ತುಂಡಾದ ಸೇತುವೆಯಲ್ಲೇ ವಿದ್ಯಾರ್ಥಿಗಳ ಪಯಣ


Team Udayavani, May 10, 2018, 10:02 AM IST

10-May-3.jpg

ಅಡ್ಯನಡ್ಕ: ಇನ್ನೇನು ಮಳೆಗಾಲದ ಜತೆಗೆ ಶಾಲೆ-ಕಾಲೇಜುಗಳೂ ಆರಂಭವಾಗಲಿವೆ. ಆದರೆ, ಮರಕ್ಕಿಣಿಯ ಮಕ್ಕಳಲ್ಲಿ ಹೊಸ ಶೈಕ್ಷಣಿಕ ವರ್ಷದ ಕುರಿತಾಗಿ ಕುತೂಹಲದ ಜತೆಗೆ, ಮುರಿದ ಸೇತುವೆಯಲ್ಲಿ ಸಾಗುವುದು ಹೇಗೆಂಬ ಭಯವೂ ಮೂಡಿದೆ.

ಕೇಪು ಗ್ರಾ.ಪಂ.ವಾಪ್ತಿಗೆ ಬರುವ ಅಡ್ಯನಡ್ಕ ಪೇಟೆಯಿಂದ ಅನತಿ ದೂರದಲ್ಲಿರುವ ಮರಕ್ಕಿಣಿ ಎಂಬಲ್ಲಿ ಸಂಪರ್ಕ ಕಲ್ಪಿಸುತ್ತಿದ್ದ ಸೇತುವೆಯ ಸ್ಥಿತಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ನಿದ್ದೆಗೆಡಿಸಿದೆ. ಕಳೆದ ವರ್ಷ ಮಳೆಗಾಲದಲ್ಲಿ ಈ ಭಾಗದಲ್ಲಿ ಬೀಸಿದ ಭಾರೀ ಗಾಳಿ ಮಳೆಗೆ ಖಾಸಗಿಯವರಿಗೆ ಸೇರಿದ ತೋಟದಲ್ಲಿದ್ದ ಬೃಹತ್‌ ಗಾತ್ರದ ಮರ ನೆಲಕ್ಕೆ ಅಪ್ಪಳಿಸಿತ್ತು. ಆಗ ಸಮೀಪದ ಮತ್ತೂಂದು ಮರ ಸೇತುವೆ ಮೇಲೆ ಬಿದ್ದು, ಸೇತುವೆ ಅರ್ಧ ಮುರಿದಿದೆ.

ಕಳೆದ ಮಳೆಗಾಲದಲ್ಲಿ ಮುರಿದು ಬಿದ್ದ ಸೇತುವೆಯನ್ನು ಸರಿಪಡಿಸುವ ಕಾರ್ಯಕ್ಕೆ ಗ್ರಾ.ಪಂ. ಮುಂದಾಗಲಿಲ್ಲ. ಒಂದು ವರ್ಷದಿಂದ ಈ ಭಾಗದ ಜನರು ತುಂಡಾದ ಸೇತುವೆಯಲ್ಲಿ ಜೀವ ಕೈಯಲ್ಲಿ ಹಿಡಿದು ದಾಟುತ್ತಿದ್ದಾರೆ. ಮಳೆಗಾಲದಲ್ಲಿ ನೀರು ತೋಡಿನ ತುಂಬಾ ಉಕ್ಕಿ ಹರಿಯುತ್ತದೆ. ಸೇತುವೆಗೆ ಮುತ್ತಿಕ್ಕುತ್ತಾ ನೀರು ಹರಿಯುತ್ತಿದ್ದು, ಪರಿಸ್ಥಿತಿಯನ್ನು ಇನ್ನಷ್ಟು ಬಿಗಡಾಯಿಸಿದೆ.

ಸೇತುವೆ ಮುರಿದು ‘ವಿ’ ಆಕಾರದಲ್ಲಿ ಬಾಗಿ ನಿಂತಿದ್ದು, ಮುರಿದ ತತ್‌ಕ್ಷಣ ಮಳೆ ಗಾಲದ ತಾತ್ಕಾಲಿಕ ಸಂಪರ್ಕಕ್ಕೆ ಸ್ಥಳೀಯರು ಮರಳು, ಮಣ್ಣನ್ನು ತುಂಬಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದರು. ಆದರೆ ಸ್ಥಳೀ ಯಾಡಳಿತ ಇದನ್ನೇ ಪರಿಹಾರ ಎಂದು ತಿಳಿದು ದುರಸ್ತಿಗೆ ಮುಂದಾಗಲಿಲ್ಲ.

ವಿದ್ಯಾರ್ಥಿಗಳೇ ಹೆಚ್ಚು
ಈ ಭಾಗದಲ್ಲಿ 500ಕ್ಕೂ ಹೆಚ್ಚು ಮನೆಗಳಿದ್ದು, ಅಡ್ಯನಡ್ಕಕ್ಕೆ ಹೋಗಬೇಕಾದರೆ ಜನರು ಇದೇ ಮಾರ್ಗವನ್ನೇ ಅವಲಂಬಿಸಿದ್ದಾರೆ. ಅಡ್ಯನಡ್ಕ ಪೇಟೆಯನ್ನು ಸಂಪರ್ಕಿಸಲು ರಸ್ತೆ ಇದ್ದು, ಆದರೆ ಸುತ್ತು ಬಳಸಿ ತೆರಳಬೇಕಾಗಿದೆ. ಅಡ್ಯನಡ್ಕದಲ್ಲಿ ಶಾಲೆ-ಕಾಲೇಜುಗಳಿದ್ದು, ಈ ಭಾಗದ ಹೆಚ್ಚಿನ ವಿದ್ಯಾರ್ಥಿಗಳು ಇದೇ ಮಾರ್ಗದಲ್ಲಿ ಸಂಚರಿಸುವವರಿದ್ದಾರೆ. ಇನ್ನುಳಿದಂತೆ ಅಳಿಕೆ, ವಿಟ್ಲ, ಪುತ್ತೂರು, ನೆರೆಯ ರಾಜ್ಯ ಕೇರಳ ಭಾಗದ ಶಾಲೆಗೆ ಮುಂಜಾನೆ ತೆರಳುವ ವಿದ್ಯಾರ್ಥಿಗಳು ಇದೇ ಮುರಿದ ಸೇತುವೆಯಲ್ಲೇ ದಾಟಿ ತೆರಳಬೇಕಿದೆ.

ಗ್ರಾಮಸಭೆಯಲ್ಲಿ ಪ್ರಸ್ತಾವ
ಸೇತುವೆ ನಿರ್ಮಿಸುವಷ್ಟು ಅನುದಾನ ಗ್ರಾ.ಪಂ.ನಲ್ಲಿ ಇರುವುದಿಲ್ಲ. ಇಲ್ಲಿಯೂ ಇದೇ ಸಮಸ್ಯೆ ಆಗಿದೆ. ಪ್ರತಿ ವಾರ್ಡ್‌ ಸಭೆಗಳು, ಗ್ರಾಮಸಭೆಯಲ್ಲಿ ಇದರ ಬಗ್ಗೆ ಪ್ರಸ್ತಾವ ಆಗುತ್ತಿದೆ. ಮುಂಬರುವ ದಿನಗಳಲ್ಲಿ ಸ್ಥಳ ಪರಿಶೀಲಿಸಿ, ಮೆಲಧಿಕಾರಿಗಳ ಗಮನಕ್ಕೆ ತರಲಾಗುವುದು.
– ನಳಿನಿ ಬಿ.
ಕೇಪು ಗ್ರಾಮ ಪಂಚಾಯತ್‌ ಪಿಡಿಒ

ಭಯದಲ್ಲೇ ಪಯಣ
ಮಳೆಗಾಲದಲ್ಲಿ ಸೇತುವೆಗೆ ಹತ್ತಿರ ಹತ್ತಿರ ನೀರು ಬರುತ್ತದೆ. ಬಾಗಿದ ಸೇತುವೆ ಯಾವಾಗ ತುಂಡಾಗಿ ಬೀಳುತ್ತದೆ ಎಂಬ ಹೆದರಿಕೆ. ಇನ್ನೊಂದೆಡೆ ತೋಡಿನ ಬದಿ ಕುಸಿದು ಬಿದ್ದಿರುವುದರಿಂದ ನಡೆದುಕೊಂಡು ಹೋಗಲು ಸ್ವಲ್ಪ ಜಾಗವಿದೆ. ಮಳೆಗಾಲದಲ್ಲಿ ಕುಸಿದು ಬಿದ್ದರೆ ನಮಗೆ ಬೇರೆ ದಾರಿ ಇಲ್ಲ. ಪ್ರಸ್ತುತ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಚುನಾವಣೆ ಬಳಿಕವಾದರೂ ಸರಿಪಡಿಸುವ ವಿಶ್ವಾಸವಿದೆ. 
– ಅಭಿಷೇಕ್‌ ಎ.ಕೆ.
ಕಾಲೇಜು ವಿದ್ಯಾರ್ಥಿ

ಕಾರ್ತಿಕ್‌ ಅಮೈ

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.