ಮೂಲ್ಕಿ: ಹತ್ತು ಚೆಕ್‌ ಪೋಸ್ಟ್‌ಗಳಲ್ಲಿ ಬಿಗಿ ತಪಾಸಣೆ


Team Udayavani, Jul 13, 2017, 2:40 AM IST

Check-Post-12-7.jpg

ಹಳೆಯಂಗಡಿ: ಬಂಟ್ವಾಳದಲ್ಲಿ ನಡೆದ ಕೊಲೆ, ಹಲ್ಲೆ, ಪ್ರತಿಭಟನೆಯ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ 144 ಸೆಕ್ಷನ್‌ ನಿಷೇಧಾಜ್ಞೆ ವಿಧಿಸಲಾಗಿದ್ದು, ಮೂಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲೂ ಹೋಬಳಿಯ ಸುಮಾರು 10 ಕಡೆಗಳಲ್ಲಿ ಚೆಕ್‌ಪೋಸ್ಟ್‌ ನಿರ್ಮಿಸಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಮೂಲ್ಕಿ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಜಿಲ್ಲೆಯ ಗಡಿಭಾಗವಾದ ಬಪ್ಪನಾಡು ಸೇತುವೆ, ಕೊಲ್ನಾಡು, ಹಳೆಯಂಗಡಿ, ಕಾರ್ನಾಡು ಗಾಂಧಿ ಮೈದಾನದ ಬಳಿ, ಎಸ್‌. ಕೋಡಿ ಜಂಕ್ಷನ್‌, ಇಂದಿರಾ ನಗರ, ಪಕ್ಷಿಕೆರೆ, ಕಿನ್ನಿಗೋಳಿ ಮತ್ತು ಠಾಣೆಯ ಗಡಿಭಾಗವಾದ ಮೂರು ಕಾವೇರಿ, ಏಳಿಂಜೆ ಪಟ್ಟೆ ಕ್ರಾಸ್‌ನಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಪ್ರತಿಯೊಂದರಲ್ಲೂ ಮೂರರಿಂದ ನಾಲ್ಕು ಮಂದಿ ಪೊಲೀಸ್‌ ಮತ್ತು ಗೃಹ ರಕ್ಷಕ ದಳದ ಸಿಬಂದಿಯನ್ನು ನಿಯೋಜಿಸಲಾಗಿದೆ. ಶಂಕಾಸ್ಪದ ವಾಹನಗಳ ತಪಾಸಣೆ ನಡೆಸಿ, ನೋಂದಾಯಿಸಿಕೊಳ್ಳಲು ಠಾಣೆಯ ಎಎಸ್‌ಐಗಳಿಗೆ ಉಸ್ತುವಾರಿ ನೀಡಲಾಗಿದೆ.

ದ್ವಿಚಕ್ರ ವಾಹನಗಳ ಮೇಲೆ ಕಣ್ಣು
ದಿನದ ಆರಂಭದಲ್ಲಿ ಬೆಳಗ್ಗೆ ಬಪ್ಪನಾಡಿನ ಚೆಕ್‌ಪೋಸ್ಟ್‌ನಲ್ಲಿ ತಪಾಸಣೆ ನಡೆಸಿದರೇ, ಅನಂತರ ಹಳೆಯಂಗಡಿ, ಕೊಲ್ನಾಡಿಗೆ ಸ್ಥಳಾಂತರವಾಗುತ್ತದೆ. ಮಧ್ಯಾಹ್ನದ ಅನಂತರ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ತಪಾಸಣೆ ನಡೆಯುತ್ತದೆ. ಸಂಜೆಯಿಂದ ರಾತ್ರಿಯವರೆಗೆ ನಿರ್ದಿಷ್ಟ ಪಟ್ಟಣ ಪ್ರದೇಶದಲ್ಲಿ ನಿಗಾವಹಿಸಲಾಗುತ್ತಿದೆ. ಎಲ್ಲ ಚೆಕ್‌ಪೋಸ್ಟ್‌ಗಳಲ್ಲಿ ದ್ವಿಚಕ್ರ ವಾಹನಗಳನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ. ದ್ವಿಚಕ್ರ ವಾಹನದ ಸೀಟ್‌ಗಳನ್ನೂ ತೆಗೆದು ಪರೀಕ್ಷಿಸಲಾಗುತ್ತಿದೆ. ಕೆಲವು ವಾಹನ ಸವಾರರು ಜೆರ್ಕಿನ್‌ ತೊಟ್ಟುಕೊಂಡಿದ್ದರೆ ಅದನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಮಾರಕಾಯುಧಗಳಿಗಾಗಿ ಶೋಧ
ಸಂಶಯಾಸ್ಪದರು ತಮ್ಮ ವಾಹನಗಳಲ್ಲಿ ಚಾಕು, ಚೂರಿ, ತಲ್ವಾರ್‌, ದೊಣ್ಣೆ, ಚೈನ್‌ನಂತಹ ಮಾರಕಾಯುಧಗಳು, ಮೆಣಸಿನ ಹುಡಿಗಳು ಇಟ್ಟುಕೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ತಪಾಸಣೆ ನಡೆಸುತ್ತಿದ್ದಾರೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಎಲ್ಲ ಹಲ್ಲೆ ಮತ್ತು ಕೊಲೆ ಪ್ರಕರಣದಲ್ಲಿ ದುಷ್ಕರ್ಮಿಗಳು ಹೆಚ್ಚಾಗಿ ದ್ವಿಚಕ್ರ ವಾಹನಗಳನ್ನೇ ಬಳಸಿದ್ದರು ಮತ್ತು ಇಂಥ ಮಾರಕಾಸ್ತ್ರಗಳೇ ಬಳಕೆಯಾಗಿದ್ದವು. ಹೀಗಾಗಿ ದ್ವಿಚಕ್ರ ವಾಹನ ತಪಾಸಣೆ ನಡೆಸಲಾಗುತ್ತಿದೆ.

ಗ್ರಾಮ ಬೀಟ್‌ಗೂ ಎಚ್ಚರ
ಪ್ರತೀ ಠಾಣೆಯಲ್ಲಿ ಜಾರಿಗೆ ಬಂದಿರುವ ಗ್ರಾಮ ಪೊಲೀಸ್‌ ಬೀಟ್‌ನ ಸಮಿತಿ ಸದಸ್ಯರಿಗೂ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಗ್ರಾಮದಲ್ಲಿ ಸಂಶಯಿತ ಚಟುವಟಿಕೆ ಕಂಡು ಬಂದರೆ ಅಥವಾ ಅಕ್ರಮವಾಗಿ ಕೂಟವನ್ನು ಕಟ್ಟಿಕೊಂಡು ಕಾರ್ಯಪ್ರವೃತ್ತರಾಗಿದ್ದರೆ ಆಯಾ ಗ್ರಾಮ ಬೀಟ್‌ನ ಪೊಲೀಸರಿಗೆ ಮಾಹಿತಿ ನೀಡಲು ಸೂಚಿಸಲಾಗಿದೆ.

ಶಾಂತಿ ಸುವ್ಯವಸ್ಥೆಗೆ ಕ್ರಮ
ಮೂಲ್ಕಿ ಠಾಣಾ ವ್ಯಾಪ್ತಿಯ 10 ಗ್ರಾ.ಪಂ. ಹಾಗೂ ಒಂದು ನಗರ ಪಂಚಾಯತ್‌ನಲ್ಲಿ 10 ಚೆಕ್‌ ಪೋಸ್ಟ್‌ಗಳನ್ನು ಅಳವಡಿಸಿದ್ದು, ಸಿಬಂದಿಯನ್ನು ನಿಯೋಜಿಸಲಾಗಿದೆ. ಕಮಿಷನರೇಟ್‌ ಆದೇಶದಂತೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಮೂಲ್ಕಿಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಕಾಯ್ದುಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.
– ಅನಂತ ಪದ್ಮನಾಭ, ಇನ್‌ಸ್ಪೆಕ್ಟರ್‌, ಮೂಲ್ಕಿ ಠಾಣೆ

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.