ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ
Team Udayavani, May 6, 2021, 4:44 PM IST
ಮಂಗಳೂರು: ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಡಳಿತ ನಿರ್ಧರಿಸಿದೆ.
ಇಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ತುರ್ತು ಕೊವಿಡ್ ನಿರ್ವಹಣಾ ಸಭೆ ನಡೆಯಿತು. ಸಭೆಯಲ್ಲಿ ನಾಳೆ (ಮೇ.7) ಬೆಳಿಗ್ಗೆ 6 ರಿಂದ 9 ರ ತನಕ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಹಾಗೂ ಜನತಾ ಕರ್ಫ್ಯೂವನ್ನು ಕಟ್ಟು ನಿಟ್ಟಾಗಿ ಅನುಷ್ಟಾನ ಮಾಡುವಂತೆ ಸಚಿವರು ಆದೇಶ ನೀಡಿದ್ದಾರೆ.