ಸುಬ್ರಹ್ಮಣ್ಯ: ಗುಡುಗು-ಮಿಂಚು-ಗಾಳಿ ಮಳೆ
ಕುಕ್ಕೆ: ಅಪಾಯಕಾರಿ ಸ್ಥಿತಿಯಲ್ಲಿವೆ ವಿದ್ಯುತ್ ಕಂಬಗಳು!
Team Udayavani, Apr 9, 2019, 6:00 AM IST
ಕುಮಾರಧಾರೆ-ಕಾಶಿಕಟ್ಟೆ ನಡುವೆ ಮಳೆಗೆ ಅಪಾಯಕಾರಿ ಸ್ಥಿತಿಯಲ್ಲಿ ವಿದ್ಯುತ್ ಕಂಬಗಳು.
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಸೋಮವಾರ ಸಂಜೆ ವೇಳೆಗೆ ಸಿಡಿಲು, ಮಿಂಚುಗಳಿಂದ ಕೂಡಿದ ಭಾರೀ ಗಾಳಿ ಮಳೆಯಾಗಿದೆ. ಒಂದು ತಾಸಿಗೂ ಅಧಿಕ ಹೊತ್ತು ಮಳೆ ಸುರಿದಿದೆ. ಗಾಳಿ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಸುಬ್ರಹ್ಮಣ್ಯ-ಕುಮಾರಧಾರಾ ನಡುವೆ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದ್ದು ಪ್ರಗತಿಯಲ್ಲಿದೆ. ರಸ್ತೆಯ ಬದಿ ಮೆಸ್ಕಾಂನ ಹೈಟೆನ್ಶನ್ ವಿದ್ಯುತ್ ಮಾರ್ಗ ಹಾದುಹೋಗಿದೆ. ಕಂಬಗಳ ಸ್ಥಳಾಂತರಕ್ಕೆ ದೇವಸ್ಥಾನದಿಂದ ಮೆಸ್ಕಾಂಗೆ ಹಣ ಪಾವತಿಸಲಾಗಿದೆ. ಆದರೆ, ನೀತಿ ಸಂಹಿತೆಯ ನೆಪದಲ್ಲಿ ಸ್ಥಳಾಂತರಕ್ಕೆ ಮೆಸ್ಕಾಂ ವಿಳಂಬ ಮಾಡುತ್ತಿದ್ದು, ಮಳೆಗೆ ವಿದ್ಯುತ್ ಕಂಬಗಳ ಬುಡದಲ್ಲಿನ ಮಣ್ಣು ಜರಿದು ಕಂಬಗಳು ನೆಲಕ್ಕುರುಳುವ ಸ್ಥಿತಿಯಲ್ಲಿದೆ.
ಮಳೆ ಬರುವ ಹೊತ್ತಿಗೆ ಶಾಲಾ ಕಾಲೇಜು ಮಕ್ಕಳು, ಸಾರ್ವಜನಿಕರು, ಯಾತ್ರಾರ್ಥಿಗಳು ಈ ರಸ್ತೆ ಮಾರ್ಗವಾಗಿ ಕಂಬದ ಅಡಿಭಾಗದ ರಸ್ತೆಗಳ ಮೇಲೆ ವಾಹನಗಳಲ್ಲಿ ಹಾಗೂ ನಡೆದುಕೊಂಡು ತೆರಳುತ್ತಿದ್ದು, ಈ ಕಂಬಗಳು ಅಪಾಯಕ್ಕೆ ಆಹ್ವಾನ ನೀಡುವಂತಿವೆ. ಇವುಗಳನ್ನು ಸ್ಥಳಾಂತರಿಸದೆ ಹಾಗೆಯೇ ಬಿಟ್ಟಲ್ಲಿ ಮಳೆಗೆ ಅನಾಹುತಗಳಿಗೆ ಎಡೆ ಮಾಡಿಕೊಡುವ ಸಾಧ್ಯತೆಯಿದೆ.
ಸಂಚಾರಕ್ಕೂ ತೊಡಕು
ಸುಬ್ರಹ್ಮಣ್ಯ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಮಳೆ ನೀರು ಹರಿದುಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ವೇಳೆ ಮಳೆ ನೀರು ಮಣ್ಣಿನ ಜೊತೆ ಇಳಿಜಾರು ಪ್ರದೇಶಗಳಿಗೆ ನುಗ್ಗಿ ಬರುತ್ತಿದೆ. ಸೋಮವಾರವೂ ರಸ್ತೆ ಮೇಲೆಲ್ಲ ಕೆಸರು ನೀರು ಸಂಗ್ರಹಗೊಂಡು ಸಂಚಾರಕ್ಕೆ ತೊಡಕುಂಟಾಯಿತು. ಗಾಳಿ ಮಳೆಗೆ ಕೆಲವೆಡೆ ವಿದ್ಯುತ್ ಕಂಬಗಳ ಮೇಲೆ ಮರ ಬಿದ್ದು ವಿದ್ಯುತ್ ಸರಬರಾಜು ಸ್ಥಗಿತಗೊಂಡಿತ್ತು. ಪಂಜ, ಗುತ್ತಿಗಾರು, ಯೇನೆಕಲ್ಲು, ಕೊಲ್ಲಮೊಗ್ರು, ಕಲ್ಮಕಾರು, ಹರಿಹರ, ಮಡಪ್ಪಾಡಿ, ನಡುಗಲ್ಲು, ಐನಕಿದು. ಕೈಕಂಬ ಪ್ರದೇಶಗಳಲ್ಲೂ ಗಾಳಿ- ಮಳೆಯಾಗಿದ್ದು, ವಿದ್ಯುತ್ ಹಾಗೂ ದೂರವಾಣಿ ಸೇವೆ ವ್ಯತ್ಯಯಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
MUST WATCH
ಹೊಸ ಸೇರ್ಪಡೆ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!