ತೊಕ್ಕೊಟ್ಟು: ರಾ. ಹೆದ್ದಾರಿ ಬದಿ ಅಂಗಡಿಗಳ ಯಶಸ್ವೀ ತೆರವು
Team Udayavani, Jun 25, 2019, 10:07 AM IST
ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66ರ ಕಲ್ಲಾಪುವಿನಿಂದ ತಲಪಾಡಿವರೆಗೆ ಹೆದ್ದಾರಿ ಬದಿಯಲ್ಲಿದ್ದ ಅನಧಿಕೃತ ಅಂಗಡಿಗಳ ತೆರವು ಕಾರ್ಯಾ ಚರಣೆ ಸೋಮವಾರ ನಡೆಯಿತು.
ಬೆಳಗ್ಗಿನಿಂದಲೇ ರಾ. ಹೆ. ಇಲಾಖೆಯ ಅಧಿಕಾರಿಗಳು, ನವಯುಗ್ ಸಂಸ್ಥೆಯ
ಅಧಿಕಾರಿಗಳು, ಸಿಬಂದಿ ಉಳ್ಳಾಲ ಪೊಲೀಸರು ಮತ್ತು ದಕ್ಷಿಣ ಸಂಚಾರಿ ಠಾಣೆಯ ಪೊಲೀಸರ ಸಹಕಾರದೊಂದಿಗೆ ತೆರವು ಕಾರ್ಯಾಚರಣೆ ಆರಂಭಿಸಿದರು. ಕಲ್ಲಾಪುವಿನಲ್ಲಿ ಹಣ್ಣುಹಂಪಲು, ಮೀನಿನ ಅಂಗಡಿ ಸಹಿತ ಹೆದ್ದಾರಿ ಬದಿಯ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಲಾಯಿತು. ತೊಕ್ಕೊಟ್ಟು ಜಂಕ್ಷನ್ನಲ್ಲಿ ಮೇಲ್ಸೇತುವೆಯ ಅಂಡರ್ಪಾಸ್ನಲ್ಲಿದ್ದ ಅಂಗಡಿ, ತೊಕ್ಕೊಟ್ಟು ಓವರ್ಬ್ರಿಡ್ಜ್, ಕೋಟೆ ಕಾರು ಬೀರಿ, ತಲಪಾಡಿ ಬದಿಯಲ್ಲಿದ್ದ ಸುಮಾರು 30ಕ್ಕೂ ಹೆಚ್ಚು ಅಂಗಡಿಗಳ ತೆರವು ಮಾಡಲಾಯಿತು.
ತಿಂಗಳ ಹಿಂದೆಯೇ ಸೂಚನೆ
ತಿಂಗಳ ಹಿಂದೆಯೇ ತೆರವು ಮಾಡಲು ಸೂಚನೆ ನೀಡಲಾಗಿತ್ತು. ಸೋಮವಾರ ಅಂಗಡಿ ಮಾಲಕರು ಸ್ವತಃ ತೆರವುಗೊಳಿಸಿದರೆ ನವಯುಗ್ ಸಂಸ್ಥೆಯ ಸಿಬಂದಿ ಸಹಕರಿಸಿದರು. ಅಧಿಕಾರಿ ಶಾಂತ ರಾಜ್, ರಾ.ಹೆ. ಇಲಾಖೆಯ ಅಧಿಕಾರಿ ಅಜೇಯ್, ನವಯುಗ್ನ ಶಿವಪ್ರಸಾದ್ ರೈ, ಟೋಲ್ಗೇಟ್ ಪಿಆರ್ಒ ಭಾಸ್ಕರ್ ಶೆಟ್ಟಿ ತಲಪಾಡಿ, ಉಳ್ಳಾಲ ಪೊಲೀಸರು, ಸಂಚಾರಿ ಪೊಲೀಸ್ ಠಾಣಾ ಪೊಲೀಸರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ