ಸುಬ್ರಹ್ಮಣ್ಯ ಮಠದ ವಿರುದ್ಧ ಆಪಾದನೆ; ಶ್ರೀಗಳಿಂದ ಉಪವಾಸ
Team Udayavani, Oct 14, 2018, 10:30 AM IST
ಸುಬ್ರಹ್ಮಣ್ಯ: ಸಂಪುಟ ಶ್ರೀ ನರಸಿಂಹ ಸ್ವಾಮಿ ಮಠದ ವಿರುದ್ಧ ಕೆಲವರು ನಡೆಸುತ್ತಿರುವ ಆಪಾದನೆಗಳಿಂದ ಬೇಸತ್ತು ಮಠದ ಶ್ರೀ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿಯವರು ಶನಿವಾರದಿಂದ ಉಪವಾಸ ಆರಂಭಿಸಿದ್ದಾರೆ.
“ಇದು ಯಾರ ವಿರುದ್ಧವೂ ಅಲ್ಲ; ಮನಸಿಗೆ ಆದ ನೋವಿನಿಂದ’ ಎಂದಿರುವ ಅವರು, ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಶ್ರೀ ಮಠದ ಸಂಬಂಧ ಚೆನ್ನಾ ಗಿರಬೇಕು ಎನ್ನುವುದು ನಮ್ಮ ಹಂಬಲ ಎಂದು ತಿಳಿಸಿದ್ದಾರೆ.
ಮಠದಲ್ಲಿ ಗೋಶಾಲೆ ಇದೆ. ಇದಕ್ಕೆ ಬೆಟ್ಟದಿಂದ ಸಹಜವಾಗಿ ಬರುವ ನೀರನ್ನು ಯಾರಿಗೂ ತೊಂದರೆಯಾಗದಂತೆ ತರಿಸುತ್ತಿದ್ದೆವು. ಇತ್ತೀಚೆಗೆ ಕೆಲವರು ಅದೂ ನಿಲ್ಲುವಂತೆ ಮಾಡಿದ್ದರಿಂದ ಹಸುಗಳಿಗೆ ನೀರಿಲ್ಲವಾಗಿದೆ. ನಮ್ಮ ಅನುಷ್ಠಾನಕ್ಕೂ ತೊಂದರೆಯಾಗುತ್ತಿದೆ ಎಂದರು.
ದೇವಸ್ಥಾನದ ರಸ್ತೆ ಅಭಿವೃದ್ಧಿಗೆ ಸಹಕರಿಸುತ್ತಿದ್ದರೂ ಅಪಪ್ರಚಾರ ನಿಂತಿಲ್ಲ. ಈ ಹಿಂದೆ ನೋಟಿಫೈ ಮಾಡಿದ ಕೆಲವು ಸ್ಥಳಗಳು ಕೋರ್ಟ್ನಲ್ಲಿ ಸ್ಟೇ ಆಗಿದ್ದು, ತೆರವಾಗಿಲ್ಲ. ಅದಕ್ಕೆ ಜಂಟಿಯಾಗಿ ಸ್ಥಳ ಗುರುತಿಸಲು ಅರ್ಜಿ ಹಾಕಿದರೆ ಅಂತಹ ಸ್ಥಳವನ್ನು ಕೂಡಲೇ ರಸ್ತೆ ಅಭಿವೃದ್ಧಿಗೆ ನೀಡುತ್ತೇವೆ ಎಂದರು.
ಮಠದಲ್ಲಿ ಸರ್ಪಸಂಸ್ಕಾರ ಸಹಿತ ಕೆಲವು ಸೇವೆಗಳು ನಡೆಯುತ್ತಿರುವ ವಿಷಯದಲ್ಲಿ ಕೆಲವರು ಆರೋಪದಲ್ಲಿ ತೊಡಗಿದ್ದರು. ದೇವಸ್ಥಾನದ ಆಡಳಿತ ಮಂಡಳಿ ದೇವಸ್ಥಾನಕ್ಕೆ ಯಾವುದೇ ಮಠ ಮಂದಿರಗಳು ಇಲ್ಲ ಎಂದು ಸ್ಪಷ್ಟನೆ ನೀಡಿತ್ತು. ಇದಾದ ಮೇಲೂ ಮಠ ಹಾಗೂ ದೇವಸ್ಥಾನ ಪರವಿರುವ ಕೆಲವರು ಭಕ್ತರು ಪರಸ್ಪರ ಪೊಲೀಸ್ ಠಾಣೆಗೆ ದೂರು, ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿದ್ದರು.
ಉಪವಾಸ ಸ್ಥಗಿತಕ್ಕೆ ಪೇಜಾವರ ಶ್ರೀ ಮನವಿ
ಉಡುಪಿ: ಶ್ರೀ ವಿದ್ಯಾಪ್ರಸನ್ನತೀರ್ಥರು ತಮಗಾಗಿರುವ ತೊಂದರೆ, ಉಪಟಳಗಳ ಬಗ್ಗೆ ವಿಷಾದ ಪಟ್ಟು ಉಪವಾಸ ಆರಂಭಿಸಿ¨ªಾರೆಂಬುದನ್ನು ತಿಳಿದು ತುಂಬಾ ಕಳವಳವಾಗಿದೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಶ್ರೀಗಳು ತಿಳಿಸಿದ್ದಾರೆ. ನವರಾತ್ರಿ ಮುಗಿದ ಕೂಡಲೇ ಸುಬ್ರಹ್ಮಣ್ಯಕ್ಕೆ ತೆರಳಿ ಸಂಬಂಧಪಟ್ಟ ಎಲ್ಲರನ್ನೂ ಸಂಪರ್ಕಿಸಿ ಸಮಸ್ಯೆಯನ್ನು ಬಗೆಹರಿಸಲು ವಿಶೇಷ ಪ್ರಯತ್ನ ಮಾಡಲಿದ್ದೇನೆ. ಎಂದು ಶ್ರೀಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Desi Swara: ಅಪಹಾಸ್ಯ ನೀಡಿದ ಅದೃಷ್ಟ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
Desi Swara: ದುಬೈ ವರ್ಲ್ಡ್ ಕಪ್ 2024- ಗೆಲ್ಲುವ ಅರಬ್ ಕುದುರೆಗಳ ನಾಗಾಲೋಟ!
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ