ಪರ್ಯಾಯ ರಸ್ತೆ ನಿರ್ಲಕ್ಷ್ಯದಿಂದ ಸಂಚಾರ ಬಂದ್‌ ಭಾಗ್ಯ!


Team Udayavani, Aug 24, 2018, 9:26 AM IST

raste.jpg

ಸುಳ್ಯ: ಸಂಪಾಜೆ-ಮಡಿಕೇರಿ ಹೆದ್ದಾರಿ ಜೋಡುಪಾಲ-ಮದೆನಾಡು ತನಕ ಕುಸಿದಿದೆ. ಸುಧಾರಣೆಗೆ ಕೆಲವು ತಿಂಗಳು ಕಾಯಬೇಕು. ಓಡಾಟ ಹೇಗೆ ಎಂಬ ಪ್ರಶ್ನೆಗೆ ನಾಲ್ಕು ರಸ್ತೆಗಳು ಉತ್ತರವಾಗಲು ತವಕಿಸುತ್ತಿವೆ! ಆದರೆ ಪರ್ಯಾಯ ರಸ್ತೆಗಳ ಅಭಿವೃದ್ಧಿ ಕುರಿತ ನಿರ್ಲಕ್ಷ್ಯದಿಂದಾಗಿ ಇವು ಸಂಚಾರ ಯೋಗ್ಯ ಸ್ಥಿತಿಯಲ್ಲಿಲ್ಲ. ಅರಣ್ಯ ವ್ಯಾಪ್ತಿ, ಕಚ್ಚಾ ರಸ್ತೆ, ಸೇತುವೆಗಳ ಆವಶ್ಯಕತೆ ಇವು ದಶಕಗಳಿಂದ ಎದುರಿಸುತ್ತಿರುವ ಸಮಸ್ಯೆ.

ಮಡಿಕೇರಿಗೆ ಮೂರು ರಸ್ತೆ
ಸರಕಾರ ಮನಸ್ಸು ಮಾಡಿದರೆ ಸುಳ್ಯದಿಂದ ಮಡಿಕೇರಿಗೆ ಇನ್ನೂ 3 ರಸ್ತೆಗಳು ಇವೆ. ಇವುಗಳ ಅಭಿವೃದ್ಧಿಗೆ ಆದ್ಯತೆ ನೀಡಿದರೆ ಮಂಗಳೂರು- ಮಡಿಕೇರಿ- ಮೈಸೂರು- ಬೆಂಗಳೂರು ಸಂಪರ್ಕಕ್ಕೆ ಅನುಕೂಲ.

ಯಾವುವು?
ಸುಳ್ಯ- ಅರಂತೋಡು- ಸಂಪಾಜೆ- ಕಲ್ಲು ಗುಂಡಿ- ಬಾಲೆಂಬಿ-  ದಬ್ಬಡ್ಕ- ಕೊಪ್ಪಟ್ಟಿ- ಚೆಟ್ಟಿ ಮಾನಿ- ಭಾಗಮಂಡಲ- ಮಡಿಕೇರಿ ಒಂದನೆಯ ರಸ್ತೆ. ಇದರಲ್ಲಿ ಸುಳ್ಯದಿಂದ ಮಡಿಕೇರಿಗೆ 72 ಕಿ.ಮೀ., ತಗಲುವ ಸಮಯ ಒಂದೂವರೆ ತಾಸು. ದಬ್ಬಡ್ಕ ತನಕ ಡಾಮರು ಇದೆ. ಸಣ್ಣ 2 ಸೇತುವೆ ಆಗ ಬೇಕು. ಬೇಸಗೆಯಲ್ಲಿ ದಬ್ಬಡ್ಕ ತನಕ ಬಸ್‌ ಸಂಚಾರ  ವಿದೆ. 1 ಕಿ.ಮೀ. ದೂರ ಅರಣ್ಯ ಇಲಾಖೆಯ ತಕರಾರು ಇದ್ದು, ಪರಿ ಹಾರ ವಾದರೆ ಮಡಿಕೇರಿ ಸಂಪರ್ಕಕ್ಕೆ ಅತಿ ಸನಿಹ.

ಎರಡನೆಯದು ಅರಂತೋಡು- ಮರ್ಕಂಜ- ಎಲಿಮಲೆ- ಸುಬ್ರಹ್ಮಣ್ಯ- ಕಲ್ಮಕಾರು- ಗಾಳಿ ಬೀಡು ರಸ್ತೆ. ಇದರಲ್ಲಿ ಸುಬ್ರಹ್ಮಣ್ಯದಿಂದ ಕಲ್ಮ ಕಾರು- ಗಾಳಿಬೀಡು ಕಚ್ಚಾ ರಸ್ತೆ ಇದ್ದು, ಮಡಿಕೇರಿ ಚೆಕ್‌ಪೋಸ್ಟ್‌ಗೆ ಜೋಡಣೆ ಆಗುತ್ತದೆ. ಇದು ಅಭಿವೃದ್ಧಿ ಯಾದರೆ ಮಡಿಕೇರಿಗೆ 45 ಕಿ.ಮೀ., ಮುಕ್ಕಾಲು ತಾಸಿನಲ್ಲಿ ತಲುಪಬಹುದು. ಸ್ಥಳೀಯರು ಹೇಳುವ ಪ್ರಕಾರ 1972ರಲ್ಲಿಯೇ ಈ ರಸ್ತೆಗೆ ಶಿಲಾನ್ಯಾಸ ಆಗಿತ್ತು. ಇದು ಅರಣ್ಯ ಇಲಾಖೆ ವ್ಯಾಪ್ತಿಗೆ ಸೇರಿರುವುದರಿಂದ ಅದು ಒಪ್ಪಿಗೆ ನೀಡಿದರೆ ಮಾತ್ರ ಇಲ್ಲಿ ವಾಹನ ಸಂಚಾರಕ್ಕೆ ಅವಕಾಶ. ಕಾನೂನು ತಿದ್ದುಪಡಿ ಮಾಡಿದಲ್ಲಿ ಬಳಕೆಗೆ ಸಿಗಲಿದೆ.

ಸುಳ್ಯ- ಆಲೆಟ್ಟಿ- ಪಾಣತ್ತೂರು- ಕರಿಕೆ- ಭಾಗ ಮಂಡಲ- ಮಡಿಕೇರಿ ರಸ್ತೆ ಮೂರನೆಯದು. ಇಲ್ಲಿ ತಾತ್ಕಾಲಿಕವಾಗಿ ಕೆಎಸ್‌ಆರ್‌ಟಿಸಿ ಮಿನಿ ಬಸ್‌ ಓಡಾಟ ಆರಂಭಿಸಿದೆ. 98 ಕಿ.ಮೀ. ದೂರದ ಈ ರಸ್ತೆಯಲ್ಲಿ ಕೊಡಗಿನ ಭಾಗ ಅಭಿವೃದ್ಧಿಗೆ ಬಾಕಿ ಇದೆ. ಈಗ ಅಲ್ಲಲ್ಲಿ ಗುಡ್ಡ ಜರಿದಿದ್ದು, ಐದಾರು ಜೆಸಿಬಿ ಯಂತ್ರ ಕೆಲಸ ಮಾಡುತ್ತಿವೆ. ಇದು ಅಭಿವೃದ್ಧಿಗೊಂಡು ವಿಸ್ತರಣೆ ಆದರೆ 3 ತಾಸಿನಲ್ಲಿ ಮಡಿಕೇರಿ ತಲುಪಬಹುದು. 

ಇನ್ನೂ ಒಂದು ಮಾರ್ಗವಿದೆ
ಇವು ಮೂರಲ್ಲದೆ, ಅರಂತೋಡು- ತೊಡಿಕಾನ- ಪಟ್ಟಿ- ಭಾಗಮಂಡಲ- ಮಡಿಕೇರಿ ಎಂಬ ಇನ್ನೂ ಒಂದು ಮಾರ್ಗವಿದೆ. ಇದರಲ್ಲಿ ಸುಳ್ಯದಿಂದ ಭಾಗಮಂಡಲಕ್ಕೆ ಕೇವಲ 36 ಕಿ.ಮೀ. ತೊಡಿಕಾನ ಗ್ರಾಮದ ಕಟ್ಟೆಹೊಳೆ ತನಕ ಡಾಮರು ಹಾಕಲಾಗಿದೆ. ಇನ್ನು 9 ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕಿದೆ. ಇದಾದರೆ ಪೌರಾಣಿಕ ದೇವಾಲಯಗಳಾದ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಮತ್ತು ಭಾಗಮಂಡಲ, ತಲಕಾವೇರಿ ಕ್ಷೇತ್ರಗಳಿಗೆ ಸಂಪರ್ಕ ಸಾಧ್ಯ.

ಹಲವು ಗ್ರಾಮಗಳಿಗಿಲ್ಲ  ಸಂಪರ್ಕ
ಮಡಿಕೇರಿ-ಸಂಪಾಜೆ ಘಾಟಿ ರಸ್ತೆ ಕುಸಿದ ಬೆನ್ನಲ್ಲೇ ಕೊಡಗು ಮತ್ತು ದ.ಕ. ಜಿಲ್ಲೆಯ ಹಲವು ಗ್ರಾಮಗಳು ದ್ವೀಪವಾಗಿವೆ. ಸುಳ್ಯ ಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನೂರಾರು ಮಂದಿ ಅತಂತ್ರ ಸ್ಥಿತಿಯಲ್ಲಿದ್ದಾರೆ. ಜೋಡುಪಾಲ, ಕೊಡಗು ಸಂಪಾಜೆ, ಚೆಂಬು, ಪೆರಾಜೆ ಗ್ರಾಮಗಳ 7 ಸಾವಿರಕ್ಕೂ ಮಿಕ್ಕಿ ಮಂದಿಗೆ ತಾಲೂಕು ಕೇಂದ್ರ ಮಡಿಕೇರಿಗೆ ತೆರಳಲು ಆಗುತ್ತಿಲ್ಲ.

ಬಹುತೇಕ ಪೂರ್ಣ
ಸುಳ್ಯ- ಕರಿಕೆ- ಮಡಿಕೇರಿ, ಅರಂತೋಡು- ಸುಬ್ರಹ್ಮಣ್ಯ- ಕಲ್ಮಕಾರು- ಗಾಳಿಬೀಡು ರಸ್ತೆಯಲ್ಲಿ  ದ.ಕ. ಜಿಲ್ಲೆಯ ವ್ಯಾಪ್ತಿಗೆ ಸೇರಿದ ರಸ್ತೆಗಳ ಅಭಿವೃದ್ಧಿ ಆಗಿದೆ. ಕೊಡಗು ವ್ಯಾಪ್ತಿಯಲ್ಲಿ  ಅಭಿವೃದ್ಧಿ ಆಗಬೇಕಿದೆ. ಸುಳ್ಯ- ದಬ್ಬಡ್ಕ- ಮಡಿಕೇರಿ ರಸ್ತೆಯಲ್ಲಿ 1 ಕಿ.ಮೀ. ಡಾಮರಿಗೆ ಬಾಕಿ ಇದೆ. ಅಲ್ಲಿ  ಅರಣ್ಯ ಭಾಗ ಬರುವುದರಿಂದ ಸಮಸ್ಯೆ ಉಂಟಾಗಿದೆ.
ಹನುಮಂತರಾಯಪ್ಪ , ಜಿ.ಪಂ. ಎಡಬ್ಲ್ಯೂಡಿ, ಸುಳ್ಯ

ಟಾಪ್ ನ್ಯೂಸ್

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ವೇಷ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವೇಷದ ಬಣ್ಣ ಕಳಚುವ ವೇಳೆ ಹೃದಯಾಘಾತ… ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.