ಸುಬ್ರಹ್ಮಣ್ಯ: ಹಲ್ಲೆ ಖಂಡಿಸಿ ಪ್ರತಿಭಟನೆ, ಸಭೆ


Team Udayavani, Oct 26, 2018, 11:09 AM IST

subrahmanya.jpg

ಸುಬ್ರಹ್ಮಣ್ಯ: ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್‌ ಪಂಜ ಅವರ ಮೇಲೆ ಚೈತ್ರಾ ಕುಂದಾಪುರ ಹಾಗೂ ಅವರ ಬೆಂಬಲಿಗರು ಬುಧವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ನಡೆಸಿದ ಹಲ್ಲೆಯನ್ನು ಖಂಡಿಸಿ ವರ್ತಕರು ಗುರುವಾರ ಕುಕ್ಕೆ ಸುಬ್ರಹ್ಮಣ್ಯ ಬಂದ್‌ ಆಚರಿಸಿ, ಪ್ರತಿಭಟನೆ ನಡೆಸಿದರು.

ನಗರದ ವರ್ತಕರು, ಆಟೋ ರಿಕ್ಷಾ, ಖಾಸಗಿ ವಾಹನಗಳ ಚಾಲಕ – ಮಾಲಕರು, ಸಂಘಟನೆಗಳ ಸದಸ್ಯರು ದೇವಸ್ಥಾನದ ಆದಿಶೇಷ ವಸತಿಗೃಹದ ಬಳಿ ಜಮಾಯಿಸಿ, ರಥಬೀದಿ ಮೂಲಕ ಕುಮಾರಧಾರಾ ತನಕ ಪ್ರತಿಭಟನ ಮೆರವಣಿಗೆ ಮಾಡಿದರು. ಆದಿಶೇಷ ವಸತಿಗೃಹದ ಬಳಿ ಪ್ರತಿಭಟನ ಸಭೆ ನಡೆಯಿತು.

ಮುಖಂಡರಾದ ರಾಜೇಶ್‌ ಎನ್‌.ಎಸ್‌, ಶಿವರಾಮ ರೈ ಮಾತನಾಡಿ ಕೃತ್ಯವನ್ನು ಖಂಡಿಸಿದರು. ಕಡಬ, ಗುತ್ತಿಗಾರು, ಹರಿಹರ, ಕೊಲ್ಲಮೊಗ್ರು, ಐನಕಿದು, ಪಂಜ, ಬಳ್ಪ ಗ್ರಾಮಸ್ಥರೂ ಪಾಲ್ಗೊಂಡಿದ್ದರು.

ಗುರುವಾರ ಪೂರ್ವಾಹ್ನ 10 ಗಂಟೆಗೆ ವರ್ತಕರು ಅಂಗಡಿ- ಮುಂಗಟ್ಟುಗಳನ್ನು ಮುಚ್ಚಿ, ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಭಕ್ತರಿಗೆ ಬೆಳಗ್ಗಿನ ಉಪಾಹಾರಕ್ಕೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ಹೊಟೇಲ್‌ಗ‌ಳನ್ನು ಕೊಂಚ ತಡವಾಗಿ ಬಂದ್‌ ಮಾಡಲಾಯಿತು. ದೇವಸ್ಥಾನದಿಂದಲೂ ಭಕ್ತರಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನದ ಭೋಜನ ವ್ಯವಸ್ಥೆಯಲ್ಲೂ ವ್ಯತ್ಯಾಸವಾಗಲಿಲ್ಲ. ಶಿಕ್ಷಣ ಸಂಸ್ಥೆಗಳು, ಬ್ಯಾಂಕ್‌ಗಳು ಎಂದಿನಂತೆ ಕಾರ್ಯಾಚರಿಸಿದವು.

ಖಂಡನೆ-ಅಭಿನಂದನ ಸಭೆ
ಗುರುಪ್ರಸಾದ್‌ ಮೇಲಿನ ಹಲ್ಲೆ ಖಂಡಿಸಿ ಕುಕ್ಕೆ ಸುಬ್ರಹ್ಮಣ್ಯದ ವರ್ತಕರು ಗುರುವಾರ ಕರೆ ನೀಡಿದ್ದ ಬಂದ್‌ ಯಶಸ್ವಿ ಗೊಳಿಸಿರುವುದಕ್ಕೆ ಸಂಜೆ ರಥಬೀದಿಯಲ್ಲಿ ಅಭಿನಂದನ ಸಭೆ ನಡೆಯಿತು. ಸಭೆಯಲ್ಲಿ ಧರ್ಮಪ್ರಚಾರಕ ಲಕ್ಷ್ಮೀಶ ಗಬ್ಲಿಡ್ಕ, ಹಿಂದೂ ಮುಖಂಡರಾದ ಕಿಶೋರ್‌ ಶಿರಾಡಿ, ಸತೀಶ್‌ ಕೂಜುಗೋಡು, ತಾ.ಪಂ. ಸದಸ್ಯ ಅಶೋಕ್‌ ನೆಕ್ರಾಜೆ, ಜಿಲ್ಲಾ ಧಾರ್ಮಿಕ ಪರಿಷತ್‌ ಸದಸ್ಯೆ ವಿಮಲಾ ರಂಗಯ್ಯ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಮಂಜುನಾಥ ರಾವ್‌, ವರ್ತಕರ ಸಂಘದ ಶಿವಕುಮಾರ್‌ ಕಾಮತ್‌, ಶಿವರಾಮ ರೈ, ರಾಜೇಶ್‌ ಎಂ.ಎಸ್‌., ಗ್ರಾ.ಪಂ. ಸದಸ್ಯೆ ಹರಿಣಾಕ್ಷಿ, ಮಾಜಿ ಸದಸ್ಯೆ ಲಕ್ಷ್ಮೀ ಎಸ್‌. ಮಾತನಾಡಿದರು. ಬಳಿಕ ಪೊಲೀಸರಿಗೆ ಮನವಿ ಸಲ್ಲಿಸಲಾಯಿತು.

ಟಾಪ್ ನ್ಯೂಸ್

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.