ಸುಳ್ಯ: ಡಾ| ಕುರುಂಜಿ ವೆಂಕಟ್ರಮಣ ಗೌಡ
Team Udayavani, Dec 10, 2017, 3:14 PM IST
ಸುಳ್ಯ: ಕೆವಿಜಿ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ, ಸುಳ್ಯದ ‘ಅಮರಶಿಲ್ಪಿ’ ಡಾ| ಕುರುಂಜಿ ವೆಂಕಟ್ರಮಣ ಗೌಡ ಅವರ ಕಂಚಿನ ಪ್ರತಿಮೆ ನಿರ್ಮಾಣಕ್ಕಾಗಿ ಶನಿವಾರ ಸುಳ್ಯ ಬಸ್ನಿಲ್ದಾಣ ಬಳಿ ಭೂಮಿಪೂಜೆ ಜರಗಿತು. ಈ ಸಂದರ್ಭ ಸ್ಮಾರಕ ಸಮಿತಿ ಅಧ್ಯಕ್ಷರಾಗಿರುವ ಶಾಸಕ ಎಸ್. ಅಂಗಾರ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಭೂಮಿಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ನ.ಪಂ. ಅಧ್ಯಕ್ಷೆ ಶೀಲಾವತಿ ಮಾಧವ, ನ.ಪಂ. ಸದಸ್ಯೆ ಪ್ರೇಮಾ ಟೀಚರ್, ಎಪಿಎಂಸಿ ಅಧ್ಯಕ್ಷ ಅಡ್ಡಂತಡ್ಕ ದೇರಣ್ಣ ಗೌಡ, ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಆನುವಂಶಿಕ ಮೊಕ್ತೇಸರ ಡಾ| ಹರಪ್ರಸಾದ್ ತುದಿಯಡ್ಕ ಬಿಜೆಪಿ ಮುಖಂಡರಾದ ಎ.ವಿ. ತೀರ್ಥರಾಮ, ವೆಂಕಟ್ ವಳಲಂಬೆ, ವಿನಯ್ ಕಂದಡ್ಕ, ಶೀನಪ್ಪ ಬಯಂಬು, ಚಂದ್ರಕೋಲ್ಚಾರ್, ಆರೆಸ್ಸೆಸ್ ವಿಭಾಗ ಕಾರ್ಯವಾಹ ನ. ಸೀತಾರಾಮ, ಗೌಡ ಯುವ ಸೇವಾ ಸಂಘದ ಮುಖಂಡರಾದ ದಿನೇಶ್ ಮಡಪ್ಪಾಡಿ, ಶ್ರೀಕಾಂತ್ ಮಾವಿನಕಟ್ಟೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚಂದ್ರಶೇಖರ ಪೇರಾಲು, ಪ್ರಮುಖರಾದ ಕೃಷ್ಣ ಪ್ರಸಾದ್ಮಡ್ತಿಲ, ಪಡ್ಡಂಬೈಲು ವೆಂಕಟ್ರಮಣ ಗೌಡ, ಗಂಗಾಧರ ಪಿ.ಎಸ್., ಕೆವಿಜಿ ತಾಂತ್ರಿಕ ಕಾಲೇಜು ಪ್ರಾಂಶುಪಾಲ ಡಾ| ಜ್ಞಾನೇಶ್, ಕೆವಿಜಿ ಆಯುರ್ವೇದ ಕಾಲೇಜಿನ ಆಡಳಿತಾಧಿಕಾರಿ ಡಾ| ಲೀಲಾಧರ್, ಸುಳ್ಯಪೊಲೀಸ್ ಠಾಣಾಧಿಕಾರಿ ಮಂಜುನಾಥ್ ಮೊದಲಾದವರು ಉಪಸ್ಥಿತರಿದ್ದರು.
ಸಮಾಲೋಚನ ಸಭೆ
ಭೂಮಿಪೂಜೆ ಬಳಿಕ ಸುಳ್ಯ ಸಿ.ಎ. ಬ್ಯಾಂಕ್ ಸಭಾಂಗಣದಲ್ಲಿ ಸಮಾಲೋಚನ ಸಭೆ ನಡೆಯಿತು. ಡಾ| ಕೆ. ವಿ. ಚಿದಾನಂದ ಅವರು ಮಾತನಾಡಿ, ಪ್ರತಿಮೆ ನಿರ್ಮಾಣದ ಕನಸು ತಡವಾಗಿಯಾದರೂ ಈಡೇರಿಸುವ ಉದ್ದೇಶಕ್ಕೆ ಕಾಲಕೂಡಿ ಬಂದು ಚಾಲನೆ ದೊರೆತಿರುವುದು ಸಂತಸದಾಯಕ. ಪಕ್ಷಾತೀತ ಮತ್ತು ಧರ್ಮಾತೀತವಾಗಿ ಎಲ್ಲರ ಸಹಭಾಗಿತ್ವದೊಂದಿಗೆ ಪ್ರತಿಮೆ ಕನಸು ಸಾಕಾರಗೊಳ್ಳಬೇಕು ಎಂದರು.
ತಾ.ಪಂ. ಅಧ್ಯಕ್ಷ ಚನಿಯಕಲ್ತಡ್ಕ, ನ.ಪಂ. ಅಧ್ಯಕ್ಷೆ ಶೀಲಾವತಿ ಉಪಸ್ಥಿತರಿದ್ದರು. ನ. ಸೀತಾರಾಮ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ವಿವಿಧ ಪಕ್ಷಗಳ ಮತ್ತು ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಸಹಕಾರ ಗುಣ ಅಗತ್ಯ
ಬಹುದಿನಗಳ ಮತ್ತು ಬಹುಜನರ ಬೇಡಿಕೆಯಾಗಿರುವ ಪ್ರತಿಮೆ ನಿರ್ಮಾಣ ಸಾರ್ವಜನಿಕ ಪ್ರತಿಮೆಯಾಗಿ ರೂಪುಗೊಳ್ಳಬೇಕು. ಇದರಿಂದ ಗೌರವ ಹೆಚ್ಚಾಗುತ್ತದೆ. ಪ್ರತಿಮೆ ನಿರ್ಮಾಣಕ್ಕೆ ಸಹಕಾರವಾಗಿ ಅನುದಾನ ನೀಡುವ ಸಹಕಾರದ ಗುಣ ಅಗತ್ಯ ಎಂದು ಶಾಸಕ ಅಂಗಾರ ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ