ಸುಳ್ಯ: ಪ್ರವಾಹಕ್ಕೆ ಸಿಲುಕಿ ವ್ಯಕ್ತಿ ಸಾವು
Team Udayavani, Jun 28, 2017, 3:45 AM IST
ಸುಳ್ಯ: ಸ್ನಾನಕ್ಕೆಂದು ಹೊಳೆಗಿಳಿದ ವ್ಯಕ್ತಿಯೊಬ್ಬರು ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿಹೋದ ಘಟನೆ ಆಲೆಟ್ಟಿ ಗ್ರಾಮ ಪೈಂಬೆಚ್ಚಾಲ್ನಲ್ಲಿ ಸೋಮವಾರ ಸಂಭವಿಸಿದೆ. ಮಂಗಳವಾರ ಬೆಳಗ್ಗೆ ಸ್ವಲ್ಪ ದೂರದಲ್ಲಿ ಮರದ ಎಡೆಯಲ್ಲಿ ಮೃತದೇಹ ಪತ್ತೆಯಾಯಿತು. ಪೈಂಬೆಚ್ಚಾಲ್ನ ಚಂದ್ರಕುಮಾರ್ ಯಾನೆ ಚಂದ್ರಶೇಖರ (33) ನೀರಲ್ಲಿ ಮುಳುಗಿ ಮೃತಪಟ್ಟವರು.
ಕಾರ್ಮಿಕರಾದ ಇವರು ಪೈಂಬೆಚ್ಚಾಲು ಹೊಳೆಗೆ ಸ್ನಾನಕ್ಕೆಂದು ಇಳಿದಿದ್ದು, ಭಾರೀ ಮಳೆಯಿಂದಾಗಿ ನೀರಿನ ಸೆಳೆತ ಹೆಚ್ಚಾಗುತ್ತಾ ಬಂದಿದ್ದು, ನೀರಲ್ಲಿ ಕೊಚ್ಚಿಹೋದರು. ಮಂಗಳವಾರ ಸ್ವಲ್ಪ ದೂರದಲ್ಲಿ ಅವರ ಮೃತದೇಹ ಪತ್ತೆಯಾಯಿತು. ಸುಳ್ಯ ಠಾಣೆಯಲ್ಲಿ ದೂರು ದಾಖಲಾಗಿದೆ.
ಕಳೆದೆರಡು ದಿನಗಳಿಂದ ಸುರಿದ ಮಳೆಯ ಬಿರುಸು ಮಂಗಳವಾರ ಕಡಿಮೆಯಾಗಿದೆ. ಮಂಗಳವಾರ ಒಂದೆರಡು ಬಾರಿ ಮಾತ್ರ ಮಳೆ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ