ಕುಕ್ಕೆ: ಸರಣಿ ರಜೆ ಹಿನ್ನೆಲೆ ಭಕ್ತಸಂದಣಿ


Team Udayavani, Jan 28, 2019, 6:07 AM IST

28-january-7.jpg

ಸುಬ್ರಹ್ಮಣ್ಯ: ಎರಡು ದಿನಗಳ ಸತತ ಸರಕಾರಿ ರಜೆ ಮತ್ತು ಶನಿವಾರ ಷಷ್ಠಿ ತಿಥಿಯೂ ಇದ್ದ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ರವಿವಾರವೂ ಭಾರೀ ಜನಸಂದಣಿ ಕಂಡುಬಂದಿದೆ.

ಕ್ಷೇತ್ರಕ್ಕೆ ನಾಡಿನ ವಿವಿಧ ಕಡೆಗಳಿಂದ ಭಕ್ತರು ಆಗಮಿಸಿ, ದೇವರ ದರ್ಶನ ಪಡೆದರಲ್ಲದೆ, ವಿವಿಧ ಸೇವೆಗಳನ್ನು ಪೂರೈ ಸಿದರು. ಶುಕ್ರವಾರದಿಂದಲೇ ಯಾತ್ರಿಗಳ ಸಂಖ್ಯೆ ಜಾಸ್ತಿಯಾಗಿತ್ತು. ದೇಗುಲದ ಹಾಗೂ ಖಾಸಗಿ ವಸತಿ ಗೃಹಗಳು ಭರ್ತಿಯಾಗಿದ್ದವು. ತಂಗಲು ಕೊಠಡಿ ಸಮಸ್ಯೆ ಉಂಟಾಯಿತು.

ಮಹಾಪೂಜೆ, ಶೇಷಸೇವೆ, ಪಂಚಾಮೃತ ಅಭಿಷೇಕ, ನಾಗಪ್ರತಿಷ್ಠೆ, ಆಶ್ಲೇಷಾ ಬಲಿ ಸೇವೆಗಳನ್ನು ಭಕ್ತರು ನೆರವೇರಿಸಿದರು. ಬೆಳಗ್ಗೆಯಿಂದ ದೇವರ ದರ್ಶನ, ಸೇವೆಗಳಿಗೆ ಉದ್ದನೆಯ ಸರದಿಯಿತ್ತು. ದೇಗುಲದ ಒಳಾಂಗಣ, ಹೊರಾಂಗಣ ಮತ್ತು ಪರಿಸರದಲ್ಲೆಲ್ಲ ಭಕ್ತ ಸಾಗರವೇ ತುಂಬಿತ್ತು. ಜನಜಂಗುಳಿಯನ್ನು ನಿಯಂತ್ರಿಸಲು ಕಡಿಮೆ ಸಂಖ್ಯೆಯಲ್ಲಿದ್ದ ಭದ್ರತಾ ಸಿಬಂದಿ, ಪೊಲೀಸರು ಹಾಗೂ ಗೃಹರಕ್ಷಕ ದಳದ ಸಿಬಂದಿ ಹರಸಾಹಸಪಟ್ಟರು.

ಮುಖ್ಯ ರಸ್ತೆಯಲ್ಲಿ ಅಂಗಡಿ- ಮುಂಗಟ್ಟುಗಳ ಮುಂದೆ ತಾಸುಗಟ್ಟಲೆ ಟ್ರಾಫಿಕ್‌ ಜಾಮ್‌ ಆಗಿತ್ತು. ಕುಮಾರಧಾರಾದಿಂದ ರಥಬೀದಿ ತನಕ ಸಾಲಾಗಿ ವಾಹನಗಳು ನಿಂತಿದ್ದವು.

ಆದಿ ಸುಬ್ರಹ್ಮಣ್ಯ ದೇವಸ್ಥಾನದಲ್ಲೂ ಜನಸಂದಣಿ ಇತ್ತು. ಮುಖ್ಯ ದೇಗುಲದಲ್ಲಿ ದೇವರ ದರ್ಶನಕ್ಕಾಗಿ ಗೋಪುರ ತನಕವೂ ಸರದಿ ಸಾಲು ಇತ್ತು. ಭೋಜನ ಪ್ರಸಾದ ಸ್ವೀಕರಿಸಲೂ ಸಾಕಷ್ಟು ಕಾಯಬೇಕಾಯಿತು. ಕುಮಾರಧಾರಾ ಸ್ನಾನ ಘಟ್ಟದಲ್ಲೂ ಅತ್ಯಧಿಕ ಭಕ್ತ ಸಂದಣಿ ಕಂಡು ಬಂತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.