್ಷಿಣ ಕನ್ನಡ: 15 ತಿಂಗಳಲ್ಲಿ  9,573 ನಾಯಿ ಕಡಿತ ಪ್ರಕರಣ

ಮಹಾನಗರ: ದ.ಕ. ಜಿಲ್ಲೆಯಲ್ಲಿ 15 ತಿಂಗಳಲ್ಲಿ 9,573 ನಾಯಿ ಕಡಿತ ಪ್ರಕರಣಗಳು ಆಗಿವೆ. ಆದರೆ ಈ ಪೈಕಿ ಯಾವುದೇ ಹುಚ್ಚು ನಾಯಿ ಕಡಿತದ ಪ್ರಕರಣ ವರದಿಯಾಗಿಲ್ಲ ಎನ್ನುವುದು ಸಮಾಧಾನದ ಸಂಗತಿ.

ಪಶು ಸಂಗೋಪನ ಇಲಾಖೆಯ ಅಧಿಕಾರಿಗಳು ಸಾಕು ನಾಯಿಗಳಿಗೆ ವ್ಯಾಪಕವಾಗಿ ರೇಬಿಸ್‌ ನಿರೋಧಕ ಲಸಿಕೆ ಹಾಕುವ ಕಾರ್ಯಕ್ರಮ ಜಿಲ್ಲಾದ್ಯಂತ ಹಮ್ಮಿಕೊಂಡಿದೆ. ಆದರೆ ಹಾಗೆಂದು ಜಿಲ್ಲೆಯಲ್ಲಿ ಹುಚ್ಚು ನಾಯಿಗಳೇ ಇಲ್ಲ ಅಂದಲ್ಲ; ಕಡಬದಲ್ಲಿ ಹುಚ್ಚು ನಾಯಿ ರೋಗದಿಂದ ಈ ವರ್ಷದಲ್ಲಿ ಎರಡು ದನಗಳು ಸಾವನ್ನಪ್ಪಿವೆ. ಈ ದನಗಳಿಗೆ ಕಡಿದ ಹುಚ್ಚು ನಾಯಿಗಳು ಯಾವುದೆಂದು ಪತ್ತೆಯಾಗಿಲ್ಲ.

ರೇಬಿಸ್‌ ನಿರೋಧಕ ಲಸಿಕೆ ಅಭಿಯಾನದಡಿ ಈ ವರ್ಷ ಜಿಲ್ಲೆಯಲ್ಲಿ 15,000 ಸಾಕು ನಾಯಿಗಳಿಗೆ ರೇಬಿಸ್‌ (ನಾಯಿ ಹುಚ್ಚು) ನಿರೋಧಕ ಲಸಿಕೆ ಹಾಕಲಾಗಿದೆ ಎಂದು ಪಶು ಸಂಗೋಪನ ಇಲಾಖೆ ಜಿಲ್ಲಾ ಕಚೇರಿಯ ಅಂಕಿ-ಅಂಶ ಹೇಳುತ್ತಿದೆ. 2030ರ ವೇಳೆಗೆ ರೇಬಿಸ್‌ ಮುಕ್ತ ದೇಶವನ್ನಾಗಿಸುವ ಗುರಿಯನ್ನು ಕೇಂದ್ರ ಸರಕಾರ ಹೊಂದಿದೆ. ಅದರನ್ವಯ ಪಶು ಸಂಗೋಪನ ಇಲಾಖೆಯ ದ.ಕ. ಜಿಲ್ಲಾ ಉಪ ನಿರ್ದೇಶಕರು ಈ ಕಾರ್ಯಕ್ರಮವನ್ನು ಆದ್ಯತೆಯಾಗಿ ಪರಿಗಣಿಸಿ ಜಿ.ಪಂ. ಅನುದಾನದಿಂದ ಪ್ರತಿ ತಾಲೂಕಿನಲ್ಲಿ 10 ಶಿಬಿರ ನಡೆಸುವ ಗುರಿ ಇರಿಸಿ ಕಾರ್ಯೋನ್ಮುಖರಾಗಿದ್ದು, ತಾಲೂಕಿಗೆ 3,000ದಂತೆ 5 ತಾಲೂಕುಗಳಲ್ಲಿ ಒಟ್ಟು 15,000 ನಾಯಿಗಳಿಗೆ ಲಸಿಕೆ ಹಾಕಲಾಗಿದೆ. 5 ತಾಲೂಕುಗಳಲ್ಲಿ ಒಟ್ಟು 50 ಕಡೆ 2-3 ತಂಡಗಳನ್ನು ರಚಿಸಿ ಆಯಾ ಗ್ರಾಮಗಳ ಎಲ್ಲ ಶ್ವಾನಗಳಿಗೆ ರೇಬಿಸ್‌ ನಿರೋಧಕ ಲಸಿಕೆ ಹಾಕುವ ಕಾರ್ಯ ನಡೆದಿದೆ.

2021ರಲ್ಲಿ ನಾಯಿ ಕಡಿತ 1,924 ಪ್ರಕರಣ  :

ಜಿಲ್ಲೆಯಲ್ಲಿ 2020, 2021ರ ಮಾರ್ಚ್‌ ವರೆಗಿನ 15 ತಿಂಗಳುಗಳಲ್ಲಿ 9,573 ನಾಯಿ ಕಡಿತ ಪ್ರಕರಣಗಳು ವರದಿಯಾಗಿವೆ. 2020ರಲ್ಲಿ 7,649 ಪ್ರಕರಣ, 2021ರಲ್ಲಿ ಇದುವರೆಗೆ (ಜನವರಿಯಿಂದ ಮಾರ್ಚ್‌ 24ರ ತನಕ) 1,924 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಸಾಕು ನಾಯಿ ಕಡಿತದ ಪ್ರಕರಣಗಳೇ ಅಧಿಕ. ಈ ಪೈಕಿ ಒಂದೇ ಒಂದು ಹುಚ್ಚು ನಾಯಿ ಕಡಿತದ ಪ್ರಕರಣ ಇದ್ದ ಬಗ್ಗೆ ವರದಿಯಾಗಿಲ್ಲ.

ಜಿಲ್ಲೆಯಲ್ಲಿ   2017ರಲ್ಲಿ  ಓರ್ವ, 2018ರಲ್ಲಿ ಓರ್ವ ವ್ಯಕ್ತಿ ರೇಬಿಸ್‌ಗೆ ಬಲಿಯಾ ಗಿದ್ದರು. ಆ ಬಳಿಕ ಇದುವರೆಗೆ ಎಲ್ಲಿಯೂ ಹುಚ್ಚು ನಾಯಿ ಕಡಿತದಿಂದ ಮನುಷ್ಯರು ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಇನ್ನು ಕಡಬದ ಪ್ರಕರಣದಲ್ಲಿ ದನಗಳನ್ನು ಗುಡ್ಡ ಅಥವಾ ಕಾಡಿಗೆ ಮೇಯಲು ಬಿಟ್ಟ ಸಂದರ್ಭ ಹುಚ್ಚು ನಾಯಿ ಕಚ್ಚಿ ಈ ರೋಗ ಬಂದಿರುವ ಸಾಧ್ಯತೆ ಇದೆ. ಹಾಗಾಗಿ ಹುಚ್ಚು ನಾಯಿ ರೋಗ ಜಿಲ್ಲೆಯಲ್ಲಿ ಇದೆ ಎನ್ನುವುದು ಖಾತರಿ. ರೇಬಿಸ್‌ನಿಂದ ಸಾಕು ನಾಯಿಗಳು, ಬೀದಿ ನಾಯಿಗಳು ಸತ್ತಿರುವ ಸಾಧ್ಯತೆ ಇದ್ದರೂ ಈ ಬಗ್ಗೆ ಅಂಕಿ ಅಂಶಗಳು ಲಭ್ಯವಿಲ್ಲ.

ರೇಬಿಸ್‌ ನಿರೋಧಕ ಲಸಿಕೆ ಹಾಕುವ ಸಂಘಟಿತ ಪ್ರಯತ್ನ ಇದುವರೆಗೆ ನಡೆದಿರಲಿಲ್ಲ; ಈ ವರ್ಷ (2020-21) ಅದು ನಡೆದಿದೆ. ನಾಯಿ ಸಾಕುವವರ ಮನೆ ಬಾಗಿಲಿಗೆ ತೆರಳಿ ಲಸಿಕೆ ಹಾಕಲಾಗಿದೆ. ಜಿ.ಪಂ.ನ ಅನುದಾನ ಪಡೆದು ಪ್ರತಿ ತಾಲೂಕಿನಲ್ಲಿ 10 ಕಡೆ ಶಿಬಿರಗಳನ್ನು ನಡೆಸಿ ಸಾಕು ನಾಯಿಗಳಿಗೆ ಲಸಿಕೆ ಹಾಕಲಾಗಿದೆ.  -ಡಾ| ಪ್ರಸನ್ನ ಕುಮಾರ್‌ ಟಿ.ಜಿ.,  ಉಪ ನಿರ್ದೇಶಕರು, ಪಶು ಸಂಗೋಪನಾ ಇಲಾಖೆ, ದ.ಕ.

 

-ಹಿಲರಿ ಕ್ರಾಸ್ತಾ

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರು

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.