ಸುಳ್ಯ ಬಂದ್‌: ಹಾಲು ಪೂರೈಕೆಗೆ ತಡೆ; ಪರದಾಟ


Team Udayavani, Mar 29, 2020, 5:05 AM IST

ಸುಳ್ಯ ಬಂದ್‌: ಹಾಲು ಪೂರೈಕೆಗೆ ತಡೆ; ಪರದಾಟ

ಸುಳ್ಯ: ಸಂಪೂರ್ಣ ಬಂದ್‌ನಿಂದಾಗಿ ಶನಿವಾರ ತಾಲೂಕಿನಲ್ಲಿ ಜನಜೀವನ ಸ್ತಬ್ಧವಾಗಿತ್ತು. ಜನ, ವಾಹನ ಓಡಾಟಕ್ಕೆ ಕಡಿವಾಣ ಬಿದ್ದು, ಲಾಕ್‌ಡೌನ್‌ ಆದೇಶ ಪಾಲನೆ ಆಯಿತು. ಜಾಲೂÕರು, ಸುಳ್ಯ, ಕಲ್ಲುಗುಂಡಿ ಕಡೆ ನಿಯಮ ಮೀರಿ ರಸ್ತೆಗೆ ಇಳಿದ ವಾಹನ ಸವಾರರಿಗೆ ಪೊಲೀಸರು ಲಾಠಿ ಎಚ್ಚರಿಕೆ ನೀಡಿ ಮನೆಗೆ ಕಳುಹಿಸಿದರು.

ಹಾಲು ಪೂರೈಕೆಗೆ ಅಡ್ಡಿ
ಹಾಲು ಪೂರೈಕೆಗೆ ಸರಕಾರ ಅವಕಾಶ ನೀಡಿದ್ದರೂ ಶನಿವಾರ ಅಡ್ಡಿ ಉಂಟಾಯಿತು. ಹಲವೆಡೆ ಹಾಲು ಪೂರೈಕೆ ವಾಹನಗಳಿಗೆ ಪೊಲೀಸರು ತಡೆ ಒಡ್ಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಸಂಜೆ ವೇಳೆ ಹಾಲಿನ ಡಿಪೋಗಳಲ್ಲಿ ಹಾಲು ಖರೀದಿ ಸ್ಥಗಿತ ಮಾಡಲಾಯಿತು. ದಿನಕ್ಕೆ 200ಕ್ಕೂ ಅಧಿಕ ಲೀಟರ್‌ ಹಾಲು ಪೂರೈಕೆ ಮಾಡುವ ಹೈನುಗಾರರಿದ್ದು, ತೊಂದರೆಗೀಡಾದರು.

ಅಲೆಮಾರಿ ಕುಟುಂಬಗಳಿಗೆ ನೆರವು
ಸುಳ್ಯ ಕಸಬಾ ಗ್ರಾಮದ ಕಂದಡ್ಕದಲ್ಲಿ ಡೇರೆ ಹಾಕಿರುವ ಅಲೆಮಾರಿ ಜನರಿಗೆ ದುಗ್ಗಲಡ್ಕದ ಸಂಘ ಸಂಸ್ಥೆಗಳ ಸದಸ್ಯರು ಹಣ ಸಂಗ್ರಹಿಸಿ ಅಕ್ಕಿ, ಧಾನ್ಯಗಳನ್ನು ನೀಡಿದರು. ಯತೀಶ್‌ ರೈ ದುಗ್ಗಲಡ್ಕ, ನ.ಪಂ. ಸದಸ್ಯ ಬಾಲಕೃಷ್ಣ ರೈ ದುಗಲಡ್ಕ, ದಿನೇಶ್‌ ಮಣಿಯಾಣಿ, ನ.ಪಂ. ಸದಸ್ಯೆ ಶಶಿಕಲಾ ನೀರಬಿದಿರೆ, ಮಾಜಿ ನ.ಪಂ. ಅಧ್ಯಕ್ಷೆ ಶೀಲಾವತಿ ಮಾಧವ, ಹೇಮಂತ್‌ ಕಂದಡ್ಕ ಉಪಸ್ಥಿತರಿದ್ದರು.

ಗಡಿ ಗ್ರಾಮದ ಗೋಳು
ಕರ್ನಾಟಕ -ಕೇರಳ ಗಡಿ ಪ್ರದೇಶಗಳಲ್ಲಿ ಕರ್ನಾಟಕ ಸರಕಾರವು ಬ್ಯಾರಿಕೇಡ್‌, ಮಣ್ಣು ಹಾಕಿ ಬಂದ್‌ ಮಾಡಿರುವುದು ಕೇರಳ ದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಪಾಣ ತ್ತೂರಿನ ಕಲ್ಲಪ್ಪಳ್ಳಿ, ಬಂದಡ್ಕದ ಕನ್ನಡಿತೋಡು, ಅಡೂರಿನ ಕನ್ಯಾನ, ಪಂಜಿಕಲ್ಲಿನ ಮುರೂರು ಭಾಗದಲ್ಲಿ ಹೀಗೆ ಬಂದ್‌ ಮಾಡಲಾಗಿತ್ತು.

ಸಮಯ ನಿಗದಿ
ಕೊಡಗಿನಲ್ಲಿ ಸಾರ್ವಜನಿಕರು ಅವಶ್ಯ ವಸ್ತುಗಳನ್ನು ಖರೀದಿಸಲು ಬೆಳಗ್ಗೆ 6ರಿಂದ ಅಪರಾಹ್ನ 12ರ ವರೆಗೆ ಸಮಯವನ್ನು ಈ ಹಿಂದೆ ನಿಗದಿಗೊಳಿಸಲಾಗಿತ್ತು. ಸುಳ್ಯ ತಾಲೂಕಿನ ಹಲವು ಗ್ರಾಮಗಳು ಕೊಡಗು ಗಡಿಭಾಗದಲ್ಲಿದ್ದು, ಜಿಲ್ಲೆಯಲ್ಲಿ ಇನ್ನೂ ಹೆಚ್ಚಿನ ಮುಂಜಾಗ್ರತೆಯನ್ನು ವಹಿಸ ಬೇಕಾದ ಕಾರಣ ಶನಿವಾರ ಜಿಲ್ಲೆಯ ಜನ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಅಗತ್ಯ ವಸ್ತುಗಳನ್ನು ಖರೀದಿಸಲು ಈ ಕೆಳಕಂಡಂತೆ ಸಮಯ ನಿಗದಿಪಡಿಸಲಾಗಿದೆ.

ಬೆಳಗ್ಗೆ 6ರಿಂದ 8ರ ವರೆಗೆ ಹಾಲು, ದಿನಪತ್ರಿಕೆ ಮಾತ್ರ ಖರೀದಿ.ಸೋಮವಾರ, ಬುಧವಾರ ಮತ್ತು ಶುಕ್ರವಾರ ಮಾತ್ರ ಬೆಳಗ್ಗೆ 6ರಿಂದ 10ರ ವರೆಗೆ ಮಾತ್ರ ಆಹಾರ, ದಿನಸಿ, ತರಕಾರಿ, ಹಣ್ಣುಹಂಪಲುಗಳ ಖರೀದಿ.ಎಲ್ಲ ರೀತಿಯ ಮೀನು ಮತ್ತು ಮಾಂಸ ಮಾರಾಟ ನಿಷೇಧ.ಅಗತ್ಯ ವಸ್ತುಗಳ ಖರೀದಿಗೆ ಪ್ರತೀ ಮನೆಯಿಂದ ಒಬ್ಬ ಆರೋಗ್ಯವಂತ ವ್ಯಕ್ತಿ ಮಾತ್ರ ಆಗಮಿಸಬೇಕು.

ವ್ಯಕ್ತಿಯಿಂದ ವ್ಯಕ್ತಿಗೆ ಕನಿಷ್ಠ 1 ಮೀ. ಅಂತರ ಕಾಯ್ದುಕೊಳ್ಳಬೇಕು.
ಆಸ್ಪತ್ರೆ, ಕ್ಲಿನಿಕ್‌, ಫಾರ್ಮಸಿ, ಆಪ್ಟಿಕಲ್‌ ಸ್ಟೋರ್‌, ಡಯಾಗ್ನೊàಸ್ಟಿಕ್‌ ಸೆಂಟರ್‌ ಒಳಗೊಂಡಂತೆ ಇತರ ಆರೋಗ್ಯ, ವೈದ್ಯಕೀಯ ಸಂಬಂಧಿ ಅಂಗಡಿ, ಗೋಡೌನ್‌, ಕಾರ್ಖಾನೆಗಳಿಗೆ ಮಾತ್ರ ದಿನದ 24 ಗಂಟೆಗಳು ಕಾರ್ಯಾಚರಿಸಲು ವಿನಾಯಿತಿ.

ದಿನಪತ್ರಿಕೆ ವಿತರಣೆಗೆ ಅಡ್ಡಿ ಇಲ್ಲ
ದಿನಪತ್ರಿಕೆ ವಿತರಣೆಗೆ ಅವಕಾಶ ಇದ್ದು, ಪೊಲೀಸರು ಅಡ್ಡಿ ಮಾಡುವುದಿಲ್ಲ. ಮನೆ ಮನೆಗೆ ಪತ್ರಿಕೆ ವಿತರಣೆ ಮಾಡಬಹುದಾಗಿದೆ. ಈ ತನಕ ಯಾವುದೇ ದೂರು ಬಂದಿಲ್ಲ. ಅಡ್ಡಿ ಉಂಟಾದಲ್ಲಿ ಸಂಪರ್ಕಿಸುವಂತೆ ಸುಳ್ಯ ಠಾಣೆ ಎಸ್‌.ಐ. ಹರೀಶ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.