ಸುಬ್ರಹ್ಮಣ್ಯದಲ್ಲಿ ತಲೆ ಎತ್ತಲಿದೆ ವೃಕ್ಷೋದ್ಯಾನವನ


Team Udayavani, Jan 12, 2019, 5:02 AM IST

12-january-2.jpg

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಕುಮಾರಧಾರೆ ನದಿ ದಂಡೆ ಮೇಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಉದ್ದೇಶಿತ ವೃಕ್ಷೋದ್ಯಾನವನ ನಿರ್ಮಾಣ ಗೊಳ್ಳಲಿದೆ. ಈ ಮೂಲಕ ಸುಬ್ರಹ್ಮಣ್ಯ ದೇಗು ಲಕ್ಕೆ ಭೇಟಿ ಕೊಡುವವರಿಗೆ ಪ್ರಾಕೃತಿ ಸೊಬಗು ಸವಿಯುವ ಅವಕಾಶ ಲಭಿಸಲಿದೆ.

ಆರಂಭಿಕ ಹಂತದ ಕೆಲಸಗಳಿಗೆ ಗುರುವಾರ ಚಾಲನೆ ದೊರಕಿದೆ. ಮುಂದಿನ ಐದು ವರ್ಷದಲ್ಲಿ ಹಂತ-ಹಂತವಾಗಿ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್‌ ಸಿದ್ಧವಾಗಲಿದೆ. 5 ಕೋಟಿ ರೂ. ವೆಚ್ಚದಲ್ಲಿ ವೃಕ್ಷೋದ್ಯಾನವನ ನಿರ್ಮಾಣವಾಗಲಿದೆ. ಅರಣ್ಯ ಇಲಾಖೆ ಮೀಸಲು ಅರಣ್ಯದಲ್ಲಿ ಸ್ಥಳದ ಗಡಿ ಗುರುತು ಮಾಡಿದೆ. ಗಡಿ ಗುರುತು ಬಳಿಕ 17 ಲಕ್ಷ ರೂ. ವೆಚ್ಚದಲ್ಲಿ ಬೇಲಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದೆ. ಹಂತಹಂತವಾಗಿ ಅನುದಾನ ಬಳಸಿಕೊಂಡು ಉದ್ಯಾನವನ ನಿರ್ಮಿಸಲಾಗುತ್ತದೆ. ಕುಮಾರಧಾರೆ ಸ್ನಾನ ಘಟ್ಟದ ಮೂರು ಪಾರ್ಶ್ವಕ್ಕೆ ಹೊಂದಿಕೊಂಡು ಈ ಉದ್ಯಾನವನ ತಲೆಎತ್ತಲಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಿಂದ 2 ಕಿ.ಮೀ. ದೂರದ ಕ್ಷೇತ್ರದ ಪ್ರವೇಶ ಹಂತದಲ್ಲಿ ರಾ.ಹೆದ್ದಾರಿಗೆ ತಾಗಿಕೊಂಡೇ ಇರುವ ಮೀಸಲು ಅರಣ್ಯ ಪ್ರದೇಶದ 40 ಎಕ್ರೆಯ ಪೈಕಿ 25 ಎಕ್ರೆ ಜಾಗದಲ್ಲಿ ಸುಸಜ್ಜಿತ ವೃಕ್ಷೋದ್ಯಾನವನ ನಿರ್ಮಾಣವಾಗಲಿದೆ. ನದಿ ತಟದಲ್ಲಿ ನಿಸರ್ಗ ರಮಣೀಯ ತಾಣದಲ್ಲಿ ಉದ್ಯಾವನಕ್ಕೆ ಪ್ರವೇಶಿಸಲು ಆಕರ್ಷಕ ಮಹಾದ್ವಾರ ತೆರೆದುಕೊಳ್ಳಲಿದೆ.

ಮಲೆನಾಡಿನಲ್ಲಿ ಬೆಳೆಯುವ ಅಪೂರ್ವ ಸಸ್ಯರಾಶಿಗಳನ್ನು ಇಲ್ಲಿ ಬೆಳೆಸಲಾಗುತ್ತಿದೆ. ಜತೆಗೆ 17 ಬಗೆ ಜಾತಿಯ ಬಿದಿರು ಬೆಳೆಯಲಾಗುತ್ತದೆ. ವಿವಿಧ ಜಾತಿಗಳ ಬಣ್ಣಬಣ್ಣದ ಹೂವು ಹಾಗೂ ಪಶ್ಚಿಮ ಘಟ್ಟದ ಅಮೂಲ್ಯ ಮರಗಳನ್ನು ಬೆಳೆದು ಸುಂದರ ಉದ್ಯಾನವನ ಸ್ಥಾಪಿಸಲಾಗುತ್ತಿದೆ. ಸರಕಾರವು ಅರಣ್ಯ ಇಲಾಖೆ ಮೂಲಕ ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಸಸ್ಯಗಳ ಉದ್ಯಾನವನವನ್ನು ತಾಲೂಕುವಾರು ನಿರ್ಮಿಸಲು ಯೋಜನೆ ರೂಪಿಸಿತ್ತು. ಸುಳ್ಯ ತಾಲೂಕಿನ ಯಾವುದಾದರೊಂದು ಸ್ಥಳದಲ್ಲಿ ಉದ್ಯಾನವನ ನಿರ್ಮಿಸಲು ಅರಣ್ಯ ಇಲಾಖೆ ಎರಡು ವರ್ಷದ ಹಿಂದೆ ಮಂಜೂರಾತಿ ನೀಡಿತ್ತು. ಈಗ ಕುಕ್ಕೆ ಸುಬ್ರಹ್ಮಣ್ಯ ದೇಗುಲ ಆಸಕ್ತಿ ವಹಿಸಿದೆ.

ಬೋಟಿಂಗ್‌ ವ್ಯವಸ್ಥೆ
ಕುಮಾರಧಾರೆ ಸ್ನಾನ ಘಟ್ಟದಲ್ಲಿ ಪ್ರವಾಸಿಗರಿಗಾಗಿ ಬೋಟಿಂಗ್‌ ವ್ಯವಸ್ಥೆ ಇರುತ್ತದೆ. ವಿಶಾಲ ನೀರಿನ ಅಶ್ರಯದ ಜಾಗದಲ್ಲಿ ಬೋಟಿಂಗ್‌ ಮೂಲಕ ಸಂಚರಿಸಿ ಖುಷಿ ಪಡೆಯಬಹುದು. ಕ್ಷೇತ್ರದ ಮಹಿಮೆ, ಇತಿಹಾಸ ಸಾರುವ ಸ್ಟಾ ್ಯಚ್ಯುಗಳನ್ನು ಉದ್ಯಾನವನದ ಒಳಗೆ ಸ್ಥಾಪಿಸಲಾಗುತ್ತದೆ. ಅವಿಸ್ಮರಣೀಯ ಘಟನೆಗಳು ಹಾಗೂ ಸುತ್ತಮುತ್ತಲ ಪರಿಸರದ ಪ್ರೇಕ್ಷಣೀಯ ಸ್ಥಳಗಳ‌ ಕುರಿತು ಮಾಹಿತಿ ನೀಡುವ ವ್ಯವಸ್ಥೆಯನ್ನೂ ಮಾಡಲಾಗುತ್ತದೆ.

ಆವಶ್ಯವಾಗಿತ್ತು
ಕುಕ್ಕೆ ಸುಬ್ರಹ್ಮಣ್ಯಕ್ಕೆ ಭಕ್ತರು, ಯಾತ್ರಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಬರುತ್ತಾರೆ. ಅವರು ಬಿಡುವಿನ ವೇಳೆಯಲ್ಲಿ ಸಮಯ ಕಳೆಯಲು ಪ್ರೇಕ್ಷಣೀಯ ಸ್ಥಳಗಳು, ವಿಶ್ರಾಂತಿ ಧಾಮಗಳು ಇಲ್ಲಿಲ್ಲ. ದಿನವಿಡೀ ಕೊಠಡಿಗಳಲ್ಲಿಯೇ ಕಾಲ ಕಳೆಯಬೇಕಾದ ಸ್ಥಿತಿ ಇದೆ. ಹೀಗಾಗಿ ಇಲ್ಲಿ ಪ್ರವಾಸಿ ಕೇಂದ್ರ ತೆರೆಯುವ ಆವಶ್ಯಕತೆ ಇತ್ತು. ಪ್ರಸ್ತುತ ಅದಕ್ಕೆ ಕಾಲ ಕೂಡಿಬಂದಿದೆ.

ಸಂಪೂರ್ಣ ಪರಿಸರ ಸ್ನೇಹಿ
ಟ್ರೀ ಪಾರ್ಕ್‌ ಪರಿಸರ ಸ್ನೇಹಿಯಾಗಿ ಜಾರಿಗೊಳಿಸಲಾಗುತ್ತಿದೆ. ಮೀಸಲು ಅರಣ್ಯದಲ್ಲಿ ಇರುವ ಯಾವುದೇ ಗಿಡಮರಗಳಿಗೆ ಹಾನಿ ಮಾಡದೆ ಈಗಿನ ಸ್ಥಿತಿಯಲ್ಲಿರುವಂತೆಯೇ ಮೂಲ ಸ್ಥಿತಿಯನ್ನು ಉಳಿಸಿಕೊಂಡು ಸಸ್ಯ ರಾಶಿಗಳ ಮಧ್ಯೆ ಇತರೆ ವ್ಯವಸ್ಥೆ ಮಾಡಲಾಗುತ್ತದೆ. ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡಲಾಗುತ್ತದೆ.

ವೃಕ್ಷೋದ್ಯಾನವನದಲ್ಲಿ ಏನೇನಿರಲಿದೆ?
ಇಲ್ಲಿ ಪಶ್ಚಿಮ ಘಟ್ಟದ ನಾನಾ ಅಮೂಲ್ಯ ಮರಗಿಡ, ಸಸಿ ಬೆಳೆಸಿ ಅಭಿವೃದ್ಧಿಗೊಳಿಸಲಾಗುತ್ತಿದೆ. ಆಯುರ್ವೇದ ಸಸ್ಯಗಳು, ವಿವಿಧ ಜಾತಿಯ ಗಿಡ, ಮರಗಳನ್ನು ಬೆಳೆಸಲಾಗುತ್ತಿದೆ. ಮಕ್ಕಳಿಗೆ ಆಟವಾಡಲು ಅನುಕೂಲವಾದ ಆಟಿಕೆಗಳ ಪಾರ್ಕ್‌, ಮರದಿಂದ ಮರಕ್ಕೆ ಜೋಡಿಸಿ ಸಂಚರಿಸಲು ಅನುಕೂಲವಾಗುವಂತೆ ಪಥ, ಪಕ್ಷಿ ವೀಕ್ಷಣಾ ಪಥ, ನೈಸರ್ಗಿಕ ಪಥ, ರಾಶಿವನ, ನಕ್ಷತ್ರವನ, ಆಯುರ್ವೇದ ಸಸ್ಯವನ ಇರಲಿದೆ. ಪ್ರತ್ಯೇಕ ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಪ್ರವಾಸಿಗರಿಗೆ ಕುಳಿತುಕೊಳ್ಳಲು ಬೆಂಚ್‌ಗಳ ವ್ಯವಸ್ಥೆ, ವಾಯು ವಿಹಾರಕ್ಕೆ ರಸ್ತೆ ಹಾಗೂ ಅಲ್ಲಲ್ಲಿ ಪ್ರವಾಸಿಗರು ಕುಳಿತು ವಿಶ್ರಾಂತಿ ಪಡೆಯಲು ಅತ್ಯಂತ ಆಕರ್ಷಣೀಯ ಗೋಪುರ ಮಾದರಿಯ ಸಭಾಂಗಣ, ವೀಕ್ಷಣಾ ಗೋಪುರ, ಥಿಯೇಟರ್‌, ಮುಕ್ತ ಸಭಾಂಗಣ ಉದ್ಯಾನವನದಲ್ಲಿರುತ್ತದೆ.

ಚಾಲನೆ ದೊರಕಿದೆವೃಕ್ಷೋದ್ಯಾನವನದ ಮೊದಲ ಹಂತದ ಕೆಲಸಕ್ಕೆ ಚಾಲನೆ ನೀಡಲಾಗಿದೆ. ಸರಕಾರದಿಂದ ಬಿಡುಗಡೆಗೊಂಡ ಅನುದಾನದಲ್ಲಿ ಹಂತ-ಹಂತವಾಗಿ ಕೆಲಸ ನಡೆಸಿ ನಿಗದಿತ ಸಮಯದೊಳಗೆ ಕಾಮಗಾರಿ ಮುಗಿಸುವ ಗುರಿ ಇರಿಸಿಕೊಳ್ಳಲಾಗಿದೆ. -ತ್ಯಾಗರಾಜ್‌,
ಆರ್‌ಎಫ್ಒ, ಸುಬ್ರಹ್ಮಣ್ಯ ಅರಣ್ಯ ವಲಯ

ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.