ಲಕ್ಷ ದೀಪೋತ್ಸವದಲ್ಲಿ ಗಮನ ಸೆಳೆಯುತ್ತಿದೆ ಪ್ಲಾಸ್ಟಿಕ್ ವಿರುದ್ಧ ಸಮರ ಸಾರುವ ಬೀದಿ ನಾಟಕ


Team Udayavani, Nov 25, 2019, 12:20 AM IST

Street-Play-730

ಅಕ್ಕಪಕ್ಕದ ಎರಡು ಊರು ಆ ಎರಡೂ ಊರಿನಲ್ಲಿ ವಿಪರೀತ ಎನ್ನುವಂತಹ ಕಸ ವಿಲೇವಾರಿ ಸಮಸ್ಯೆ. ಒಂದು ದಿನ ಎರಡೂ ಊರಿನ ಜನರೆಲ್ಲಾ ಭೇಟಿಯಾಗಿ ಇದೇ ಸಮಸ್ಯೆಯ ಬಗ್ಗೆ ಚರ್ಚಿಸುತ್ತಾರೆ. ಪ್ಲಾಸ್ಟಿಕ್ ಎಂಬ ಮಾರಿಯನ್ನು ಹೊಡೆದೋಡಿಸಲು ಪಣತೊಟ್ಟಾಗ, ಅದೇ ಪ್ಲಾಸ್ಟಿಕ್ ಅವರನ್ನು ಇನ್ನಿಲ್ಲದಂತೆ ಕಾಡುತ್ತದೆ. ಇದರಿಂದ ಅವರು ಹೇಗೆ ಪಾರಾಗುತ್ತಾರೆ?

ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕಾದರೆ ನೀವೊಮ್ಮೆ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಬೀದಿ ನಾಟಕವನ್ನೊಮ್ಮೆ ನೋಡಬೇಕು. ಅದಕ್ಕಾಗಿ ಒಮ್ಮೆ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವದಲ್ಲಿ ಪಾಲ್ಗೊಳ್ಳಬೇಕು. ಪ್ಲಾಸ್ಟಿಕ್ ಎಂಬ ಬೃಹದ್ ರಾಕ್ಷಸ ಹಿಡಿತದಿಂದ ಜೀವಸಮೂಹ ವಿಮುಕ್ತಗೊಳ್ಳುವ ಮಾರ್ಗ ಗೊತ್ತಾಗುತ್ತದೆ.

ಪ್ಲಾಸ್ಟಿಕ್ ಈಗ ಕೇವಲ ಒಂದು ನಿರ್ದಿಷ್ಟ ಊರಿಗೆ ಮಾತ್ರ ಸೀಮಿತವಾಗಿ ಉಳಿದಿಲ್ಲ. ಅದು ಈಗ ಇಡೀ ಜಗತ್ತನ್ನು ಕಾಡುತ್ತಿದೆ. ಅದನ್ನು ಬಗ್ಗು ಬಡಿಯು ಅಸ್ತ್ರವೂ ನಮ್ಮಲ್ಲೇ ಇದೆ ಎಂಬುದನ್ನು ತಿಳಿಸುವ ಪ್ರಯತ್ನ ಈ ಬೀದಿ ನಾಟಕದ್ದು. ಇದು ಯಶಸ್ವಿಯಾಗಿ ಪ್ರದರ್ಶನ ಕಂಡಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವದಲ್ಲಿ!

ಪ್ಲಾಸ್ಟಿಕ್ ಸಮಸ್ಯೆಯಿಂದ ಗ್ರಾಮಸ್ಥರು ಬಳಲುತ್ತಿರುವಾಗ ಕಸ ವಿಲೇವಾರಿ, ಸ್ವಚ್ಛತೆಯ ಕುರಿತು ಅರಿವಿನ ಮಾರ್ಗವನ್ನು ಜಾಗೃತ ವ್ಯಕ್ತಿಯೊಬ್ಬರು ತಿಳಿಸಿಕೊಡುತ್ತಾರೆ. ಈ ಪ್ರಸಂಗವನ್ನು ಮನೋಜ್ಞವಾಗಿ ಈ ಬೀದಿನಾಟಕ ಬಿಂಬಿಸಿದೆ.


ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವ ಎಂದರೆ ಜನಸಾಗರವೇ ಸೇರಿರುತ್ತದೆ. ಅಂದ ಮೇಲೆ ಸ್ವಚ್ಛತೆ ಕಡೆಗೆ ಗಮನ ನೀಡಲೇಬೇಕು. ಒಂದಿಷ್ಟು ಜನರನ್ನು ನೇಮಿಸಿ ಗಮನ ನೀಡಿ ಎನ್ನುವುದರ ಬದಲಾಗಿ ಜನರಲ್ಲೇ ಜಾಗೃತಿ ಮೂಡಿಸಿದರೆ ಹೇಗೆ? ಈ ಭಿನ್ನ ಆಲೋಚನೆ ಹೊಳೆದಿದ್ದೇ ತಡ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀ. ಹೆಗ್ಗಡೆ ಅವರ ಪರಿಕಲ್ಪನೆಯಲ್ಲಿ ಬೀದಿನಾಟಕವೊಂದು ರೂಪುಗೊಂಡಿತು. ಅದುವೇ ’ನಾವು ಮತ್ತು ನಮ್ಮ ಪರಿಸರ’.

ಲಕ್ಷ ದೀಪಗಳ ಸಂಗಮಕ್ಕೆ ಇನ್ನಷ್ಟು ಮೆರುಗು ತುಂಬಲು ದಿನಾಂಕ 22ರಿಂದ 26ರವರೆಗೆ ’ನಾವು ಮತ್ತು ನಮ್ಮ ಪರಿಸರ’ ಬೀದಿನಾಟಕವನ್ನು ಎಸ್.ಕೆ.ಡಿ.ಆರ್.ಡಿ.ಪಿ.ಯ ಕಲಾವಿದರ ತಂಡ ಪ್ರದರ್ಶಿಸಲಿದೆ. ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಇರುವ ’ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ’ಯ ಕಾರ್ಯಕರ್ತರೇ ಪಾತ್ರಧಾರಿಗಳು. 15 ಜನರ ಈ ತಂಡ ಪ್ಲಾಸ್ಟಿಕ್ ನಿರ್ಮೂಲನೆ ಹಾಗೂ ಪರಿಸರ ಸಂರಕ್ಷಣೆ ಕುರಿತಾಗಿ ಜಾಗೃತಿ ಮೂಡಿಸಲಿದ್ದಾರೆ. ಗ್ರಾಮಾಭಿವೃದ್ಧಿ ಯೋಜನೆಯ ಶಿಕ್ಷಕ ಚಂದ್ರಹಾಸ ನಾಟಕ ರಚಿಸಿ ನಿರ್ದೇಶಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಎಲ್ಲಾ ಕ್ಷೇತ್ರಗಳಿಂದ ಒಬ್ಬೊಬ್ಬ ಸಿಬ್ಬಂದಿಯನ್ನು ಆಯ್ಕೆಮಾಡಿ, ಪುಟ್ಟ ತಂಡ ಕಟ್ಟಿಕೊಂಡು ಪರಿಸರ ರಕ್ಷಣೆಗೆ ತಮ್ಮ ಅಳಿಲು ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಪ್ಲಾಸ್ಟಿಕ್‌ನಿಂದ ಆಗುವ ದುಷ್ಪರಿಣಾಮ, ಭೂಮಿಗೆ ಆಗುವ ಹಾನಿಗಳು, ಹಾಗೂ ಮಾನವರ ಜೀವಕ್ಕೆ ಆಗುವ ನಷ್ಟಗಳನ್ನು ಸರಳವಾಗಿ ಪ್ರಸ್ತುತಪಡಿಸಿದ್ದಾರೆ.

ನಾಟಕದ ಕಥಾವಸ್ತು ಮಾತ್ರವಲ್ಲ, ನಾಟಕದ ಪರಿಕರವೂ ವಿಶೇಷವಾಗಿದೆ. ಅನುಪಯುಕ್ತ ಪ್ಲಾಸ್ಟಿಕ್ ಬಾಲ್, ಚೊಂಬು, ಇವುಗಳನ್ನೇ ಉಪಯೋಗಿಸಿ, ಕಿರೀಟ, ಹಾರ ಇವುಗಳನ್ನು ತಯಾರಿಸಲಾಗಿತ್ತು. ಇವುಗಳನ್ನು ವಿನ್ಯಾಸ ಮಾಡಿದವರು ಮಹೇಶ್‌ಆಚಾರ್ಯ. ಇವರೂ ಗ್ರಾಮಾಭಿವದ್ಧಿ ಯೋಜನಾ ಸಿಬ್ಬಂದಿ.

ಸಾಂಸ್ಕೃತಿಕ ಕಾರ್ಯಕ್ರಮ, ಧಾರ್ಮಿಕ ಕಾರ್ಯಕ್ರಮ ಯಾವುದೇ ನಡೆಯಲಿ, ಅಲ್ಲಿ ಈ ತಂಡ ಹಾಜರಿದ್ದು ಜನರು ಜವಾಬ್ದಾರಿಮರೆಯದಂತೆ ನೆನಪಿಸುತ್ತದೆ. ಲಕ್ಷದೀಪೋತ್ಸವದ ಅಷ್ಟೂ ದಿನಗಳ ಕಾಲ ಸಂಜೆ 04ರಿಂದ ರಾತ್ರಿ 10 ಗಂಟೆಯವರೆಗೆ ಎಲ್ಲಾ ಕಡೆ ಸಂಚರಿಸಿ, ನಾಟಕದ ಜೊತೆಗೆ ಜಾಥಾ ನಡೆಯಲಿದೆ.

ವರದಿ: ಟಿ. ವರ್ಷಾ ಪ್ರಭು ; ಚಿತ್ರಗಳು: ಶಿವಪ್ರಸಾದ್ ಹಳುವಳ್ಳಿ

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.