ಸುಬ್ರಹ್ಮಣ್ಯ : ವ್ಯಕ್ತಿಗೆ ಚೂರಿ ಇರಿತ; ಆರೋಪಿ ಪರಾರಿ
Team Udayavani, Jul 3, 2022, 10:59 PM IST
ಸುಬ್ರಹ್ಮಣ್ಯ : ಒಂಟಿಯಾಗಿ ಜೀವನ ನಡೆಸುತ್ತಿದ್ದ ವ್ಯಕ್ತಿಯೋರ್ವರಿಗೆ ಚೂರಿ ಇರಿದು ಪರಾರಿಯಾಗಿರುವ ಘಟನೆ ಜು. 2ರಂದು ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಕೊಲ್ಲಮೊಗ್ರು ಗ್ರಾಮದ ತೋಟದ ಮಜಲು ಎನ್ನುವಲ್ಲಿ ಘಟನೆ ನಡೆದಿದೆ. ಲುಕೋಸ್ (46) ಕೃತ್ಯದಿಂದ ಗಾಯಗೊಂಡಿರುವ ವ್ಯಕ್ತಿ. ಲುಕೋಸ್ ಕೊಲ್ಲಮೊಗ್ರುವಿನ ತೋಟದ ಮಜಲು ಎನ್ನುವಲ್ಲಿ 10 ವರ್ಷದಿಂದ ನೆಲೆಸಿದ್ದು ಜಾಗ, ಮನೆ ಹೊಂದಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ನಿರ್ವಹಿಸುತ್ತಾ ಜೀವನ ನಡೆಸುತ್ತಿದ್ದರು. ಅವರ ಪತ್ನಿ, ಮಕ್ಕಳು ದೂರವಾಗಿ ಪುತ್ತೂರಿನಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.
ಶನಿವಾರ ಮಧ್ಯಾಹ್ನ ಸೋಮ ಎನ್ನುವಾತ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಕೃತ್ಯಕ್ಕೆ ಕಾರಣ ತಿಳಿದುಬಂದಿಲ್ಲ. ಸ್ಥಳೀಯರು ನೀಡಿದ ಮಾಹಿತಿಯಂತೆ ಘಟನ ಸ್ಥಳಕ್ಕೆ ಸುಬ್ರಹ್ಮಣ್ಯ ಎಸ್ಸೆ„ ಜಂಬೂರಾಜ್ ಮಹಾಜನ್ ಭೇಟಿ ನೀಡಿದ್ದು, ನೆಲದಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಸ್ವತಃ ಪೊಲೀಸರೇ ಆ್ಯಂಬ್ಯುಲೆನ್ಸ್ ಮೂಲಕ ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪ್ರಸ್ತುತ ಗಾಯಾಳು ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳೀಯ ವ್ಯಕ್ತಿ ನೀಡಿದ ದೂರಿನಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಪತ್ತೆಗೆ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ