ಸುಬ್ರಹ್ಮಣ್ಯದ ಅಜಿತೇಶ್ ಭೂಸೇನೆಯ ಲೆಫ್ಟಿನೆಂಟ್ ಆಗಿ ಆಯ್ಕೆ
Team Udayavani, Dec 31, 2022, 6:50 AM IST
ಸುಬ್ರಹ್ಮಣ್ಯ : ಸುಬ್ರಹ್ಮಣ್ಯದ ಅಜಿತೇಶ್ ಪಿ.ಎಸ್. ಭೂಸೇನೆಯ ಲೆಫ್ಟಿನೆಂಟ್ ಹುದ್ದೆಗೆ ಆಯ್ಕೆಗೊಂಡಿದ್ದಾರೆ.
ಯು.ಪಿ.ಎಸ್.ಸಿ. ನಡೆಸಿದ ಕಂಬೈನ್ ಡಿಫೆನ್ಸ್ ಸರ್ವಿಸ್ ಪರೀಕ್ಷೆ ಹಾಗೂ ಅಲಹಾಬಾದ್ ಸರ್ವಿಸ್ ಸೆಲೆಕ್ಷನ್ ಬೋರ್ಡ್ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಈ ಹುದ್ದೆಗೆ ಆಯ್ಕೆಗೊಂಡಿದ್ದಾರೆ. ಅಜಿತೇಶ್ ಪ್ರಸ್ತುತ ಡೆಹ್ರಾಡೂನ್ನಲ್ಲಿರುವ ಫಾರೆಸ್ಟ್ ರಿಸರ್ಚ್ ಇನ್ಸ್ಟಿಟ್ಯೂಟ್ನ ದ್ವಿತೀಯ ಎಂಎಸ್ಸಿ ವಿದ್ಯಾರ್ಥಿಯಾಗಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಸಂಸ್ಥೆಯ ಮುಖ್ಯಶಿಕ್ಷಕಿ ವಿದ್ಯಾರತ್ನ ಹಾಗೂ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯ ನಿವೃತ್ತ ಮುಖ್ಯಶಿಕ್ಷಕ ಶ್ರೀಕೃಷ್ಣ ಶರ್ಮ ಪಿ. ಅವರ ಪುತ್ರರಾಗಿರುವ ಅಜಿತೇಶ್ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದಲ್ಲಿ, ಪಿಯು ಶಿಕ್ಷಣವನ್ನು ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ, ಫಾರೆಸ್ಟರಿಯಲ್ಲಿ ಬಿ.ಎಸ್ಸಿ ಪದವಿಯನ್ನು ಮಡಿಕೇರಿಯ ಪೊನ್ನಂಪೇಟೆ ಕಾಲೇಜಿನಲ್ಲಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ