ಮಂಜುನಾಥನಗರ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್‌ ಮೇಳ 


Team Udayavani, Dec 11, 2017, 4:30 PM IST

11-Dec-16.jpg

ಸವಣೂರು: ವಿದ್ಯಾರ್ಥಿಗಳು, ಶಿಕ್ಷಕರು, ಸಿಬಂದಿ ಕೂಡಿರುವ ಶಿಕ್ಷಣ ಕೇಂದ್ರವಾಗಿದ್ದ ಪುತ್ತೂರು ತಾಲೂಕಿನ ಪಾಲ್ತಾಡಿ ಗ್ರಾಮದ ಮಂಜುನಾಥನಗರ ಹಿರಿಯ ಪ್ರಾಥಮಿಕ ಶಾಲೆ ವಠಾರ ವ್ಯಾಪಾರ ಕೇಂದ್ರವಾಗಿ ಮಾರ್ಪಟ್ಟಿತ್ತು. ಇದಕ್ಕೆ ವೇದಿಕೆಯಾದದ್ದು ವಿದ್ಯಾರ್ಥಿಗಳ ಮೆಟ್ರಿಕ್‌ ಮೇಳ.

ಸದಾ ಓದು, ಪಾಠ, ಆಟದಲ್ಲಿ ತಲ್ಲೀನರಾಗುತ್ತಿದ್ದ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ ತಮ್ಮ ಮನೆಗಳಿಂದ ತಂದ ಬಗೆ ಬಗೆಯ ತಾಜಾ ತರಕಾರಿ, ಹೂವು, ಸೊಪ್ಪು, ಹಣ್ಣು-ಹಂಪಲು ಹಾಗೂ ಗಿಡಗಳನ್ನು ಪೈಪೋಟಿಗೆ ಬಿದ್ದವರಂತೆ ವ್ಯಾಪಾರ ಮಾಡಿ, ಕೈತುಂಬ ಹಣ ಸಂಪಾದಿಸಿದರು. ಬೆಳಗ್ಗೆಯಿಂದಲೇ ವ್ಯಾಪಾರ ಭರ್ಜರಿಯಾಗಿ ನಡೆಯಿತು.

ಶಿಕ್ಷಕರು, ಪೋಷಕರೇ ಗ್ರಾಹಕರು!
ಮೆಟ್ರಿಕ್‌ ಮೇಳದಲ್ಲಿ ಗ್ರಾಹಕರು ಚೌಕಾಶಿ ಮಾಡಿ ತಮಗಿಷ್ಟವಾದ ವಸ್ತುಗಳನ್ನು ಖರೀದಿಸಿದರು. ಕೆಲವು ಗ್ರಾಹಕರು ಚರ್ಚೆ ಮಾಡದೆ, ವಿದ್ಯಾರ್ಥಿಗಳು ನಿಗದಿ ಪಡಿಸಿದ ದರಕ್ಕೇ ಸೊಪ್ಪು- ತರಕಾರಿ ಖರೀದಿಸಿದರು. ವಿದ್ಯಾರ್ಥಿಗಳು ತಾವು ತಂದಿದ್ದ ಎಲ್ಲ ವಸ್ತುಗಳನ್ನೂ ಮಾರಾಟ ಮಾಡಿ, ಲಾಭ ಜೇಬಿಗಿಳಿಸಿಕೊಂಡರು. ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರೇ ಗ್ರಾಹಕರಾಗಿದ್ದರು.

ಶಿಕ್ಷಣದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಸರಕಾರದ ಸುತ್ತೋಲೆಯಂತೆ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ವ್ಯಾಪಾರ ಮನೋಭಾವನೆ, ವ್ಯಾವಹಾರಿಕ ಜೀವನ ನಿರ್ವಹಣೆಯ ಮಹತ್ವ ತಿಳಿಯಪಡಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಆಯೋಜಿಸುತ್ತಿರುವ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿ ಯಶಸ್ವಿಯಾಯಿತು.

ಮಂಜುನಾಥನಗರ ಸರಕಾರಿ ಪ್ರೌಢಶಾಲೆಯ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಬಿ.ಕೆ. ರಮೇಶ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ಥಳೀಯ ವರ್ತಕ ಕೃಷ್ಣಪ್ಪ ಶೆಟ್ಟಿ, ವ್ಯಾಪಾರ- ವ್ಯವಹಾರದ ಕುರಿತು ಮಕ್ಕಳಿಗೆ ತಿಳಿಹೇಳಿದರು. ವ್ಯಾಪಾರಕ್ಕೆ ವಾಕ್ಚಾತುರ್ಯ, ಪ್ರಾಮಾಣಿಕತೆ ಅತ್ಯಗತ್ಯ ಎಂದರು.

ಸವಣೂರು ಗ್ರಾ.ಪಂ. ಮಾಜಿ ಸದಸ್ಯರಾದ ಸುಧೀರ್‌ ಕುಮಾರ್‌ ರೈ ಕುಂಜಾಡಿ, ಸುಂದರಿ ಬಿ.ಎಸ್‌., ಮಂಜುನಾಥನಗರ ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ವಿಮಲಾ, ಸದಸ್ಯೆ ಸವಿತಾ, ಸ್ಥಳೀಯ ಮುಂದಾಳುಗಳಾದ ಅಶ್ರಫ್‌ ಖಾಸಿಲೆ, ಸುಂದರ ಭಂಡಾರಿ, ವಿವೇಕಾನಂದ ಯುವಕ ಮಂಡಲದ ಅಧ್ಯಕ್ಷ ಅನ್ನಪ್ರಸಾದ್‌ ರೈ ಬೈಲಾಡಿ, ಮಂಜುನಾಥನಗರ ಪ್ರೌಢ ಶಾಲಾ ಮುಖ್ಯಗುರು ಯಶೋದಾ, ಅಂಗನವಾಡಿ ಕಾರ್ಯಕರ್ತೆ ಸುಮಂಗಲಾ ಹಾಗೂ ಮಕ್ಕಳ ಹೆತ್ತವರು ಉಪಸ್ಥಿತರಿದ್ದರು.

ಪೋಷಕರ ಪ್ರೋತ್ಸಾಹ
ಪೋಷಕರ ಪ್ರೋತ್ಸಾಹದೊಂದಿಗೆ ಅಯೋಜಿಸಿದ್ದ ಮೆಟ್ರಿಕ್‌ ಮೇಳ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ವ್ಯವಹಾರ ಜ್ಞಾನವನ್ನು ತೋರ್ಪಡಿಸಿದರು. ಮುಖ್ಯ ಶಿಕ್ಷಕಿ ಕುಸುಮಾ ಐ.ಟಿ. ಅವರ ನೇತೃತ್ವದಲ್ಲಿ ಶಿಕ್ಷಕಿಯರಾದ ನಂದಿನಿ ಆರ್‌., ಆರತಿ ಎಸ್‌., ಪ್ರಸಿಲ್ಲಾ ಆ್ಯಗ್ನೇಸ್‌ ಪಾಯಸ್‌, ರೇಖಾ ಅವರು ಮೆಟ್ರಿಕ್‌ ಮೇಳದ ಜವಾಬ್ದಾರಿ ವಹಿಸಿಕೊಂಡಿದ್ದರು.

ಸಂತೆಯಲ್ಲಿ ಏನೇನಿತ್ತು?
ಮೇಳದಲ್ಲಿ ಚೀನಿಕಾಯಿ, ಬೆಂಡೆಕಾಯಿ, ತೊಂಡೆ ಕಾಯಿ, ಕುಂಬಳಕಾಯಿ, ಪಡುವಲಕಾಯಿ, ಬಾಳೆಹಣ್ಣು ,ಹರಿವೆ ಸೊಪ್ಪು, ಹಸಿಮೆಣಸು, ಟೊಮೇಟೊ, ಸಿಹಿಗೆಣಸು, ಬಸಳೆ, ಎಳೆನೀರು, ಕೊಕ್ಕೊ, ವೀಳ್ಯದೆಲೆ, ತೆಂಗಿನಕಾಯಿ, ಕಬ್ಬು, ಸೀಬೆಕಾಯಿ, ಪರಂಗಿಹಣ್ಣು, ಚಿಕ್ಕು, ಪಪ್ಪಾಯಿ, ಕಲ್ಲಂಗಡಿ, ಔಷಧ ಸಸ್ಯ, ಹೂವಿನ ಗಿಡ, ತಾಳೆಹಣ್ಣು, ಗುಲಾಬಿ, ಮಲ್ಲಿಗೆ, ಅರಿಸಿನ, ಲಿಂಬೆ, ಬದನೆ, ತಾಜಾ ಹಣ್ಣಿನ ರಸಗಳು, ತರಕಾರಿಗಳು, ಹಣ್ಣಿನ ಗಿಡಗಳು, ಹೂವು, ಚರುಂಮುರಿ, ಮನೆಯಲ್ಲಿ ತಯಾರಿಸಿದ ತಿಂಡಿ, ಉಪ್ಪಿನಕಾಯಿ ಮೊದಲಾದ ವಸ್ತುಗಳು ಲಭ್ಯವಿದ್ದವು.

ವಿದ್ಯಾರ್ಥಿಗಳ ಉತ್ಸಾಹ
ವ್ಯಾವಹಾರಿಕ ಗಣಿತ ನಮ್ಮೆಲ್ಲರ ಜೀವನದಲ್ಲಿ ಹಾಸುಹೊಕ್ಕಾಗಿದೆ. ಅದನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವುದು ಈ ಮೆಟ್ರಿಕ್‌ ಮೇಳದ ಮುಖ್ಯ ಉದ್ದೇಶ. ಮೆಟ್ರಿಕ್‌ ಮೇಳಕ್ಕಾಗಿ ವಿದ್ಯಾರ್ಥಿಗಳು ಹಲವು ದಿನಗಳಿಂದ ಉತ್ಸಾಹದಿಂದ ಕಾದು ಕುಳಿತಿದ್ದರು.
ಕುಸುಮಾ ಐ.ಟಿ., ಮುಖ್ಯ ಶಿಕ್ಷಕಿ,
  ಮಂಜುನಾಥನಗರ ಪ್ರಾಥಮಿಕ ಶಾಲೆ

ತಿಂಗಳಿಗೊಮ್ಮೆ ನಡೆಸಿ
ಮಕ್ಕಳಿಗೆ ಭವಿಷ್ಯದಲ್ಲಿ ವ್ಯಾವಹಾರಿಕ ಜ್ಞಾನವನ್ನು ವೃದ್ಧಿಸುವ ಸಲುವಾಗಿ ಮೆಟ್ರಿಕ್‌ ಮೇಳವೆಂಬ ಕಾರ್ಯಕ್ರಮವನ್ನು ಸರಕಾರಿ ಶಾಲೆಯಲ್ಲಿ ಹಮ್ಮಿಕೊಂಡಿರುವುದು ಉತ್ತಮ ಬೆಳವಣಿಗೆ. ವರ್ಷಕ್ಕೊಮ್ಮೆ ನಡೆಯುವ ಈ ಮೇಳವನ್ನು ತಿಂಗಳಿಗೊಮ್ಮೆ ಅಥವಾ ಹಬ್ಬ ಹರಿದಿನಗಳಂದು ನಡೆಸಿದರೆ ಸ್ಥಳೀಯರಿಗೆ ಕೈಗಟಕುವ ದರದಲ್ಲಿ ತಾಜಾ ತರಕಾರಿಗಳು ಲಭ್ಯವಾಗುತ್ತದೆ.
ಸತೀಶ್‌ ಎ., ಗ್ರಾಹಕ

ಜ್ಞಾನ ವೃದ್ಧಿಗೆ ಸಹಕಾರಿ
ತಮ್ಮ ಮನೆಯಲ್ಲಿ ಬೆಳೆದ ತರಕಾರಿಯನ್ನು ತಾವೇ ಮಾರಾಟ ಮಾಡಿ ಹಣ ಗಳಿಸಲು ಮೆಟ್ರಿಕ್‌ ಮೇಳ ಸಹಕಾರಿಯಾಗಿದೆ. ವಿದ್ಯಾರ್ಥಿ ದಿಸೆಯಿಂದಲೇ ವಿದ್ಯೆಯೊಂದಿಗೆ ವ್ಯಾಪಾರ ವಹಿವಾಟಿನ ಜ್ಞಾನ ವೃದ್ಧಿಸಲು ಮೆಟ್ರಿಕ್‌ ಮೇಳದಿಂದ ಸಾಧ್ಯ.
– ಸೌಜನ್‌, ವಿದ್ಯಾರ್ಥಿ

ಪ್ರವೀಣ್‌ ಚೆನ್ನಾವರ

ಟಾಪ್ ನ್ಯೂಸ್

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.