“ಸುಖೀ ಸಮಾಜ ನಿರ್ಮಾಣ ಧರ್ಮದ ಕೆಲಸ’


Team Udayavani, Apr 13, 2017, 2:16 PM IST

1204ble6ph.jpg

ಬೆಳ್ತಂಗಡಿ : ಜನರಿಗೆ ಹಿತ, ಸುಖೀ ಸಮಾಜ ನಿರ್ಮಾಣ ಮಾಡುವುದೇ ಧರ್ಮದ ಕೆಲಸ. ಶ್ರದ್ಧಾ ಭಕ್ತಿಯ ತಾದಾತ್ಮé ಬಾರದೆ ಭಗವಂತನ ದರ್ಶನ ಪಡೆಯುವುದು ಅಸಾಧ್ಯ. ಸತ್ಯ, ಧರ್ಮ, ಭಗವಂತನ ಕೃಪೆ, ನಿರಂತರ ಶ್ರದ್ಧಾಭಕ್ತಿಯಿಂದ ಮಾತ್ರ ನಾವು ಸತ್ಕಾರ್ಯದಲ್ಲಿ ಮುನ್ನಡೆಯಲು ಸಾಧ್ಯ. ಯೋಗ, ಧ್ಯಾನ, ಸತ್ಸಂಗದಿಂದ ಸನಾತನ ಹಿಂದೂ ಧರ್ಮದ ಬೆಳಕು ನಮ್ಮನ್ನು ಮುನ್ನಡೆಸುತ್ತದೆ ಎಂದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ಅವರು ಮಂಗಳವಾರ ನಿಡಿಗಲ್‌ನ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದ ವರ್ಷಾವಧಿ ಸಿರಿ ಜಾತ್ರಾ ಮಹೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು.

ಮುಖ್ಯ ಅತಿಥಿಗಳಾಗಿ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸದಸ್ಯ ಮುಕುಂದ ಸುವರ್ಣ, ಲಾೖಲ ಜಿ.ಪಂ. ಕ್ಷೇತ್ರದ ಸದಸ್ಯೆ ಸೌಮ್ಯಲತಾ ಜಯಂತ ಗೌಡ, ನಡ ತಾ.ಪಂ. ಸದಸ್ಯೆ ವೇದಾವತಿ, ಉಜಿರೆ ತಾ.ಪಂ. ಸದಸ್ಯ ಶಶಿಧರ ಎಂ., ದೇವಸ್ಥಾನದ ವ್ಯವಸ್ಥಾಪನ  ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಮೊದಲಾದವರಿದ್ದರು.

ತುಳು ಜನಪದ ಕ್ಷೇತ್ರದ ಸಾಧಕ ಮಾಚಾರು ಗೋಪಾಲ ನಾೖಕ,  ನಾಟಿ ವೈದ್ಯ ಚನನ ಗೌಡ ಬಿಲ್ಲರೋಡಿ ಅವರನ್ನು ಸಮ್ಮಾನಿಸಲಾಯಿತು.

ಮೂವರು ಯುವ ಕ್ರೀಡಾ ಪ್ರತಿಭೆಗಳನ್ನು ಪುರಸ್ಕರಿಸಲಾಯಿತು. ಅನ್ನದಾನ, ಸಾಂಸ್ಕೃತಿಕ ಕಾರ್ಯಕ್ರಮದ ಪ್ರಾಯೋಜಕರನ್ನು ಗೌರವಿಸಲಾಯಿತು.

ವ್ಯವಸ್ಥಾಪನ ಸಮಿತಿ ಸದಸ್ಯ ನವೀನ್‌ ಶೆಟ್ಟಿ ಗುತ್ತಿಲಾರಬೆಟ್ಟು ಸ್ವಾಗತಿಸಿ, ಒಡಿಯೂರು ಸಂಸ್ಥಾನದ ಸಂಪನ್ಮೂಲ ವ್ಯಕ್ತಿ ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ, ಗುರುರಾಜ್‌ ವಂದಿಸಿದರು.

ರಾತ್ರಿ ಕುಮಾರ ದರ್ಶನ, ದೇವರ ಉತ್ಸವ, ಕಟ್ಟೆಪೂಜೆ, ವಾರ್ಷಿಕ ಸಿರಿ ಜಾತ್ರೆ ಹಾಗೂ ಸಸಿಹಿತ್ಲು ಭಗವತಿ ಮೇಳದ ಕಲಾವಿದರಿಂದ “ಪುಣ್ಣಮೆದ ಪೊಣ್ಣು’ ಯಕ್ಷಗಾನ ಪ್ರದರ್ಶನಗೊಂಡಿತು.

ವೇ| ಮೂ| ಮುಂಡೂರು ಗೋಪಾಲಕೃಷ್ಣ ತಂತ್ರಿಯವರ ನೇತೃತ್ವದಲ್ಲಿ ವಿಜಯರಾಘವ ಪಡ್ವೆಟ್ನಾಯರ ಮಾರ್ಗದರ್ಶನದಲ್ಲಿ ಅಜ್ಜರಪಾದ ಮತ್ತು ಭಂಡಾರ ಕಟ್ಟೆ ಪ್ರತಿಷ್ಠೆ, ಭೂತರಾಜ ಮಹಿಷಂತಾಯ, ಮೂರ್ತಿಲ್ಲಾಯ ದೈವಗಳ ನೇಮ, ಶತರುದ್ರಾಭಿಷೇಕ, ಅಬ್ಬಗ ದಾರಗರ ಚೆನ್ನೆಮಣೆ ಆಟ, ರಕ್ತೇಶ್ವರಿ,ಸೇಮಕಲ್ಲ ಪಂಜುರ್ಲಿ ದೈವಗಳ ಭೇಟಿ, ನಾಗಪಾತ್ರಿ ರಾಮಚಂದ್ರ ಕುಂಜಿತ್ತಾಯರಿಂದ ಆಶ್ಲೇಷಾ ಬಲಿ, ನಾಗದರ್ಶನ, ಸಾರ್ವಜನಿಕ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Road Mishap ಶಂಭೂರು: ಕಾರು-ಬೈಕ್‌ ಢಿಕ್ಕಿ; ಸವಾರ ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

Bantwal ರಸ್ತೆ ದಾಟಲು ನಿಂತಿದ್ದ ಮಹಿಳೆಗೆ ರಿಕ್ಷಾ ಢಿಕ್ಕಿ; ಗಾಯ

udAgricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Agricultural ಪಂಪ್‌ಸೆಟ್‌ ಕಳವು: ಕಳ್ಳರ ಚಹರೆ ಕೆಮರಾದಲ್ಲಿ ಸೆರೆ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Bantwal ಸಂಬಂಧಿ ಯುವತಿಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

Sullia: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ 2ವರ್ಷ: ಈವರೆಗೂ 7ಮಂದಿಯ ಪತ್ತೆಯೇ ಆಗಿಲ್ಲ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.