ಸುಬ್ರಹ್ಮಣ್ಯ: ಕುಕ್ಕೆಲಿಂಗ ಜಾತ್ರೆ ಪಂಚಮಿ ರಥೋತ್ಸವ
Team Udayavani, Jan 16, 2019, 5:46 AM IST
ಸುಬ್ರಹ್ಮಣ್ಯ: ಮಕರ ಸಂಕ್ರಮಣ ಪ್ರಯುಕ್ತ ಮಂಗಳವಾರ ಬೆಳಗ್ಗೆ ಶ್ರೀ ದೇಗುಲದಲ್ಲಿ ಕುಕ್ಕೆಲಿಂಗ ದೇವರ ಜಾತ್ರೆ ಪ್ರಯುಕ್ತ ಪಂಚಮಿ ರಥೋತ್ಸವ ಜರಗಿತು.
ದೇಗುಲದ ಹೊರಾಂಗಣದಲ್ಲಿ ಶ್ರೀ ದೇವರ ಉತ್ಸವ ನಡೆದ ಬಳಿಕ ರಥಬೀದಿಯಲ್ಲಿ ಪಂಚಮಿ ರಥೋತ್ಸವ ನಡೆಯಿತು. ದೇವರು ಬೀದಿಗೆ ಬರುವ ಮುಂಚಿತ ಕ್ಷೇತ್ರದ ಹೊಸೊಳಿಗಮ್ಮ ದೈವವು ದೇಗುಲದ ಮುಂಭಾಗದಲ್ಲಿ ದೇವರಿಗೆ ಕಾಣಿಕೆ ನೀಡಿತು. ಬಳಿಕ ರಥಬೀದಿಯಲ್ಲಿ ರಥೋತ್ಸವ ನೆರವೇರಿತು. ಈ ವೇಳೆ ದೈವವು ರಥದ ಜತೆ ಕಟ್ಟೆಪೂಜೆ ನಡೆಯುವ ತನಕ ತೆರಳಿ ದೇವರು ದೇಗುಲದ ಒಳಗೆ ಪ್ರವೇಶಿಸುವ ತನಕ ಪಾಲ್ಗೊಂಡಿತು. ಸವಾರಿ ಮಂಟಪದಲ್ಲಿ ಶ್ರೀ ದೇವರಿಗೆ ಕಟ್ಟೆಪೂಜೆ ನೆರವೇರಿತು. ಸೋಮವಾರ ರಾತ್ರಿ ಕುಕ್ಕೆಲಿಂಗ ಜಾತ್ರೆ ಹಿನ್ನೆಲೆಯಲ್ಲಿ ದೇಗುಲದ ಹೊರಾಂಗಣದಲ್ಲಿ ಶ್ರೀ ದೇವರ ಬಂಡಿ ಉತ್ಸವ ವಿಜೃಂಭಣೆಯಿಂದ ನಡೆಯಿತು. ಅನಂತರ ಕಾಜುಕುಜುಂಬ ದೈವದ ನಡಾವಳಿ ನೆರವೇರಿತು. ಉತ್ಸವದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು.
ಪುತ್ತೂರ ಒಡೆಯನಿಗೆ ಕನಕಾಭಿಷೇಕ
ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಮಕರ ಸಂಕ್ರಮಣದ ದಿನ ರಾತ್ರಿ ಶ್ರೀ ಉಳ್ಳಾಳ್ತಿ ಅಮ್ಮನವರ ನಡೆಯಲ್ಲಿ ಕನಕಾಭಿಷೇಕ ನಡೆಯಿತು. ಮಕರ ಸಂಕ್ರಮಣದ ರಾತ್ರಿ ಪೂಜೆಯ ಬಳಿಕ ಬಲಿ ಉತ್ಸವದ ಕೊನೆಯ ಸುತ್ತಿನಲ್ಲಿ ದೇವಾಲಯದ ಆಡಳಿತ ಮೊಕ್ತೇಸರ ಎನ್. ಸುಧಾಕರ ಶೆಟ್ಟಿ ಕನಕಾಭಿಷೇಕ ನೆರವೇರಿಸಿದರು. ದೊಡ್ಡ ಹರಿವಾಣದಲ್ಲಿ ಹೊದ್ಲು, ಅಡಿಕೆ, ವೀಳ್ಯದೆಲೆ, ಕರಿಮೆಣಸು ಮೊದಲಾದ ಸುವಸ್ತುಗಳು, ಚಿನ್ನ -ಬೆಳ್ಳಿಯ ತುಣುಕುಗಳು, ರೂಪಾಯಿ, ನಾಣ್ಯ ಗಳನ್ನು ಶ್ರೀ ದೇವರ ಉತ್ಸವ ಮೂರ್ತಿಗೆ ಚಿಮ್ಮಿಸುವ ಮೂಲಕ ಅಭಿಷೇಕ ಮಾಡಲಾಯಿತು. ತುಳು ಪಾಡ್ದನಗಳಲ್ಲಿ ಉಲ್ಲೇಖೀ ಸಿರುವಂತೆ ವಿಜಯದ ಸಂಕೇತವಾಗಿ ಅರಸರ ಕಾಲದಿಂದಲೂ ಸೀಮೆಯ ದೇವಸ್ಥಾನದಲ್ಲಿ ಈ ಕ್ರಮ ವನ್ನು ಪಾಲಿಸ ಲಾಗುತ್ತಿದೆ. ಭಕ್ತರಿಗೆ ಪ್ರಸಾದ ರೂಪದಲ್ಲಿ ನೀಡುವುದು ಕನಕಾಭಿಷೇಕದ ವಿಶೇಷ. ಅರ್ಚಕ ವಿ.ಎಸ್. ಭಟ್ ವೈದಿಕ ವಿಧಿ-ವಿಧಾನ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ