ಶಾರದಾ ವಿದ್ಯಾನಿಕೇತನದಲ್ಲಿ ಬೆಳೆದು ಉಣ್ಣುವ ಪಾಠ


Team Udayavani, Jun 12, 2018, 1:03 AM IST

sharada-vidhyaniketan-11-6.jpg

ತಲಪಾಡಿ: ಶಾಲಾ ಕಾಲೇಜು ಗಳು ಕೃಷಿಯತ್ತ ಮುಖ ಮಾಡುವುದು ಇತ್ತೀಚಿನ ದಿನಗಳ ಉತ್ತಮ ಬೆಳವಣಿಗೆ. ಈ ಮೂಲಕ ಮಕ್ಕಳಿಗೆ ಕೃಷಿ ಸಂಸ್ಕೃತಿಯ ಪರಿಚಯ ಕಾರ್ಯ ನಡೆಯುತ್ತಿದೆ. ಇಲ್ಲೊಂದು ಶಾಲೆ ಇನ್ನೂ ಒಂದು ಹೆಜ್ಜೆ ಮುಂದಿರಿಸಿ ಸಾವಯವ ಕೃಷಿಯನ್ನು ಒಂದು ವಿಷಯವಾಗಿ ಅಳವಡಿಸಿಕೊಂಡು ಕಡ್ಡಾಯ ಕೃಷಿ ಶಿಕ್ಷಣಕ್ಕೆ ಮುಂದಾಗಿದೆ.

ತಲಪಾಡಿಯ ದೇವಿನಗರದಲ್ಲಿರುವ ಶಾರದಾ ವಿದ್ಯಾನಿಕೇತನ ಪಬ್ಲಿಕ್‌ ಶಾಲೆಯ 5ನೇ ತರಗತಿಯಿಂದ 10ನೇ ತರಗತಿವರೆಗಿನ ಸುಮಾರು 900 ವಿದ್ಯಾರ್ಥಿಗಳು ಕೃಷಿ ಪಾಠದ ಲಾಭ ಪಡೆಯಲಿದ್ದಾರೆ. ಪ್ರತೀ ತರಗತಿಗೂ ಪಠ್ಯಕ್ರಮವನ್ನು ಕೃಷಿ ವಿಜ್ಞಾನಿಗಳ ಸಹಕಾರದೊಂದಿಗೆ ಶಾಲಾ ಆಡಳಿತ ರಚಿಸಿದೆ. ಒಂದು ತರಗತಿಯಲ್ಲಿ ಥಿಯರಿ ಮತ್ತು ಎರಡು ತರಗತಿಗಳಲ್ಲಿ ಪ್ರಾಯೋಗಿಕ ತರಬೇತಿ ನೀಡಲಾಗುತ್ತದೆ. ಪ್ರತ್ಯೇಕ ಪರೀಕ್ಷೆಯೂ ಇದ್ದು, ಪ್ರತೀ ವಿದ್ಯಾರ್ಥಿಗೆ ಥಿಯರಿ ಮತ್ತು ಪ್ರಾಯೋಗಿಕ ಕಾರ್ಯಕ್ಕೆ ಅಂಕ ನಿಗದಿಪಡಿಸಲಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲೆ ಸುಷ್ಮಾ ದಿನಕರ್‌ ಹೇಳಿದ್ದಾರೆ.

ಕೃಷಿ ಪದವೀಧರರಿಂದ ಪಾಠ
ಕೃಷಿ ಪಾಠಕ್ಕೆಂದೇ ಇಲ್ಲಿ ಏಳು ಮಂದಿ ಕೃಷಿ ಪದವೀಧರರಿದ್ದಾರೆ. ಕೃಷಿ ವಿಜ್ಞಾನ ಸ್ನಾತಕೋತ್ತರ ಪದವೀಧರ ಒಬ್ಬರು ಉಪನ್ಯಾಸಕರು ಥಿಯರಿ ತರಗತಿ ನಡೆಸಿದರೆ, ಆರು ಮಂದಿ ಕೃಷಿ ಪದವೀಧರರು ಪ್ರಾಯೋಗಿಕ ಶಿಕ್ಷಣ ನೀಡಲಿದ್ದಾರೆ.

ಕೃಷಿ ಪಾಠದ ಪ್ರಥಮ ಹಂತ
ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಕೃಷಿ ಪಾಠಕ್ಕೆ ಚಾಲನೆ ನೀಡಿದ್ದು, ಪ್ರಥಮ ಹಂತದಲ್ಲಿ ವಿದ್ಯಾರ್ಥಿಗಳು ಮೂರೂವರೆ ಎಕರೆ ಪ್ರದೇಶದಲ್ಲಿ ಕೃಷಿ ಮಾಡಲಿದ್ದಾರೆ. ಹೈನುಗಾರಿಕೆ, ಸಾವಯವ ಕೃಷಿ, ಹೂದೋಟ ನಿರ್ಮಾಣ, ಹಣ್ಣುಹಂಪಲು ಕೃಷಿ, ಭತ್ತದ ಕೃಷಿಯ ಕುರಿತು ಪಠ್ಯಗಳಿವೆ. ಪ್ರಾಯೋಗಿಕ ತರಬೇತಿ ನೀಡಲು ಕೃಷಿ ಭೂಮಿ ವ್ಯವಸ್ಥೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚುವರಿ ಭೂಮಿಯನ್ನು ಬಳಸುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ವಿವೇಕ್‌ ತಂತ್ರಿ ಹೇಳಿದ್ದಾರೆ.

ಮಕ್ಕಳಿಗೆ ತಾವು ತಿನ್ನುವ ಉಣ್ಣುವ ಪ್ರತಿ ವಸ್ತುವಿನ ಬಗ್ಗೆ ಜ್ಞಾನ ಅಗತ್ಯ. ಆಹಾರ ವಸ್ತುಗಳನ್ನು ಹೇಗೆ ಬೆಳೆಯಲಾಗುತ್ತದೆ ಮತ್ತು ರೈತರ ಬವಣೆ ಇಂತಹ ಶಿಕ್ಷಣದಿಂದ ಅರ್ಥವಾಗಲು ಸಾಧ್ಯ. ಮುಂದಿನ ದಿನಗಳಲ್ಲಿ ಮಕ್ಕಳಲ್ಲಿ ಇನ್ನಷ್ಟು ವೈಜ್ಞಾನಿಕವಾಗಿ ಕೃಷಿ ಸಂಸ್ಕೃತಿಯ ಕುರಿತು ಆಸಕ್ತಿ ಮೂಡಿಸಲು ಯೋಜನೆ ರೂಪಿಸಲಾಗಿದೆ.
– ಪ್ರೊ| ಎಂ.ಬಿ. ಪುರಾಣಿಕ್‌, ಅಧ್ಯಕ್ಷರು, ಶಾರದಾ ಸಮೂಹ ಸಂಸ್ಥೆಗಳು ಮಂಗಳೂರು

ಪಟ್ಟಣದವರಾದ ಕಾರಣ ಯಾವ ತರಕಾರಿ ಹೇಗೆ ಬೆಳೆಯುತ್ತದೆ ಎಂಬ ಅರಿವು ನಮಗಿಲ್ಲ. ಕೃಷಿ ಪಾಠ ಪ್ರಾರಂಭಿಸಿದ್ದರಿಂದ ಇವೆಲ್ಲ ವಿಚಾರಗಳ ಕುರಿತು ತಿಳಿಯಲು ಸಹಕಾರಿಯಾಗಲಿದೆ. ಸಾವಯವ ಕೃಷಿಯನ್ನು ಆರಂಭಿಸಿದ್ದು, ನಾವು ಬೆಳೆದ ಫಸಲನ್ನು ಸವಿಯುವ ತವಕದಲ್ಲಿದ್ದೇವೆ.
– ದೃಶ್ಯಾ, ವಿದ್ಯಾರ್ಥಿನಿ,

— ವಸಂತ ಕೊಣಾಜೆ

ಟಾಪ್ ನ್ಯೂಸ್

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.