ಸುಚಿತ್ರ ಥಿಯೇಟರ್‌; ಇಂದು 3ಡಿ ಪ್ರದರ್ಶನಕ್ಕೆ ಚಾಲನೆ


Team Udayavani, Jun 15, 2018, 3:25 AM IST

suchithra-theater-600.jpg

ಮಹಾನಗರ: ಅತ್ಯಾಧುನಿಕ ಸೌಕರ್ಯಗಳೊಂದಿಗೆ ಈಗಾಗಲೇ ಚಿತ್ರಪ್ರೇಮಿಗಳ ಮನಸ್ಸು ಗೆದ್ದ ನಗರದ ಕೆ.ಎಸ್‌. ರಾವ್‌ ರಸ್ತೆಯ ‘ಸುಚಿತ್ರ’ ಥಿಯೇಟರ್‌ ಇದೀಗ 3ಡಿ ಸೌಕರ್ಯದೊಂದಿಗೆ ಮತ್ತೂಂದು ಬದಲಾವಣೆಗೆ ತೆರೆದುಕೊಂಡಿದೆ. ಮಂಗಳೂರಿನ ಸಿಂಗಲ್‌ ಥಿಯೇಟರ್‌ ಗಳ ಪೈಕಿ ಪ್ರಥಮ ಬಾರಿಗೆ 3ಡಿ ಸೌಕರ್ಯವನ್ನು ಸುಚಿತ್ರ ಅಳವಡಿಸಿದ್ದು, ಜೂ. 15ರಿಂದ ಪ್ರದರ್ಶನ ಆರಂಭಿಸಲಿದೆ.

ಅತ್ಯಾಧುನಿಕ ಸೌಕರ್ಯಗಳಿರುವ ಸುಚಿತ್ರ ಥಿಯೇಟರ್‌ನಲ್ಲಿ ‘ತ್ರಿಬಲ್‌ ಬಿಮ್‌ 3ಡಿ’ ಸೌಲಭ್ಯವನ್ನು ನೀಡಲಾಗಿದೆ. ಇದಕ್ಕೆ ಹೈಜೆನ್‌ ಸಿಲ್ವರ್‌ ಸ್ಕೀನ್‌ ಕೂಡ ಅಳವ ಡಿಸಲಾಗಿದೆ. ಈ ಮೂಲಕ 3ಡಿ ಸಿನೆಮಾವನ್ನು ಇನ್ನು ಮುಂದೆ ಸುಚಿತ್ರದಂತಹ ಸಿಂಗಲ್‌ ಥಿಯೇಟರ್‌ನಲ್ಲೂ ವೀಕ್ಷಿಸಬಹುದಾಗಿದೆ. ಜಿಲ್ಲೆಯ ಯಾವುದೇ ಸಿಂಗಲ್‌ ಥಿಯೇಟರ್‌ನಲ್ಲಿ ಇಲ್ಲದಂತಹ ಹವಾ ನಿಯಂತ್ರಿತ ವ್ಯವಸ್ಥೆಯೊಂದಿಗೆ (ಎಸಿ)ಆಧುನಿಕ ಶೈಲಿಯ ಸೌಂಡ್‌ ಸಿಸ್ಟಂ, 4ಕೆ ಮಾದರಿಯ ಡಿಜಿಟಲ್‌ ಪ್ರೊಜೆಕ್ಟ್ ಸಹಿತ ಅತ್ಯಾಧುನಿಕ ವ್ಯವಸ್ಥೆಗಳನ್ನು ಸುಚಿತ್ರದಲ್ಲಿ ಬಳಸಿಕೊಳ್ಳಲಾಗುತ್ತಿದೆ. ಇದು ಕರಾವಳಿಯ ಸಿನೆಮಾ ಥಿಯೇಟರ್‌ ಗಳ ಪಾಲಿಗೆ ಹೊಸ ಅನುಭವವಾಗಿತ್ತು. 64 ಚಾನೆಲ್‌ Dolby Atmos ಸಿಸ್ಟಂನಲ್ಲಿ ಸುಚಿತ್ರ ಈಗಾಗಲೇ ಸಿನೆಮಾ ಪ್ರೇಮಿಗಳಿಗೆ ರಸದೌತಣ ನೀಡುತ್ತಿದೆ. ಇದರಿಂದಾಗಿ ತೆರೆಯ ಮೇಲೆ ಕಾಣುವ ಪ್ರತೀ ಸಿನೆಮಾದ ಸೌಂಡ್‌ ವೀಕ್ಷಕರಿಗೆ ರೋಚಕ ಅನುಭವ ನೀಡಲಿದೆ. ಈ ಚಿತ್ರಮಂದಿರದ ನವೀಕರಣದ ಕೆಲಸವನ್ನು ಕಳೆದ ಜೂನ್‌ ನಿಂದ ಆರಂಭಿಸಲಾಗಿದ್ದು, ಇತ್ತೀಚೆಗೆ ಚಿತ್ರ ಪ್ರದರ್ಶನ ಆರಂಭವಾಗಿತ್ತು.

ಭಾರತದಲ್ಲಿ ಮೊದಲ ಬಾರಿಗೆ 2012 ರಲ್ಲಿ Dolby Atmos ಸ್ಕ್ರೀನ್‌ ವ್ಯವಸ್ಥೆ ಜಾರಿಗೆ ಬಂದಿದೆ. ದೇಶದ ಸುಮಾರು 400 ಸ್ಕ್ರೀನ್‌ಗಳಲ್ಲಿ ಈಗಾಗಲೇ ಇದೇ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಸಿನೆಮಾ ಪ್ರದರ್ಶನಗೊಳ್ಳುವಾಗ ಥಿಯೇಟರ್‌ನ ನಾಲ್ಕೂ ಮೂಲೆಗಳಲ್ಲಿ ಪ್ರೇಕ್ಷಕನ ಕಿವಿಗೆ ಸಮರ್ಪಕವಾಗಿ ಸ್ವರ ಕೇಳುವ ರೀತಿಯಲ್ಲಿ ಥಿಯೇಟರ್‌ ಅನ್ನು ಸಿದ್ಧಪಡಿಸಲಾಗುತ್ತದೆ. ಸುಚಿತ್ರದಲ್ಲಿ ಇಂತಹ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. 

ಸುಚಿತ್ರ ಥಿಯೇಟರ್‌ನ ಬಾಲ್ಕನಿಯಲ್ಲಿ 272 ಹಾಗೂ ಕೆಳಗಡೆ 534 ಸೀಟು ವ್ಯವಸ್ಥೆ ಇದ್ದು, ಎಲ್ಲ  ಸೀಟುಗಳನ್ನು ಹೊಸದಾಗಿ ಸುಸಜ್ಜಿತ ರೀತಿಯಲ್ಲಿ ಜೋಡಿಸಲಾಗಿದೆ. ಟಿಕೆಟ್‌ ದರವನ್ನು ಪ್ರಸ್ತುತ ದರಕ್ಕಿಂತ ಸ್ವಲ್ಪ ಏರಿಕೆ ಮಾಡಲು ನಿರ್ಧರಿಸಲಾಗಿದ್ದು, ಮುಂದೆ 100 ರೂ. ಹಾಗೂ 150 ರೂ. ಎಂದು ನಿಗದಿಪಡಿಸಲು ಚಿಂತಿಸಲಾಗಿದೆ. ಮಲ್ಟಿಪ್ಲೆಕ್ಸ್‌ ಸಿನೆಮಾದ ಟಿಕೆಟ್‌ ಗಳನ್ನು ಆನ್‌ ಲೈನ್‌ (ಬುಕ್‌ ಮೈ ಶೋ) ಮೂಲಕ ಪಡೆಯುವ ರೀತಿಯ ಲ್ಲಿಯೇ ಸುಚಿತ್ರ ಥಿಯೇಟರ್‌ ನ ಟಿಕೆಟ್‌ಗಳು ದೊರೆಯುತ್ತಿದೆ. ಥಿಯೇ ಟರ್‌ನ ಒಳಗಡೆಯ ಕ್ಯಾಂಟೀನ್‌ ವ್ಯವಸ್ಥೆ ಯಲ್ಲೂ ಸುಧಾರಣೆಯಾಗಲಿವೆೆ. ಸುಚಿತ್ರಾ ಥಿಯೇಟರ್‌ ಆಧುನಿಕ ಶೈಲಿಗೆ ಬದಲಾವಣೆಗೊಂಡಂತೆ, ಅದರ ಪಕ್ಕದಲ್ಲೇ ಇರುವ ಪ್ರಭಾತ್‌ ಥಿಯೇಟರ್‌ ಕೂಡ ಈಗ ಆಧುನಿಕ ಸ್ಪರ್ಶ ಪಡೆದುಕೊಳ್ಳುತ್ತಿದೆ. ಇಲ್ಲೂ ಕೂಡ ಅತ್ಯಾಧುನಿಕ ಪ್ರಾಜೆಕ್ಟ್, ಸೌಂಡ್‌ ಸಿಸ್ಟಂ, ಹವಾನಿಯಂತ್ರಿತ ಸೌಕರ್ಯ ಸೇರಿದಂತೆ ಎಲ್ಲ ರೀತಿಯ ಸವಲತ್ತುಗಳ ಜೋಡಣೆಯಾಗುತ್ತಿದೆ.

1976ರಿಂದ ಚಿತ್ರ ಪ್ರದರ್ಶನ ಆರಂಭ
ಕೆ.ಎಸ್‌. ರಾವ್‌ ರಸ್ತೆಯ ಪ್ರಭಾತ್‌ ಚಿತ್ರಮಂದಿರದ ಸಮೀಪದಲ್ಲಿರುವ ವಿಸ್ತಾರದ ಆವರಣವನ್ನು 1970ರಲ್ಲಿ ಸ್ವಾಧೀನಪಡಿಸಿಕೊಂಡ ಬೆಂಗಳೂರಿನ ಡಿ.ಎನ್‌.ಗೋಪಾಲಕೃಷ್ಣರು, ಅವರ ಲಕ್ಷ್ಮೀನಾರಾಯಣ ಎಂಟರ್‌ಪ್ರೈಸಸ್‌ ನ ಸಂಸ್ಥೆಯ ಹೆಸರಿನಲ್ಲಿ ‘ಪ್ರಭಾತ್‌’ ಚಿತ್ರಮಂದಿರದ ಆವರಣದಲ್ಲಿ ‘ಸುಚಿತ್ರಾ’ ಎಂಬ ಹೆಸರಿನ ಇನ್ನೊಂದು ಚಿತ್ರಮಂದಿರ ಸ್ಥಾಪಿಸಿದರು. 1976ನೇ ಮೇ ತಿಂಗಳಿನಲ್ಲಿ ಡಾ| ರಾಜ್‌ಕುಮಾರ್‌ರ ‘ಬಹದ್ದೂರ್‌ ಗಂಡು’ ಎಂಬ ಕನ್ನಡ ಚಿತ್ರದ ಮೂಲಕ ಪ್ರದರ್ಶನ ಆರಂಭಿಸಲಾಗಿತ್ತು.

ಟಾಪ್ ನ್ಯೂಸ್

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.