ಮಂಗಳೂರಿನಲ್ಲಿ ಬಿರುಸಿನ ಮಳೆ; ತಗ್ಗು ಪ್ರದೇಶಗಳು ಜಲಾವೃತ


Team Udayavani, Oct 14, 2021, 5:57 AM IST

ಮಂಗಳೂರಿನಲ್ಲಿ ಬಿರುಸಿನ ಮಳೆ; ತಗ್ಗು ಪ್ರದೇಶಗಳು ಜಲಾವೃತ

ಮಹಾನಗರ: ಅರಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ಭಾರತೀಯ ಉಪಖಂಡ ಪ್ರದೇಶದಲ್ಲಿ ನಿಮ್ನ ಒತ್ತಡ ನಿರ್ಮಾಣವಾದ ಕಾರಣ ಮಂಗಳೂರು ಸಹಿತ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಬಿರುಸಿನ ಮಳೆಯಾಗುತ್ತಿದ್ದು, ನಗರದಲ್ಲಿ ಬುಧವಾರವೂ ಮಳೆ ಮುಂದುವರಿದಿತ್ತು.

ನಗರದಲ್ಲಿ ಬೆಳಗ್ಗಿನ ವೇಳೆ ಮಳೆ ವೇಗ ಪಡೆದಿದ್ದು, ಬಳಿಕ ಮಳೆ ತೀವ್ರತೆ ಕಡಿಮೆ ಯಾಗಿ ಮೋಡ ಕವಿದ ವಾತಾವರಣ ಇತ್ತು. ಮಳೆ ಬಂದರೂ ಗರಿಷ್ಠ ಉಷ್ಣಾಂಶ ಹೆಚ್ಚಿತ್ತು. ಮಂಗಳೂರಿನಲ್ಲಿ ಮಂಗಳವಾರ ದಂದು ತಡರಾತ್ರಿಯವರೆಗೆ ಭಾರೀ ಮಳೆ ಯಾಗಿದ್ದು, ನಗರದ ತಗ್ಗು ಪ್ರದೇಶಗಳು ಜಲಾವೃತ್ತಗೊಂಡಿದ್ದವು. ನಗರದ ಕೆಪಿಟಿ, ನಂತೂರು, ಯೆಯ್ನಾಡಿ, ಕೊಟ್ಟಾರ ಸಹಿತ ಬಹುತೇಕ ಕಡೆಗಳಲ್ಲಿ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಡಕುಂಟಾ ಯಿತು.

ಭಾರೀ ಮಳೆಗೆ ಮಂಗಳವಾರ ರಾತ್ರಿ ಕೊಟ್ಟಾರಚೌಕಿ ಫ್ಲೈಓವರ್‌ ಕೆಳಗಡೆ ರಸ್ತೆಯುದ್ದಕ್ಕೂ ನೀರು ನಿಂತು ವಾಹನ ಓಡಾಟಕ್ಕೆ ತೊಂದರೆ ಉಂಟಾಯಿತು. ರಾಜಕಾಲುವೆಯಿಂದ ನೀರು ಉಕ್ಕಿ ರಸ್ತೆಗೆ ಬಂದಿದೆ.

ಗಲೀಜು ನೀರು ಅಕ್ಕಪಕ್ಕದ ಮನೆಗೆಳಿಗೆ, ಅಂಗಡಿಯೊಳಗೆ ನುಗ್ಗಿತ್ತು. ಅಂಗಡಿ ಮಾಲಕರಿಗೆ ನಷ್ಟ ಉಂಟಾಗಿರುವುದಲ್ಲದೆ, ಸುತ್ತಲೂ ದುರ್ವಾಸನೆಯಿಂದ ಕೂಡಿತ್ತು. ಬುಧವಾರ ಸ್ವತ್ಛಗೊಳಿಸುತ್ತಿರುವ ದೃಶ್ಯ ಕಂಡುಬಂತು. ಮೇಯರ್‌ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಮನಪಾ ಸದಸ್ಯರು, ಅಧಿಕಾರಿ ಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು.

ಇದನ್ನೂ ಓದಿ:ಗೋವಾ ವಿಧಾನಸಭಾ ಚುನಾವಣೆ: ದೇವೇಂದ್ರ ಫಡ್ನವೀಸ್ ನಾಳೆ ಗೋವಾಕ್ಕೆ ಆಗಮನ

ದೇರೆಬೈಲ್‌ ಬಳಿ ಕುಸಿದ ರಸ್ತೆ
ಧಾರಾಕಾರ ಮಳೆಗೆ ದೇರೆಬೈಲ್‌ ಸಮೀಪದ ಲ್ಯಾಂಡ್‌ಲಿಂಕ್ಸ್‌ ಒಳ ರಸ್ತೆ ಕುಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಮೂರು ತಿಂಗಳುಗಳ ಹಿಂದೆ ಇಲ್ಲಿ ಸಣ್ಣ ಗುಂಡಿಯೊಂದು ಕಾಣಿಸಿದ್ದು, ತತ್‌ಕ್ಷಣ ಸ್ಥಳೀಯರು ಜನಪ್ರತಿನಿಧಿಗಳ, ಅಧಿಕಾರಿಗಳ ಗಮನ ಸೆಳೆದಿದ್ದರು. ಆದರೆ ದುರಸ್ತಿ ಪಡಿಸದ ಕಾರಣ ಈ ರಸ್ತೆ ಇದೀಗ ಕುಸಿದಿದೆ. ಆದರೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಸ್ಥಳೀಯರು ತಿಳಿಸಿದ್ದಾರೆ.

ಮಳೆ ಬಂದರೆ ಅಂಗಡಿಯೊಳಗೆ ನೀರು
ಕೊಟ್ಟಾರ ಚೌಕಿ ಮೇಲ್ಸೇತುವೆ ಕೆಳಗಿನ ಸರ್ವಿಸ್‌ ರಸ್ತೆಯ ಆಟೋಮೊಬೈಲ್‌ ಅಂಗಡಿಯೊಂದರ ಮಾಲಕ ಸುವರ್ಣ ಪ್ರತಿಕ್ರಿಯಿಸಿ, “ಪ್ರತೀ ಬಾರಿ ಮಳೆ ಬಂದರೆ ನಮ್ಮ ಅಂಗಡಿಗೆ ನೀರು ನುಗ್ಗಿ ಅಪಾರ ಸ್ವತ್ತು ಹಾನಿಯಾಗುತ್ತದೆ. ಈ ಕುರಿತಂತೆ ಶಾಶ್ವತ ಪರಿಹಾರಕ್ಕೆ ಅನೇಕ ವರ್ಷಗಳಿಂದ ಮನವಿ ಮಾಡಿದರೂ ಸಮಸ್ಯೆ ಬಗೆಹರಿದಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ತತ್‌ಕ್ಷಣ ನಮ್ಮ ಮನವಿಗೆ ಸ್ಪಂದಿಸಿ ಶಾಶ್ವತ ಪರಿಹಾರ ಒದಗಿಸಬೇಕು’ ಎನ್ನುತ್ತಾರೆ. ಪಚ್ಚನಾಡಿಯ ದೇವಿನಗರ ಎಂಬಲ್ಲಿ 2 ಮನೆಗಳ ತಡೆಗೋಡೆ ಕುಸಿದು ಹಾನಿ ಸಂಭವಿಸಿದೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.