ಸುಬ್ರಹ್ಮಣ್ಯ: ಯುವಕನಿಗೆ ತಂಡದಿಂದ ಹಲ್ಲೆ ಆರೋಪ !
Team Udayavani, Jan 7, 2023, 1:13 AM IST
ಸುಬ್ರಹ್ಮಣ್ಯ: ಹಿಂದೂ ವಿದ್ಯಾರ್ಥಿನಿ ಜತೆ ಮುಸ್ಲಿಂ ಹುಡುಗ ತಿರುಗಾಡುತ್ತಿದ್ದಾನೆಂದು ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಕಲ್ಲುಗುಂಡಿ ಯುವಕನೋರ್ವ ಸುಳ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಇನ್ನೊಂದೆಡೆ ನನ್ನ ಮಗಳಿಗೆ ಪ್ರೀತಿಸುವಂತೆ ಒತ್ತಡ ಹಾಕಿ ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿಯ ತಂದೆ ಹಲ್ಲೆಗೊಳಗಾದ ಯುವಕನ ವಿರುದ್ಧ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ಘಟನೆ ಜ. 5ರಂದು ಸುಬ್ರಹ್ಮಣ್ಯದ ಕುಮಾರಧಾರ ಜಂಕ್ಷನ್ ಬಳಿ ನಡೆದಿದೆ.
ಸಂಪಾಜೆ ಗ್ರಾಮದ ಕಲ್ಲುಗುಂಡಿ ಹನೀಫ್ ಅವರ ಮಗ ಅಫೀದ್ (20) ಹಲ್ಲೆಗೊಳಗಾದ ಹಾಗೂ ಮಾನಭಂಗಕ್ಕೆ ಯತ್ನ ಆರೋಪಿತ ಯುವಕ. ಅಫೀದ್ಗೆ ಇನ್ಸ್ಟಾಗ್ರಾಂನಲ್ಲಿ ಸುಬ್ರಹ್ಮಣ್ಯದ ವಿದ್ಯಾರ್ಥಿನಿಯ ಪರಿಚಯವಾಗಿದ್ದು, ಈ ಹಿಂದೆ 2-3 ಸಲ ಸುಬ್ರಹ್ಮಣ್ಯಕ್ಕೆ ಬಂದು ಭೇಟಿಯಾಗಿದ್ದ. ಗುರು ವಾರವೂ ಅವಳು ಸಂಜೆ ಬಸ್ ನಿಲ್ದಾಣದಲ್ಲಿ ಆತನೊಂದಿಗೆ ಮಾತ ನಾಡುತ್ತಿದ್ದ ವೇಳೆ 2-3 ಮಂದಿ ಬಂದು ಅಫೀದ್ನನ್ನು ಜೀಪೊಂದರಲ್ಲಿ ಹಾಕಿ ಕುಮಾರಧಾರ ಜಂಕ್ಷನ್ ಬಳಿಯ ಹಳೆ ಕಟ್ಟಡದ ಕೋಣೆಯೊಳಗ ಕೂಡಿ ಹಲ್ಲೆ ನಡೆ ಸಿ ದ್ದರು. 10-12 ಜನರು ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಅಫೀದ್ ಸುಬ್ರಹ್ಮಣ್ಯ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾನೆ.
ಮಾನಭಂಗಕ್ಕೆ ಯತ್ನ ಆರೋಪ
ಇದೇ ಪ್ರಕರಣಕ್ಕೆ ಸಂಬಂಧಿಸಿ ಯುವಕನ ವಿರುದ್ಧ ಯುವತಿಯ ತಂದೆ ದೂರು ನೀಡಿದ್ದಾರೆ. ಮಗಳು ಮನೆಗೆ ಹಿಂದಿರುಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವೇಳೆ ಅಫೀದ್ ಎಂಬಾತ ಮಗಳನ್ನು ಪ್ರೀತಿಸುವಂತೆ ಒತ್ತಡ ಹಾಕಿ, ಮಗಳ ದೂರವಾಣಿ ಸಂಖ್ಯೆ ಕೇಳಿದ್ದು, ನಿರಾಕರಿಸಿದ ಸಂದರ್ಭ ಅವಳ ಕೈ ಹಿಡಿದು ಮಾನಭಂಗಕ್ಕೆ ಯತ್ನಿಸಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ