ಸು.ಕೋ. ನ್ಯಾಯಮೂರ್ತಿಯಾಗಿ ಬೆಳುವಾಯಿ ಕಾನದ ಅಬ್ದುಲ್ ನಝೀರ್
Team Udayavani, Feb 19, 2017, 8:40 AM IST
ಮೂಡಬಿದಿರೆ: ಸುಪ್ರೀಂ ಕೋರ್ಟ್ ನ್ಯಾಯ ಮೂರ್ತಿಯಾಗಿ ಮೂಡಬಿದಿರೆ ಸಮೀಪದ ಬೆಳುವಾಯಿ ಕಾನದ ಅಬ್ದುಲ್ ನಝೀರ್ ಅಧಿಕಾರ ಸ್ವೀಕರಿಸಿದ್ದಾರೆ.
ಬೆಳುವಾಯಿ ಕಾನದ ಫಕೀರ್ ಸಾಹೇಬ್ ಅವರ 6 ಮಂದಿ ಮಕ್ಕಳಲ್ಲಿ ಅಬ್ದುಲ್ ನಝೀರ್ ಹಿರಿಯ ಪುತ್ರ. 1979ರಲ್ಲಿ ಶ್ರೀ ಮಹಾವೀರ ಕಾಲೇಜಿನಲ್ಲಿ ಬಿ.ಕಾಂ. ಪದವಿಯ ಬಳಿಕ ಮಂಗಳೂರು ಎಸ್ಡಿಎಂ ಲಾ ಕಾಲೇಜಿನಲ್ಲಿ ಕಾನೂನು
ಪದವಿ ಗಳಿಸಿದರು. ಕಾರ್ಕಳದ ಎಂ.ಕೆ. ವಿಜಯಕುಮಾರ್ ಅವರಲ್ಲಿ ವಕೀಲ ವೃತ್ತಿ ಪ್ರಾರಂಭಿಸಿದ ಅವರು ಬೆಂಗಳೂರಿನಲ್ಲಿ ಬಾರ್ ಕೌನ್ಸಿಲ್ ಅಧ್ಯಕ್ಷರಾಗಿದ್ದ ತಮ್ಮ ಮಾವ ಕೆ.ಎಸ್. ಖಾಸಿಂ ಜತೆ ಸೇರಿಕೊಂಡು ಹೈಕೋರ್ಟ್ ವಕೀಲರಾಗಿ, ಬಳಿಕ ಹೆಸರಾಂತ ವಕೀಲ
ತಾರಕರಾಂ ಅವರ ಜ್ಯೂನಿಯರ್ ಆಗಿ ಕೆಲವುಕಾಲ ವೃತ್ತಿ ನಡೆಸಿ ಬಳಿಕ ಸ್ವತಂತ್ರವಾಗಿ ಕೆಲಸ ಮಾಡತೊಡಗಿದರು.
2003ರ ಮೇ 12ರಂದು ಹೈಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡು 14 ವರ್ಷಗಳ ಬಳಿಕ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗುವ ಅವಕಾಶ ಗಳಿಸಿದರು. ಹೈಕೋರ್ಟ್ ಮುಖ್ಯ ನ್ಯಾಯಾ ಧೀಶರಾಗದಿದ್ದರೂ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಯವರು ಅಬ್ದುಲ್ ನಝೀರ್ ಅವರ ಪ್ರತಿಭೆ, ನಿಷ್ಪಕ್ಷ ಧೋರಣೆ, ಪರಿಶ್ರಮಶೀಲ ಗುಣಗಳನ್ನು ಗಮನಿಸಿ ಸುಪ್ರೀಂ ನ್ಯಾಯಮೂರ್ತಿಗಳಾಗಿ ನೇಮಿಸಲು ಕಾರಣರಾಗಿದ್ದಾರೆ ಎನ್ನಲಾಗಿದೆ. ಕಳೆದ 27 ವರ್ಷಗಳಲ್ಲೇ ಮೊದಲ ಬಾರಿಗೆ ಏಕಕಾಲದಲ್ಲಿ ಐವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡಲಾಗಿದ್ದು ನಝೀರ್ ಇವರಲ್ಲಿ ಓರ್ವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ