ಸುಬ್ರಹ್ಮಣ್ಯದಲ್ಲಿ ಆಕರ್ಷಿಸಲಿದೆ ಸುಂದರ ವೃಕ್ಷೋದ್ಯಾನ

2020ನೇ ಫೆಬ್ರವರಿಗೆ ಬಳಕೆ ಸಿದ್ಧ ; 25 ಎಕ್ರೆಯಲ್ಲಿ ನಿರ್ಮಾಣ, ಸುಮಾರು 5 ಕೋಟಿ ರೂ. ವೆಚ್ಚ

Team Udayavani, Dec 16, 2019, 5:46 AM IST

1412SUB6A

ಸುಬ್ರಹ್ಮಣ್ಯ : ಧಾರ್ಮಿಕ ಪುಣ್ಯ ಕ್ಷೇತ್ರ ಕುಕ್ಕೆಯ ಕುಮಾರಧಾರಾ ನದಿ ದಡದಲ್ಲಿ ಸುಂದರವಾಗಿ ನಿರ್ಮಾಣಗೊಳ್ಳುತ್ತಿರುವ ವೃಕ್ಷೋದ್ಯಾನದ ಕೆಲಸಗಳು ಪ್ರಗತಿಯಲ್ಲಿವೆ. ಕಾಮಗಾರಿಗಳು ತ್ವರಿತವಾಗಿ ನಡೆದಲ್ಲಿ ಮುಂದಿನ ಎರಡು ತಿಂಗಳಲ್ಲಿ ಸಾರ್ವಜನಿಕರ ಬಳಕೆಗೆ ಉದ್ಯಾನವನ ಸಿಗಲಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದಿಂದ 2 ಕಿ.ಮೀ. ದೂರದಲ್ಲಿ ಕ್ಷೇತ್ರದ ಪ್ರವೇಶ ಹಂತದಲ್ಲಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡೇ ಇರುವ ಮೀಸಲು ಅರಣ್ಯ ಪ್ರದೇಶದ 40 ಎಕ್ರೆಯ ಪೈಕಿ 25 ಎಕ್ರೆ ಜಾಗದಲ್ಲಿ ಸುಸಜ್ಜಿತ ವೃಕ್ಷೋದ್ಯಾನ ನಿರ್ಮಾಣಗೊಳ್ಳುತ್ತಿದೆ. ನದಿ ತಟದಲ್ಲಿ ನಿಸರ್ಗ ರಮಣೀಯ ತಾಣದಲ್ಲಿ ಉದ್ಯಾವನಕ್ಕೆ ಪ್ರವೇಶಿಸಲು ಆಕರ್ಷಕ ಮಹಾದ್ವಾರ ತೆರೆದುಕೊಂಡಿದೆ. ಮಹಾದ್ವಾರದ ಕೆಲಸ ಪೂರ್ಣಗೊಂಡಿದೆ. ಇನ್ನೂ ಹಲವು ಕೆಲಸಗಳು ನಡೆದಿವೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಕುಮಾರಧಾರಾ ನದಿ ದಂಡೆ ಮೇಲಿನ ಮೀಸಲು ಅರಣ್ಯ ಪ್ರದೇಶದಲ್ಲಿ ಉದ್ದೇಶಿತ ವೃಕ್ಷೋದ್ಯಾನ ಪೂರ್ಣಗೊಂಡು ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ಕೊಡುವವರಿಗೆ ಪ್ರಾಕೃತಿಕ ಸೊಬಗು ಸವಿಯುವ ಅವಕಾಶ ಲಭಿಸಲಿದೆ.

5 ಕೋಟಿ ರೂ. ವೆಚ್ಚ
ಆರಂಭಿಕ ಹಂತದ ಕೆಲಸಗಳಿಗೆ ವರ್ಷದ ಹಿಂದೆಯೇ ಚಾಲನೆ ದೊರಕಿದೆ. ಮುಂದಿನ 3 ವರ್ಷದಲ್ಲಿ ಹಂತ – ಹಂತವಾಗಿ ಸಾಲು ಮರದ ತಿಮ್ಮಕ್ಕ ಟ್ರೀ ಪಾರ್ಕ್‌ ಸಿದ್ಧವಾಗಲಿದೆ. 5 ಕೋಟಿ ರೂ. ವೆಚ್ಚದಲ್ಲಿ ವೃಕ್ಷೋದ್ಯಾನ ನಿರ್ಮಾಣಗೊಳ್ಳುತ್ತಿದೆ. ಅರಣ್ಯ ಇಲಾಖೆ ಮೀಸಲು ಅರಣ್ಯದಲ್ಲಿ ಸ್ಥಳದ ಗಡಿ ಗುರುತು ನಡೆದು ಗಡಿ ಗುರುತು ಬಳಿಕ 17 ಲಕ್ಷ ರೂ. ವೆಚ್ಚದಲ್ಲಿ ಬೇಲಿ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದು, ಅದು ಪೂರ್ಣಗೊಂಡಿದೆ. ಮುಂದೆ ಹಂತ-ಹಂತವಾಗಿ ಅನುದಾನ ಬಳಸಿಕೊಂಡು ಉದ್ಯಾನವನ ನಿರ್ಮಿಸಲಾಗುತ್ತದೆ. ಕುಮಾರಧಾರೆ ಸ್ನಾನ ಘಟ್ಟದ ಮೂರು ಪಾರ್ಶ್ವಕ್ಕೆ ಹೊಂದಿಕೊಂಡು ಈ ಉದ್ಯಾನವನ ತಲೆ ಎತ್ತಲಿದೆ. ವೃಕ್ಷೋದ್ಯಾನದಲ್ಲಿ ಪ್ರವೇಶದ್ವಾರ, ಪಾರ್ಕಿಂಗ್‌, ಶೌಚಾಲಯ, ನೀರಿನ ತೊಟ್ಟಿ, ವೃಕ್ಷೋದ್ಯಾನ ಸುತ್ತ ತಂತಿ ತಡೆಬೇಲಿ ಮುಂತಾದ ಕಾರ್ಯಗಳು ಪೂರ್ಣ ಗೊಂಡಿವೆ. ಉಳಿದ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಯುತ್ತಿವೆ. ಇಲ್ಲಿವರೆಗೆ ರೂ. 40 ಲಕ್ಷ ರೂ. ಅನುದಾನ ಬಳಕೆ ಆಗಿದೆ.

ಅಪೂರ್ವ ಸಸ್ಯರಾಶಿ
ಮಲೆನಾಡಿನಲ್ಲಿ ಬೆಳೆಯುವ ಅಪೂರ್ವ ಸಸ್ಯರಾಶಿಗಳನ್ನು ಇಲ್ಲಿ ಬೆಳೆಸಲಾಗುತ್ತಿದೆ. ಜತೆಗೆ 17 ಜಾತಿಯ ಬಿದಿರು ಬೆಳೆಯಲಾಗುತ್ತದೆ. ಬಣ್ಣ ಬಣ್ಣದ ಹೂವುಗಳು ಹಾಗೂ ಪಶ್ಚಿಮ ಘಟ್ಟದ ಅಮೂಲ್ಯ ಮರಗಳನ್ನು ಬೆಳೆದು ಸುಂದರ ಉದ್ಯಾನವನ ರೂಪು ತಾಳಲಿದೆ. ಸರಕಾರವು ಅರಣ್ಯ ಇಲಾಖೆ ಮೂಲಕ ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಸಸ್ಯಗಳ ಉದ್ಯಾನ ವನವನ್ನು ತಾಲೂ ಕುವಾರು ನಿರ್ಮಿಸಲು ಯೋಜನೆ ರೂಪಿಸಿತ್ತು. ಸುಳ್ಯ ತಾಲೂಕಿನ ಯಾವುದಾದರೊಂದು ಸ್ಥಳದಲ್ಲಿ ಉದ್ಯಾನವನ ನಿರ್ಮಿಸಲು ಅರಣ್ಯ ಇಲಾಖೆ ಎರಡು ವರ್ಷದ ಹಿಂದೆ ಮಂಜೂರಾತಿ ನೀಡಿತ್ತು. ಸುಬ್ರಹ್ಮಣ್ಯ ದೇಗುಲ ಆಸಕ್ತಿ ವಹಿಸಿ ನೆರವಿಗೆ ಮುಂದೆ ಬಂದಿತ್ತು.

ನಿಕಟಪೂರ್ವ ಆಡಳಿತ ಮಂಡಳಿಯ ಇಚ್ಛಾ ಶಕ್ತಿಯಿಂದ ಯೋಜನೆ ಕಾರ್ಯ ರೂಪಕ್ಕೆ ಬಂದಿದೆ. ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸುವ ಬಹು ಸಂಖ್ಯೆಯ ಯಾತ್ರಾರ್ಥಿಗಳಿಗೆ ದೇವಸ್ಥಾನದ ಭೇಟಿ ಬಳಿಕ ಸಮಯ ಕಳೆಯಲು ಬೇರೆ ಯಾವುದೇ ಮನೋರಂಜನೆ ಇರುವುದಿಲ್ಲ ಎಂಬ ಬಹು ಕಾಲದ ಅಳಲು ದೂರವಾಗಲಿದೆ.

ವೃಕ್ಷೋದ್ಯಾನದ ಒಳಗೆ ಮಕ್ಕಳ ಆಟಿಕೆ, ವೀಕ್ಷಣೆಗೆ, ವಿಶ್ರಾಂತಿಗೆ ಅನುಕೂಲಕರ ಆಸನ ವ್ಯವಸ್ಥೆ ಸಹಿತ ಇನ್ನುಳಿದ ಕೆಲಸ ಇನ್ನೆರಡು ತಿಂಗಳಲ್ಲಿ ವೇಗ ಪಡೆದುಕೊಂಡು ಮುಂದಿನ ಎರಡು ತಿಂಗಳಲ್ಲಿ ಉದ್ಯಾವನಕ್ಕೆ ಸಂಬಂಧಿಸಿ ಎಲ್ಲ ಸೌಕರ್ಯಗಳು ವೃಕ್ಷೋದ್ಯಾನದಲ್ಲಿ ಅಳವಡಿಕೆಯಾಗಲಿವೆ. ಎಲ್ಲವೂ ವೇಗವಾಗಿ ನಡೆದಲ್ಲಿ 2020ರ ಫೆಬ್ರವರಿಗೆ ತಿಂಗಳ ಅಂತ್ಯಕ್ಕೆ ಅಂತ್ಯಕ್ಕೆ ಸಾರ್ವಜನಿಕರ ಬಳಕೆಗೆ ಉದ್ಯಾನವನ ಸಿಗಲಿದೆ.

 ಶೀಘ್ರ ಲೋಕಾರ್ಪಣೆ
ವೃಕ್ಷೋದ್ಯಾನ ಕೆಲಸ ಕಾರ್ಯಗಳು ಪ್ರಗತಿಯಲ್ಲಿವೆ. ಮುಂದಿನ ಫೆಬ್ರವರಿ ಅಥವಾ ಮಾರ್ಚ್‌ ತಿಂಗಳಲ್ಲಿ ಲೋಕಾರ್ಪಣೆಗೊಳಿಸುವ ಸಿದ್ಧತೆಯಲ್ಲಿದ್ದೇವೆ. ಬಾಕಿ ಉಳಿದ ಕೆಲಸಗಳನ್ನು ಶೀಘ್ರ ಪೂರ್ತಿಗೊಳಿಸುತ್ತೇವೆ. ಉಳಿದವುಗಳನ್ನು ನಿಧಾನವಾಗಿ ಜೋಡಿಸಿಕೊಳ್ಳುತ್ತೇವೆ.
– ತ್ಯಾಗರಾಜ್‌
ಆರ್‌ಎಫ್ಒ, ಸುಬ್ರಹ್ಮಣ್ಯ ವಿಭಾಗ

-ದಯಾನಂದ ಕಲ್ನಾರ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.