ಸುಬ್ರಹ್ಮಣ್ಯ ಪರಿಸರದಲ್ಲಿ ಉತ್ತಮ ಮಳೆ


Team Udayavani, Feb 8, 2019, 12:30 AM IST

subramanya.jpg

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಪರಿಸರದಲ್ಲಿ ಗುರುವಾರ ಸಂಜೆ ಮಿಂಚು – ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟಿದ್ದಾನೆ. 

ಹರಿಹರ ಪಳ್ಳತ್ತಡ್ಕ ಗ್ರಾಮದ ಮಿತ್ತಮಜಲು ನಿವಾಸಿ ಕೃಷ್ಣಪ್ಪ ಅವರ ಪುತ್ರ ಪ್ರವೀಣ್‌ (22) ಮೃತಪಟ್ಟವರು. ಅವರು ಹೆತ್ತವರು ಮತ್ತು ಸಹೋದರಿ ಯನ್ನು ಅಗಲಿದ್ದಾರೆ.

ಪ್ರವೀಣ್‌ ಅವರು ಕುಮಾರಧಾರೆ ಬಳಿಯ ಖಾಸಗಿ ವಸತಿಗೃಹದ ಬಳಿ ಅಲಂಕಾರಿನ ಕೇಶವ ಮೇಸ್ತ್ರಿ ಜತೆ ಅಂಗಳಕ್ಕೆ ಇಂಟರ್‌ಲಾಕ್‌ ಅಳವಡಿ ಸುವ ಕಾರ್ಯದಲ್ಲಿ ನಿರತರಾಗಿ ದ್ದರು. ಇದ್ದಕ್ಕಿದ್ದಂತೆ ಮಳೆ ಸುರಿಯಲಾ ರಂಭಿಸಿದ ಕಾರಣ ಪಕ್ಕದಲ್ಲೆ ನಿಲ್ಲಿಸಿದ್ದ ಬೈಕಿಗೆ ಪ್ಲಾಸ್ಟಿಕ್‌ ಹೊದೆಸಿ ಅದರ ಮೇಲಿಡಲು ಕಲ್ಲನ್ನು ಅರಸುತ್ತಿದ್ದಾಗ ಅವರ ಮೇಲೆ ಸಿಡಿಲೆರಗಿದ್ದು, ಸ್ಥಳ ದಲ್ಲೇ ಮೃತಪಟ್ಟರು.

ಸಿಡಿಲಿನ ತೀವ್ರತೆಗೆ ದೇಹದಲ್ಲಿ ಸುಟ್ಟ ಗಾಯಾಗಳಾಗಿ ಕರಟಿ ಹೋಗಿದೆ. ಅವರ ಚಪ್ಪಲಿ ಒಂದಷ್ಟು ದೂರ ಹಾರಿಬಿದ್ದಿತ್ತು. ಜತೆಗಿದ್ದ ಇನ್ನೋರ್ವ ಕಾರ್ಮಿಕ ಪಾರಾಗಿದ್ದಾನೆ. ಪ್ರವೀಣ ಅವರನ್ನು ತತ್‌ಕ್ಷಣ ಕಡಬ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದನ್ನು ಖಚಿತಪಡಿ ಸಿದರು. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀರವ ಮೌನ
ಪ್ರವೀಣ್‌ ಹೆತ್ತವರು ಕೂಲಿ ಕಾರ್ಮಿಕರು. ಬಡತನದ ಕಾರಣ ಪಿಯುಸಿ ವರೆಗೆ ಓದಿದ ಬಳಿಕ ಪ್ರವೀಣ್‌ ಕೂಡ ಕೂಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಹೆತ್ತವರ ಏಕೈಕ ಪುತ್ರನಾಗಿರುವ ಈತ ಚುರುಕು ಮತಿಯಾಗಿದ್ದರು. ಮನೆಗೆ ಆಧಾರ ಸ್ತಂಭವಾಗಿದ್ದ ಮಗನನ್ನು ಕಳೆದು ಕೊಂಡ ಹೆತ್ತವರು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಊರಿನ ದೇಗುಲದಲ್ಲಿ ಬ್ರಹ್ಮ ಕಲಶೋತ್ಸವಕ್ಕೆ ಸಿದ್ಧತೆಗಳು ಸಂಭ್ರಮದಿಂದ ನಡೆ ಯು ತ್ತಿರುವಾಗ ಯುವಕನ ಸಾವಿನಿಂದ ಗ್ರಾಮದಲ್ಲಿ ನೀರವ ಮೌನ ಆವರಿಸಿಕೊಂಡಿದೆ.

ದಿಢೀರನೆ ಮಳೆ
ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತ ಗುರುವಾರ ಸಂಜೆ ವೇಳೆಗೆ ದಿಢೀರನೆ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಯಿತು. ಹರಿಹರ, ಕೊಲ್ಲಮೊಗ್ರು, ಬಾಳುಗೋಡು, ಗುತ್ತಿಗಾರು, ಕಲ್ಮಕಾರು ಗುತ್ತಿಗಾರು, ಯೇನೆಕಲ್ಲು, ಮೊದಲಾದ ಕಡೆಗಳಲ್ಲಿ ಉತ್ತಮ  ಮಳೆಯಾಗಿದೆ. ಕೆಎಸ್‌ಎಸ್‌ ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ಅಂತರ್‌ ಜಿಲ್ಲಾ ಪುರುಷರ ಕಬಡ್ಡಿ ಪಂದ್ಯಾಟ ನಡೆಯುತ್ತಿದ್ದು ಮಳೆಯಿಂದಾಗಿ ವೇದಿಕೆ, ಶಾಮಿಯಾನ ಧರಾಶಾಯಿಯಾಗಿವೆ. ಪಂದ್ಯಾಟಕ್ಕೂ ಮಳೆಯಿಂದ ಅಡ್ಡಿಯಾಯಿತು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.