ಸಿದ್ದರಾಮಯ್ಯ ಹೇಳಿಕೆಯಿಂದ ಕಾಂಗ್ರೆಸ್ ಸಂಸ್ಕೃತಿ ಏನೆಂದು ಜಗಜ್ಜಾಹೀರಾಗಿದೆ: ಸುದರ್ಶನ್ ಮೂಡುಬಿದಿರೆ
Team Udayavani, Jan 5, 2023, 7:06 PM IST
ಮಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೂಲಕ ಕಾಂಗ್ರೆಸ್ ಸಂಸ್ಕೃತಿ ಏನು ಎಂಬುದು ಮತ್ತೊಮ್ಮೆ ಜಾಹೀರುಗೊಂಡಿದೆ.
ಮುಖ್ಯಮಂತ್ರಿ ಸ್ಥಾನದಲ್ಲಿರುವ ಬಸವರಾಜ ಬೊಮ್ಮಾಯಿ ಅವರನ್ನು ನಾಯಿ ಮರಿಗೆ ಹೊಲಿಸಿರುವುದನ್ನು ಬಿಜೆಪಿ ಖಂಡಿಸುತ್ತದೆ. ತಕ್ಷಣ ಅವರು ರಾಜ್ಯದ ಜನತೆ ಮುಂದೆ ಕ್ಷಮೆಯಾಚಿಸಬೇಕು ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ಆಗ್ರಹಿಸಿದ್ದಾರೆ.
ಗುರುವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳನ್ನು ಗೌರವಿಸುವುದು ರಾಜಕೀಯದ ಪದ್ಧತಿ. ಮಾಜಿ ಮುಖ್ಯಮಂತ್ರಿಯಾದರೂ, ಕನಿಷ್ಠ ಜ್ಞಾನ ಹೊಂದಿಲ್ಲದ ಸಿದ್ದರಾಮಯ್ಯ ಯಾವುದಕ್ಕೆ ಹೋಲಿಸಬೇಕು ಎನ್ನುವುದಕ್ಕೆ ಪದಗಳೇ ಸಿಗುತ್ತಿಲ್ಲ.
ಹೋಲಿಸಲೂ ಹೋಗುವುದಿಲ್ಲ. ಮಾನಸಿಕ ಅಸ್ವಸ್ಥರಂತೆ ದಿನಕ್ಕೊಂದು ಹೇಳಿಕೆ ನೀಡುತ್ತಿರುವ ಅವರು ಕಾಂಗ್ರೆಸ್ನ ಅಧಿಕೃತ ಹೇಳಿಕೆ ನೀಡುತ್ತಿರುವುದಾ ಅಥವಾ ವೈಯಕ್ತಿಕ ಹೇಳಿಕೆಯಾ ಎಂದು ಕಾಂಗ್ರೆಸ್ ಅಧ್ಯಕ್ಷರು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.
ಇತ್ತೀಚಿನ ಬೆಳವಣಿಗೆಗಳಿಂಸ
ಹತಾಷರಾಗಿರುವ ಅವರು ಚುನಾವಣೆ ಹಿನ್ನೆಲೆಯಲ್ಲಿ ಓಟ್ಬ್ಯಾಂಕ್ಗಾಗಿ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಧಾನ ಮಂತ್ರಿಯವರ ಬಗ್ಗೆಯೂ ಆಗಾಗ ಅಗೌರವದ ಹೇಳಿಕೆ ನೀಡುತ್ತಾರೆ. ಮುಂದಿನ ಚುನಾವಣೆಯಲ್ಲಿ ಜನ ಅವರಿಗೆ ತಕ್ಕ ಉತ್ತರ ನೀಡಲಿದ್ದು, ಅವರನ್ನು ಹದ್ದುಬಸ್ತಿನಲ್ಲಿಡುವ ಕೆಲಸವನ್ನು ಕಾಂಗ್ರೆಸ್ ಅಧ್ಯಕ್ಷರು ಮಾಡಬೇಕು ಆಗ್ರಹಿಸಿದರು.
ಇದನ್ನೂ ಓದಿ: ಉಡುಪಿ: ಅಂಬಲಪಾಡಿ ಹೆದ್ದಾರಿಯಲ್ಲಿ ಸರಣಿ ಅಪಘಾತ: ನಾಲ್ವರಿಗೆ ಗಾಯ