ಪೂರ್ತಿಯಾಗದ ಸುಬ್ರಹ್ಮಣ್ಯಮಂಜೇಶ್ವರ ಅಂತಾರಾಜ್ಯ ಹೆದ್ದಾರಿ ವಿಸ್ತರಣೆ 


Team Udayavani, Nov 20, 2017, 4:40 PM IST

20-Nov-15.jpg

ವಿಟ್ಲ : ಸುಬ್ರಹ್ಮಣ್ಯ – ಮಂಜೇಶ್ವರ ಅಂತಾರಾಜ್ಯ ಹೆದ್ದಾರಿ ವಿಸ್ತರಣೆ ಕಾಮಗಾರಿ ಇನ್ನೂ ಪೂರ್ತಿಯಾಗಿಲ್ಲ. ಐದು ವರ್ಷಗಳು ಸಂದರೂ ಕಾಮಗಾರಿ ಅರ್ಧಂಬರ್ಧ ಆಗಿದೆ. ರಸ್ತೆ ವಿಸ್ತರಣೆಯಾಗಿದ್ದರೂ ಕೆಲವೆಡೆ ಸೇತುವೆ ವಿಸ್ತರಣೆ, ತಡೆಗೋಡೆಯಾಗಿಲ್ಲ. ಭೂಸ್ವಾಧೀನಗೊಳಿಸಿದರೂ ಫಲಾನುಭವಿಗಳಿಗೆ ಪರಿಹಾರ ನೀಡಿಲ್ಲ. ಅಪಘಾತ ಸಂಭವಿಸಬಹುದಾದ ಜಾಗದಲ್ಲಿ ಅಪಾಯಕಾರಿ ಸನ್ನಿವೇಶ ಬದಲಾಗಿಲ್ಲ. ಇದು ಪುತ್ತೂರು, ಬುಳೇರಿಕಟ್ಟೆ, ಪುಣಚ, ಕೇಪು, ಅಳಿಕೆ ಗ್ರಾಮಸ್ಥರ ದೂರು.

ಪುಣಚದ ಮೂಲಕ ರಸ್ತೆ
ಸುಬ್ರಹ್ಮಣ್ಯ – ಮಂಜೇಶ್ವರ ಅಂತಾ ರಾಜ್ಯ ಹೆದ್ದಾರಿಯು ಪುತ್ತೂರು, ಬುಳೇರಿಕಟ್ಟೆ, ಪುಣಚ, ಕೇಪು, ಅಳಿಕೆ, ಕನ್ಯಾನ, ಕರೋಪಾಡಿ ಗ್ರಾಮದ ವ್ಯಾಪ್ತಿಯಲ್ಲಿ ಸಾಗಿ ಕೇರಳದ ಮಂಜೇಶ್ವರ ತಾಲೂಕಿಗೆ ಸೇರುತ್ತದೆ. ಈ ಹೆದ್ದಾರಿಯು ಹಳ್ಳಿ ಭಾಗಗಳಲ್ಲಿ ಸಾಗುತ್ತದೆ. ರಸ್ತೆ ಅತ್ಯಂತ ಉಪಯುಕ್ತವಾಗಿದ್ದು, ನಿತ್ಯ ಸಾವಿರಾರು ವಾಹನಗಳು ಹಾಗೂ ಸಾವಿರಾರು ಮಂದಿ ಸಂಚಾರಕ್ಕೆ ಬಳಸುತ್ತಾರೆ.

ಅಪೂರ್ಣ ಕಾಮಗಾರಿ
ಇಲ್ಲಿ ಕೆಲವು ಕಡೆಗಳಲ್ಲಿ ಕಾಮಗಾರಿ ಪೂರ್ತಿಯಾಗಿಲ್ಲ. ಪೂರ್ತಿಯಾದ ಕೆಲ ಕಡೆಗಳಲ್ಲಿ ಡಾಮರು ಕಿತ್ತುಹೋಗಿದೆ. ಹಲವು ಭಾಗದಲ್ಲಿ ರಸ್ತೆಯಲ್ಲಿ ನೀರು ಹರಿಯುತ್ತಿದ್ದರೂ ಚರಂಡಿ ದುರಸ್ತಿಯಾಗಿಲ್ಲ. ದೇವಸ್ಯ, ಮಚ್ಚಿಮಲೆ ಸೇತುವೆಗಳಲ್ಲಿ ಬಿರುಮಲೆ ಗುಡ್ಡದ ಹಾಗೂ ಪರ್ಲಡ್ಕ ಭಾಗದ ನೀರಿನ ಹರಿವು ಹೋಗುತ್ತಿದ್ದರೂ ಅದನ್ನು ಎತ್ತರಿಸುವ ಕಾರ್ಯವಾಗಿಲ್ಲ. ನಿತ್ಯ ಈ ಸೇತುವೆಯಲ್ಲಿ ಸಣ್ಣಪುಣ್ಣ ಅಪಘಾತಗಳು ನಡೆಯುತ್ತಲೇ ಇವೆ. ಇದುವರೆಗೆ ಅಪಘಾತದಿಂದ ಮೂರು ನಾಲ್ಕು ಜೀವಗಳು ಬಲಿಯಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಆದ್ಯತೆ ನೀಡದಿರುವುದು ನಿತ್ಯ ಸಂಚಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ. ದೇವಸ್ಯ ಸೇತುವೆ ವಿಸ್ತರಣೆಯಾಗಿಲ್ಲ. ವೆಂಕಟನಗರ ಕಾಲೇಜಿನಲ್ಲಿ ತಿರುವು, ಹಲವು ಕಡೆ ತಿರುವುಗಳ ಕಾಮಗಾರಿ ಅವೈಜ್ಞಾನಿಕವಾಗಿದೆ.

ಸಣ್ಣ ತೊರೆಗೆ ಬೃಹತ್‌ ಯೋಜನೆ
ಅಟ್ಲಾರು ಎಂಬಲ್ಲಿ ಸಣ್ಣ ತೊರೆಯಿದ್ದು, ಇದಕ್ಕೆ ಸುಮಾರು 4 ಕೋ.ರೂ. ವೆಚ್ಚದಲ್ಲಿ ಬೃಹತ್‌ ಸೇತುವೆ ನಿರ್ಮಾಣ ಆಗಿದೆ. ಇದರಲ್ಲಿ ಚಣಿಲ ಸಹಿತ 1 ಕಿ.ಮೀ. ಭಾಗದ ನೀರಿನ ಹರಿವು ಮಾತ್ರ ಇದೆ. ಇಲ್ಲಿಗೆ ಇಂತಹ ಬೃಹತ್‌ ಯೋಜನೆ ಅಗತ್ಯವಿರಲಿಲ್ಲ.

ರೈತನ ಸಮಸ್ಯೆ ಕೇಳುವವರಿಲ್ಲ!
ಅಟ್ಲಾರು ಹಳೆ ಸೇತುವೆ ಸಾಕಷ್ಟು ಅಗಲವಾಗಿದ್ದರೂ ಎತ್ತರವಿಲ್ಲ ಎಂಬ ನೆಪದಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಲಾಗಿದೆ. ಆದರೆ ಹೊಸ ಸೇತುವೆಗೆ ಕೃಷಿಕರ ಜಾಗವನ್ನು ಸ್ವಾಧೀನಪಡಿಸಿ ಇನ್ನೂ ಪರಿಹಾರ ವಿತರಿಸಿಲ್ಲ ಎನ್ನಲಾಗಿದೆ. ಕೃಷಿಕ ಧನಂಜಯ ರೈ ಅವರಿಗೆ ಸೇರಿದ 24 ಸೆಂಟ್ಸ್‌ ಕೃಷಿ ಜಾಗದಲ್ಲಿ ಸೇತುವೆ ನಿರ್ಮಾಣವಾಗಿದೆ. ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಅವರಿಗೆ ಹಣದ
ಆವಶ್ಯಕತೆಯಿದ್ದು, ಪರಿಹಾರ ಮೊತ್ತವನ್ನು ಶೀಘ್ರದಲ್ಲಿ ಅಪೇಕ್ಷಿಸುತ್ತಿದ್ದಾರೆ. ಮೂಲದ ಪ್ರಕಾರ ಸೋಮವಾರ ಅನುದಾನ ಸಿಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ರೈತ ಸಂಘದಿಂದ ತೀವ್ರ ಹೋರಾಟ 
ಅತಿ ಅಗತ್ಯವಿರುವ ಪ್ರದೇಶಗಳಲ್ಲಿ ಸೇತುವೆ ನಿರ್ಮಿಸಿಲ್ಲ. ಯಾವುದೇ ಅಪಘಾತ ಸಂಭವಿಸದ ಅಟ್ಲಾರು ಸೇತುವೆಯನ್ನು ಬೃಹತ್‌ ಮೊತ್ತ ಬಳಸಿಕೊಂಡು ಹೊಸದಾಗಿ ನಿರ್ಮಾಣ ಮಾಡಲಾಗಿದೆ. ಈ ಬಗ್ಗೆ ವಿಶೇಷ ತನಿಖೆಯಾಗಬೇಕು. ಕೃಷಿಕರ ಜಾಗವನ್ನು ಕಬಳಿಸಿ ಪರಿಹಾರ ಕೊಡದೆ ಸತಾಯಿಸುತ್ತಿರುವ ಬಗ್ಗೆಯೂ ದೂರುಗಳು ಬರುತ್ತಿವೆ. ಸಂಬಂಧ ಪಟ್ಟವರು ತತ್‌ಕ್ಷಣ ಪರಿಹಾರ ಒದಗಿಸದಿದ್ದಲ್ಲಿ, ರೈತ ಸಂಘವು ತೀವ್ರರೀತಿಯ ಹೋರಾಟ ನಡೆಸಬೇಕಾಗುತ್ತದೆ.
ಶ್ರೀಧರ ಶೆಟ್ಟಿ ಬೆ„ಲುಗುತ್ತು,
  ಪುಣಚ, ಜಿಲ್ಲಾಧ್ಯಕ್ಷರು, ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ದ. ಕ.

ಇಲ್ಲಿ ಅತ್ಯಗತ್ಯವಾದ ಮಣಿಲ, ದೇವಸ್ಯ ಹಾಗೂ ಮಚ್ಚಿಮಲೆ ಸೇತುವೆ ಮಾತ್ರ ಅನುದಾನವಿಲ್ಲದ ನೆಪದಲ್ಲಿ ಇನ್ನೂ ಕಿರಿದಾಗಿಯೇ ಉಳಿದುಕೊಂಡಿವೆ. ಇಲ್ಲಿ ಅಪಘಾತಗಳ ಸಂಭವನೀಯತೆ ಜಾಸ್ತಿ. ಈಗಾಗಲೇ ಅನೇಕ ಅಪಘಾತಗಳು ಸಂಭವಿಸಿವೆ. ಬೊಳ್ಳಣ ಮತ್ತು ಬೇಜಾರದಲ್ಲಿ ಅಪಘಾತ ವಲಯವಾಗಿದೆ. ಅದಕ್ಕೆ ಸೂಕ್ತ ಕ್ರಮ ಕೈಗೊಂಡಿಲ್ಲ.
– ಗ್ರಾಮಸ್ಥರು

ಉದಯಶಂಕರ್‌ ನೀರ್ಪಾಜೆ 

ಟಾಪ್ ನ್ಯೂಸ್

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Subramanya: ಸಿಡಿಲು ಬಡಿದು ನವವಿವಾಹಿತ ಸಾವು: ವಿವಿಧೆಡೆ ಸಿಡಿಲು ಸಹಿತ ಮಳೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.