ಹೆದ್ದಾರಿ ಗುಂಡಿ; ಗುಂಡಿಗೆ ಗಟ್ಟಿ ಮಾಡಿಕೊಂಡು ಸಾಗಿ !

ಹೆಸರಿಗಷ್ಟೇ ರಾಷ್ಟ್ರೀಯ ಹೆದ್ದಾರಿ; ಅವ್ಯವಸ್ಥೆ ನೋಡಿದರೆ ಗ್ರಾಮೀಣ ರಸ್ತೆಗಿಂತಲೂ ಕಡೆ

Team Udayavani, Sep 16, 2019, 5:31 AM IST

1509MLR47-PANEMANGALORE

ದ.ಕ. ಜಿಲ್ಲೆಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಗಳ ಬಹುತೇಕ ಕಡೆ ಹೊಂಡಗಳದ್ದೇ ಕಾರುಬಾರು. ಮಾಣಿಯಿಂದ ಬಿ.ಸಿ. ರೋಡ್‌ ಮತ್ತು ಕೂಳೂರಿನಿಂದ ಪಣಂಬೂರು ವರೆಗಿನ ರಸ್ತೆ ತುಂಬಾ ಹೊಂಡ ಗುಂಡಿಗಳಿಂದ ಕೂಡಿದೆ. ಇಲ್ಲಿ ಸರಿಯಾದ ರಸ್ತೆಯೇ ಕಾಣಸಿಗದು. ಹೊಂಡಮಯ ರಸ್ತೆಯಲ್ಲಿ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ಪ್ರಯಾಣಿಸಬೇಕಾಗಿದೆ. ಸದ್ಯ ತೇಪೆ ಕಾರ್ಯ ನಡೆಯುತ್ತಿದೆಯಾದರೂ ಶಾಶ್ವತ ಪರಿಹಾರದ ಅಗತ್ಯವಿದೆ.

ಮಂಗಳೂರು: ಜಿಲ್ಲೆಯ ಸಾವಿರಾರು ಪ್ರಯಾ ಣಿಕ ವಾಹನಗಳಿಗೆ ನಿತ್ಯ ಆಸರೆಯಾಗುವ ಹೆದ್ದಾರಿಯು ಮರಣ ಗುಂಡಿಗಳಾಗಿ ಬದ ಲಾಗುತ್ತಿದೆ. ಯಾವ ಹೆದ್ದಾರಿಯ ಯಾವ ಗುಂಡಿ ಯಾರ ಬಲಿ ಪಡೆಯಲು ಕಾದಿದೆಯೋ ಎಂಬ ಪರಿಸ್ಥಿತಿ ಸದ್ಯದ್ದು.

ಜಿಲ್ಲೆಯಲ್ಲಿ ಹಾದುಹೋಗುವ ಪ್ರಮುಖ ಎರಡು ರಾಷ್ಟ್ರೀಯ ಹೆದ್ದಾರಿಗಳ (66 ಮತ್ತು 75) ಬಹುತೇಕ ಭಾಗಗಳಲ್ಲಿ ಹೊಂಡಗಳೇ ತುಂಬಿ ಕೊಂಡಿದ್ದು, ಸಂಚಾರ ಸಂಕಷ್ಟ ವಾಗಿದೆ. ಇಲ್ಲಿರುವ ಗುಂಡಿಗಳು ಸವಾರರ ಮತ್ತು ಪ್ರಯಾಣಿಕರ ಹೃದಯಬಡಿತ ಹೆಚ್ಚಿಸು ವಂತಿವೆ. ಸ್ವಲ್ಪ ಎಚ್ಚರ ತಪ್ಪಿದರೂ ಸಾಕು, ವಾಹನ ಹೊಂಡಕ್ಕೆ ಬೀಳುವುದು ಖಚಿತ. ಬಂಟ್ವಾಳ- ಬೆಳ್ತಂಗಡಿ-ಮೂಡಿಗೆರೆ ರಾ.ಹೆ. 73 ಮತ್ತು ನಂತೂರು-ಮೂಡುಬಿದಿರೆ-ಕಾರ್ಕಳ ರಾ.ಹೆ. 169ರ ಸ್ಥಿತಿಯೂ ಇದಕ್ಕಿಂತ ಭಿನ್ನವಾಗಿಲ್ಲ.

ತಾತ್ಕಾಲಿಕ ದುರಸ್ತಿ
ಹದಗೆಟ್ಟ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿ ಸುವ ಸವಾರರ ಸಂಕಷ್ಟವನ್ನು ಕೊನೆಗೂ ಮನಗಂಡ ಅಧಿಕಾರಿಗಳು ತಾತ್ಕಾಲಿಕ ದುರಸ್ತಿಗೆ ಮುಂದಾಗಿದ್ದಾರೆ. ಆದರೆ ಇದು ಶಾಶ್ವತವಲ್ಲ. ಇನ್ನೊಂದು ಮಳೆ ಬಂದರೆ ಮತ್ತೆ ಹೊಂಡ ರೂಪು ಪಡೆಯುವುದು ಖಚಿತ. ಹೊಂಡಕ್ಕೆ ಶಾಶ್ವತ ಪರಿಹಾರ ಇಲ್ಲಿ ಮರೀಚಿಕೆ.

ಫ್ಲೈಓವರ್‌ ಕೆಳಗಿನ
ಸರ್ವಿಸ್‌ ರಸ್ತೆ ಹೊಂಡಮಯ
ಪಂಪ್‌ವೆಲ್‌ ಫ್ಲೈಓವರ್‌ ಒಂದು ಮುಗಿಯದ ವೃತ್ತಾಂತ. ಇದರ ಕಾಮಗಾರಿಯ ಕಾರಣಕ್ಕಾಗಿ ತೊಕ್ಕೊಟ್ಟು ಮತ್ತು ಮಂಗಳೂರು ಕಡೆಗೆ ಬರುವ ವಾಹನಗಳಿಗೆ ಸರ್ವಿಸ್‌ ರಸ್ತೆ ಮಾಡಲಾಗಿದೆ. ಆದರೆ ಇಲ್ಲಿನ ಗುಂಡಿಗಳು ವಾಹನದ ಆಯಸ್ಸನ್ನೇ ಕಡಿಮೆ ಮಾಡುತ್ತಿವೆ ಮಾತ್ರವಲ್ಲದೆ, ಸವಾರರ ಜೀವ ಹಿಂಡುತ್ತಿವೆ. ಈ ರಸ್ತೆ ತುಂಬಾ ಹೊಂಡಗಳೇ. ತೊಕ್ಕೊಟ್ಟು ಫ್ಲೈಓವರ್‌ ಕೆಳಭಾಗ ಸರ್ವಿಸ್‌ ರಸ್ತೆ ಕೂಡ ಇದೇ ಪರಿಸ್ಥಿತಿಯಲ್ಲಿದೆ. ಬಿ.ಸಿ.ರೋಡ್‌ ಫ್ಲೈಓವರ್‌ ಕೆಳಗಿನ ಸರ್ವಿಸ್‌ ರಸ್ತೆ ಕೂಡ ಇದಕ್ಕೆ ಹೊರತಾಗಿಲ್ಲ.

ಗುಂಡಿಗಳ ಲೆಕ್ಕಾಚಾರ ಕಷ್ಟ
ಯಾವ ರಸ್ತೆಯಲ್ಲಿ ಎಲ್ಲೆಲ್ಲಿ ಎಷ್ಟು ಗುಂಡಿಗಳಿವೆ ಎಂದು ಲೆಕ್ಕ ಹಾಕಲು ಸಾಧ್ಯವಿಲ್ಲ. ಯಾಕೆಂದರೆ ಅರೆಕ್ಷಣಕ್ಕೊಂದು ಗುಂಡಿ ಧುತ್ತೆಂದು ಎದುರುಗೊಳ್ಳುತ್ತದೆ. ಅವು ಲೆಕ್ಕ ಮಾಡಿದಷ್ಟು ಮುಗಿಯುವುದಿಲ್ಲ. ಅದರಲ್ಲೂ ಮಂಗಳೂರು ವ್ಯಾಪ್ತಿಯಲ್ಲಿ ಹೆದ್ದಾರಿಯ ಸ್ಥಿತಿ ಭೀಕರ ಅನ್ನಿಸುವಂತಿದೆ. ಕೊಂಚ ದುರಸ್ತಿ ಕಾರ್ಯವನ್ನು ಹೆದ್ದಾರಿ ಇಲಾಖೆಯವರು ಈಗ ನಡೆಸುತ್ತಿದ್ದಾರಾದರೂ ನಂತೂರು, ಪಂಪ್‌ವೆಲ್‌, ಕೊಟ್ಟಾರ, ಕೂಳೂರು, ಬೈಕಂಪಾಡಿ, ಪಣಂಬೂರು ಜಂಕ್ಷನ್‌ಗಳ ಪಾಡು ಹೇಳತೀರದು.

ಮಾಣಿ-ಬಿ.ಸಿ.ರೋಡ್‌ ನರಕದರ್ಶನ
ಪಾಣೆಮಂಗಳೂರು, ಮೆಲ್ಕಾರು, ಪೆರ್ನೆ ವ್ಯಾಪ್ತಿಯಲ್ಲಿ ಸಂಚರಿಸುವಾಗ ಹೆದ್ದಾರಿ ನರಕದರ್ಶನವನ್ನೇ ಒದಗಿಸುತ್ತದೆ. ಇಲ್ಲಿ ರಸ್ತೆಯೇ ಇಲ್ಲವೆಂದರೂ ತಪ್ಪಾಗದು. ಇಂಚು ಇಂಚಿಗೂ ಹೊಂಡಗಳು ರಾರಾಜಿಸುತ್ತಿದ್ದು, ಪ್ರಯಾಣ ದುಸ್ತರವಾಗಿದೆ. ಗುಂಡಿಯಲ್ಲೇ ಎದ್ದುಬಿದ್ದು ಸಂಚರಿಸಬೇಕಾದ ದ್ವಿಚಕ್ರ ವಾಹನ ಸವಾರರ ಪಾಡು ಹೇಳತೀರದು. ಗುಂಡಿ ತಪ್ಪಿಸಲು ಹೋದರೆ ಅಪಘಾತ ನಡೆಯುವ ಸಾಧ್ಯತೆಯಿದೆ.

ಹೊಂಡ ಮುಚ್ಚಲು
ಒಂದೂವರೆ ತಿಂಗಳ ಗಡುವು !
ನಂತೂರಿಂದ ತಲಪಾಡಿ, ಬಿ.ಸಿ. ರೋಡ್‌- ಸುರತ್ಕಲ್‌ವುತ್ತು ಕುಲಶೇಖರದಿಂದ ಕಾರ್ಕಳ, ಬಿ.ಸಿ. ರೋಡ್‌, ಚಾರ್ಮಾಡಿ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ಹೊಂಡಗಳು ಬಿದ್ದು ಸಂಚಾರಕ್ಕೆ ಸಮಸ್ಯೆಯಾಗಿದೆ. ಹೀಗಾಗಿ ಅಕ್ಟೋಬರ್‌ ತಿಂಗಳಾಂತ್ಯದ ಒಳಗೆ ಹೆದ್ದಾರಿಯ ಹೊಂಡ ಮುಚ್ಚಿ ನಿರ್ವಹಣ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ.

ಬಸ್‌ ಟ್ರಿಪ್‌ ಕಟ್‌!
ಹೊಂಡಮಯ ರಸ್ತೆಗಳಲ್ಲಿ ವೇಗಕ್ಕೆ ಕಡಿವಾಣ ಬೀಳುವ ಜತೆ ಸರ್ಕಸ್‌ ಮಾಡುತ್ತ ಸಂಚರಿಸುವ ಕಾರಣ ಬಸ್‌ಗಳು ಸಮಯ ಪಾಲನೆ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಹಲವು ಸಮಸ್ಯೆಗಳು ಎದುರಾಗುತ್ತವೆ. ಬಸ್‌ಗಳ ಮಧ್ಯೆ ಸ್ಪರ್ಧೆಯ ಜತೆ ತಾಂತ್ರಿಕ ಸಮಸ್ಯೆಯೂ ಉಂಟಾಗುತ್ತದೆ. ಇದರಿಂದ ಬಸ್‌ನವರು ಟ್ರಿಪ್‌ ಕಟ್‌ ಮಾಡುತ್ತಿದ್ದಾರೆ.

ಗುಂಡಿಯಲ್ಲಿ ವಾಹನ ನಿಲ್ಲಿಸಿ ಟೋಲ್‌ ಪಾವತಿಸಿ !
ಬ್ರಹ್ಮರಕೂಟ್ಲು ಬಳಿ ಹೊಂಡದಲ್ಲಿಯೇ ವಾಹನ ನಿಲ್ಲಿಸಿ ಸುಂಕ ಸಂಗ್ರಹ ಮಾಡುವ ಪರಿಸ್ಥಿತಿ ಇದೆ. ಇದು ಹೆದ್ದಾರಿಯ ಪರಿಸ್ಥಿತಿಗೆ ಹಿಡಿದ ಕೈಗನ್ನಡಿ. ಈ ಟೋಲ್‌ನ ಎರಡೂ ಕಡೆ ಸಾಗುವಾಗ ಗುಂಡಿಗಳ ದರ್ಶನವಾಗುತ್ತದೆ.

ಟೋಲ್‌ ಬಳಿಕ ಪಾಣೆಮಂಗಳೂರು ಸೇತುವೆ ಬಳಿ, ನರಿಕೊಂಬು ತಿರುವಿನ ಬಳಿ, ಮೆಲ್ಕಾರ್‌, ಕಲ್ಲಡ್ಕ, ಮಾಣಿಯವರೆಗೂ ಬೃಹತ್‌ ಹೊಂಡಗಳು ವಾಹನ ಸವಾರರನ್ನು ದಿಕ್ಕು ತಪ್ಪಿಸುತ್ತಿವೆ. ಸಾಮಾನ್ಯ ಬಸ್‌ಗಳಲ್ಲಿ ತೆರಳುವ ಪ್ರಯಾಣಿಕರಷ್ಟೇ ಅಲ್ಲ; ಮಲ್ಟಿ ಆ್ಯಕ್ಸಿಲ್‌ ಬಸ್‌ಗಳ ಸಂಚಾರಿಗಳೂ ಹೊಂಡದಿಂದಾಗಿ ಹೌಹಾರುವ ಪ್ರಮೇಯವಿದೆ. ರಸ್ತೆಯೆಲ್ಲ ಹದಗೆಟ್ಟ ಕಾರಣ ತಾಸುಗಟ್ಟಲೆ ಟ್ರಾಫಿಕ್‌ ಜಾಮ್‌ ಇಲ್ಲಿ ಮಾಮೂಲಿ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.