ಮೂರು ಹೋಬಳಿಗಳಲ್ಲಿ ಯಶಸ್ವಿ ಅಭಿಯಾನ

ಕೃಷಿ ಇಲಾಖೆಯ ಸಮಗ್ರ ಕೃಷಿ ಅಭಿಯಾನ ಇಂದು ಸಂಪನ್ನ

Team Udayavani, Jul 29, 2019, 5:49 AM IST

2807CH9_VENUR

ಬೆಳ್ತಂಗಡಿ: ರೈತರಿಗೆ ಕೃಷಿ ಇಲಾಖೆಯ ಸಂಪೂರ್ಣ ಮಾಹಿತಿ ಒದಗಿಸುವ ದೃಷ್ಟಿಯಿಂದ ತಾಲೂಕು ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ 2019-20ನೇ ಸಾಲಿನ ಕೃಷಿ ಅಭಿಯಾನ ಬೆಳ್ತಂಗಡಿ ತಾಲೂಕಿನಲ್ಲಿ ಯಶಸ್ವಿಯಾಗಿದ್ದು, ಜು. 29ರಂದು ವೇಣೂರಿನಲ್ಲಿ ಸಮಾರೋಪಗೊಳ್ಳಲಿದೆ.

ಕೃಷಿ ಉತ್ಪಾದನೆ ಗಣನೀಯ ಪ್ರಮಾಣ ದಲ್ಲಿ ಹೆಚ್ಚಳವಾಗಲು ರೈತರ ಶ್ರಮ ಮತ್ತು ಕೃಷಿಯಲ್ಲಿ ಸಕ್ರಿಯ ಪಾಲುಗಾರಿಕೆ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಜು. 20ರಂದು ಇಲಾಖೆ ನಡಿಗೆ ರೈತರ ಬಾಗಿಲಿಗೆ ಅಭಿಯಾನಕ್ಕೆ ಬೆಳ್ತಂಗಡಿಯಲ್ಲಿ ಚಾಲನೆ ನೀಡಲಾಗಿತ್ತು.

ತಾಲೂಕಿನಾದ್ಯಂತ ಈಗಾ ಗಲೇ ಬೆಳ್ತಂಗಡಿ, ಕೊಕ್ಕಡ ಪೂರ್ಣಗೊಂಡಿದ್ದು, ರವಿ ವಾರ ವೇಣೂರು ಹೋಬಳಿ ಯಲ್ಲಿ ರೈತರಿಗೆ ಮಾಹಿತಿ ನೀಡಲಾಯಿತು.

48 ಗ್ರಾ.ಪಂ.ಗಳಲ್ಲಿ ಸಂಚಾರ
ಬೆಳ್ತಂಗಡಿ ತಾಲೂಕಿನ 48 ಗ್ರಾಮ ಗಳಿಗೆ ಹೋಬಳಿ ಮಟ್ಟದ ಕೃಷಿ ಅಧಿಕಾರಿಗಳು, ಸಹಾಯಕ ಕೃಷಿ ಅಧಿಕಾರಿಗಳು, ತೋಟ ಗಾರಿಕೆ ಇಲಾಖೆ, ರೇಷ್ಮೆ, ಪಶುಪಾಲನೆ, ಜ್ಞಾನಜ್ಯೋತಿ ಬ್ಯಾಂಕ್‌, ಗ್ರಾ.ಪಂ. ಸಿಬಂದಿ ಭೇಟಿ ನೀಡಿ ನೂತನ ಕೃಷಿ ತಂತ್ರಗಾರಿಕೆ, ಸಾಲ ಸೌಲಭ್ಯದ ಮಾಹಿತಿ ಒದಗಿಸಿದ್ದಾರೆ. ಇದರಿಂದ ರೈತರು ಹೊಸ ವಿಷಯ ಪಡೆದುಕೊಳ್ಳಲು ಸಹಕಾರಿಯಾಗಿದೆ.

ಮೂರು ಹೋಬಳಿ
ಜು. 20, 21ರಂದು ಕೃಷಿ ಮಾಹಿತಿ ಸಂಚಾರಿ ಘಟಕವು ಬೆಳ್ತಂಗಡಿ ಹೋಬಳಿಯ 18 ಪಂಚಾಯತ್‌ಗಳಲ್ಲಿ ಸಂಚರಿಸಿದ್ದು, ಜು. 23, 24 ಮತ್ತು 25ರಂದು ಕೊಕ್ಕಡ ಹೋಬಳಿಯ 19 ಪಂಚಾಯತ್‌ಗಳಲ್ಲಿ ಸಂಚರಿಸಿ ಜು. 25ರಂದು ಅಂಬೇಡ್ಕರ್‌ ಭವನದಲ್ಲಿ ರೈತರೊಡನೆ ಸಂವಾದ, ಕೃಷಿ ಸಂಬಂಧಿತ ತಾಂತ್ರಿಕ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ವಿಟ್ಲ ಕೇಂದ್ರಿಯ ತೋಟಗಾರಿಕೆ ಬೆಳೆಗಳ ಸಂಶೋಧನ ಕೇಂದ್ರದ ವಿಜ್ಞಾನಿ ಎನ್‌.ಪಿ. ನಾಗರಾಜು ಸಮಗ್ರ ಮಾಹಿತಿ ಒದಗಿಸಿದ್ದಾರೆ.

ಜು. 27, 28ರಂದು ವೇಣೂರು ಹೋಬಳಿಯ 12 ಗ್ರಾ.ಪಂ.ಗಳಿಗೆ ತೆರಳಿದ್ದು, ಜು. 29ರಂದು ವೇಣೂರಿನ ಲಯನ್ಸ್‌ ಕ್ಲಬ್‌ ಹಾಲ್‌ನಲ್ಲಿ ಸಂವಾದ, ತಾಂತ್ರಿಕ ಮಾಹಿತಿ ನಡೆಯಲಿದೆ. ಮಂಗಳೂರು ಕೆ.ವಿ.ಕೆ.ಯ ವಿಜ್ಞಾನಿ ಗಳು ಭಾಗವಹಿಸಲಿದ್ದಾರೆ.

ಆವಶ್ಯಕತೆಗಳು, ಸಮಸ್ಯೆಗಳ ಕುರಿತು ಚರ್ಚೆ
ಕೃಷಿ ಇಲಾಖೆ, ಸಹಾಯಕ ತೋಟಗಾರಿಕೆ ಇಲಾಖೆ ಸಹಿತ ಕೃಷಿ ಇಲಾಖೆ ಸಂಬಂಧಿತ ಅಧಿಕಾರಿಗಳು ಸ್ಥಳೀಯ ರೈತರೊಡಗೂಡಿ ಕೃಷಿ ಸಂಬಂಧಿತ ಆವಶ್ಯಕತೆಗಳು ಮತ್ತು ಸಮಸ್ಯೆಗಳ ಕುರಿತು ಚರ್ಚಿಸಿದ್ದಾರೆ. ಕೃಷಿ ಇಲಾಖೆಯಲ್ಲಿರುವ ಅವಶ್ಯ ಸೌಲಭ್ಯಗಳ‌ನ್ನು ರೈತರಿಗೆ ಒದಗಿಸುವುದರ ಜತೆಗೆ ಪ್ರಾತ್ಯಕ್ಷಿಕೆ ನೀಡಲಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಸುಮಾರು 40 ಸಾವಿರಕ್ಕೂ ಹೆಚ್ಚು ರೈತರಿದ್ದು, ಶೇ. 50 ಮಂದಿ ರೈತರು ಲಾಭ ಪಡೆದಿದ್ದಾರೆ ಎಂದು ಸಹಾಯಕ ಕೃಷಿ ನಿರ್ದೇಶಕಿ ಪ್ರೇಮಾ ಡಿ.ಕೆ. ತಿಳಿಸಿದ್ದಾರೆ.

 ರೈತರಿಗೆ ಹೊಸ ವಿಷಯ
ಈ ಬಾರಿ ಅಭಿಯಾನ ಯಶಸ್ವಿಯಾಗಿದೆ. ಮುಂದಿನ ಬಾರಿ ಮತ್ತಷ್ಟು ಪರಿಣಾಮಕಾರಿಯಾಗಲು ಪಂಚಾಯತ್‌ ಮಟ್ಟದಲ್ಲಿ ಹೆಚ್ಚಿನ ಮಂದಿ ರೈತರು ಸೇರಬೇಕು. ಸಂಘ-ಸಂಸ್ಥೆ, ಗ್ರಾ.ಪಂ.ಗಳ ಶ್ರಮ ಅಗತ್ಯ. ಇದರಿಂದ ರೈತರಿಗೆ ಹೊಸ ವಿಷಯ ತಿಳಿಯಲು ಸಾಧ್ಯ.
 - ಪ್ರೇಮಾ ಡಿ.ಕೆ.
ತಾ| ಸ. ಕೃಷಿ ನಿರ್ದೇಶಕರು

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

Belthangady ರಸ್ತೆ ಬದಿಗೆ ಜಾರಿದ ಟೆಂಪೋ; ಟ್ರಾಫಿಕ್‌ ಜಾಮ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.