ಎಂಟು ತಿಂಗಳಲ್ಲಿ ಸುಳ್ಯ ನ.ಪಂ. ಚುನಾವಣೆ


Team Udayavani, Jun 14, 2018, 11:56 AM IST

14-june-6.jpg

ಸುಳ್ಯ: ಎಂಟು ತಿಂಗಳಲ್ಲಿ ಸುಳ್ಯ ನಗರ ಪಂಚಾಯತ್‌ ಹೊಸ ಚುನಾವಣೆಗೆ ಸಿದ್ಧಗೊಳ್ಳಲಿದೆ. ಐದು ವರ್ಷಗಳ ಆಡಳಿತದ ಅವಧಿ 2019 ಮಾ. 11ಕ್ಕೆ ಮುಕ್ತಾಯವಾಗಲಿದೆ. ಈ ವರ್ಷದ ಡಿಸೆಂಬರ್‌ನಲ್ಲಿ ಚುನಾವಣೆಯ ಸಿದ್ಧತೆಗಳು ಆರಂಭಗೊಂಡು, ಫೆಬ್ರವರಿ ಎರಡನೆ ವಾರದಲ್ಲಿ ದಿನಾಂಕ ಪ್ರಕಟಗೊಳ್ಳುವ ಸಾಧ್ಯತೆ ಇದೆ ಎಂದು ನ.ಪಂ. ಮೂಲಗಳು ಮಾಹಿತಿ ನೀಡಿವೆ.

ಆರು ವರ್ಷ..!
ಈ ಹಿಂದಿನ ಬಾರಿ 2013 ಮಾರ್ಚ್‌ 7ರಂದು ಚುನಾವಣೆ ನಡೆದು, ಮಾ. 11ರಂದು ಫಲಿತಾಂಶ ಪ್ರಕಟಗೊಂಡಿತ್ತು. ಅಂದರೆ ಐದು ವರ್ಷ ಮೂರು ತಿಂಗಳಾಗಿದೆ. ನಿಯಮ ಪ್ರಕಾರ ಐದು ವರ್ಷಕ್ಕೊಮ್ಮೆ ಚುನಾವಣೆ ಆಗಬೇಕು. ಇಲ್ಲಿ 2019ರಲ್ಲಿ ಚುನಾವಣೆ ನಡೆಯುವುದರಿಂದ ಭರ್ತಿ ಆರು ವರ್ಷಗಳಾಗುತ್ತದೆ.

2013ರ ಚುನಾವಣೆ ಮತ ಎಣಿಕೆ ಆಗಿ, ಅಧ್ಯಕ್ಷ-ಉಪಾಧ್ಯಕ್ಷತೆಗೆ ಮೀಸಲಾತಿ ನಿಗದಿ ವಿಳಂಬವಾದ ಕಾರಣ, ಒಂದು ವರ್ಷ ನ.ಪಂ.ನಲ್ಲಿ ಚುನಾಯಿತ ಜನ ಪ್ರತಿನಿಧಿಗಳಿಗೆ ಆಡಳಿತ ನಡೆಸಲು ಸಾಧ್ಯವಾಗಿರಲಿಲ್ಲ. 2014 ಮಾ.11 ರಂದು ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದಿತ್ತು. ಅಲ್ಲಿಂದ ಚುನಾಯಿತ ಸದಸ್ಯರ ಅವಧಿ ಆರಂಭಗೊಳ್ಳುವ ಕಾರಣ, 2019 ಮಾ. 11ಕ್ಕೆ ಐದು ವರ್ಷ ತುಂಬುತ್ತದೆ. ಅದೇ ಲೆಕ್ಕದಲ್ಲಿ ಚುನಾವಣೆ ನಡೆಯಲಿದೆ. 

ವಾರ್ಡ್‌ ಸಂಖ್ಯೆ ಹೆಚ್ಚಳ
2011ರ ಜನಗಣತಿ ಪ್ರಕಾರ ಜನಸಂಖ್ಯೆ 19,958 ಇದೆ. ಹಾಗಾಗಿ ವಾರ್ಡ್‌ಗಳ ಪುನರ್‌ ವಿಂಗಡನೆ ನಡೆದು, 2 ವಾರ್ಡ್‌ ಹೆಚ್ಚುವರಿಯಾಗಿ ರಚಿಸಲಾಗಿದೆ. ಈಗಿರುವ 18 ವಾರ್ಡ್‌ಗಳ ಜತೆಗೆ ಹೊಸದಾಗಿ ಎರಡು ಸೇರ್ಪಡೆಗೊಂಡು, 20ಕ್ಕೆ ಏರಿಕೆ ಕಂಡಿದೆ. ಜಯನಗರ ಜಟ್ಟಿಪಳ್ಳ, ಬೋರುಗುಡ್ಡೆ ವಾರ್ಡ್‌ ಹಾಗೂ ಆಯ್ದ ಕೆಲ ವಾರ್ಡ್‌ಗಳ ಕೆಲವು ಪ್ರದೇಶಗಳನ್ನು ಸೇರ್ಪಡೆಗೊಳಿಸಿ ಹೊಸ ವಾರ್ಡ್‌ ರಚಿಸಲಾಗಿದೆ.

ಈಗಿನ ಬಲಾಬಲ
ಹಾಲಿ 18 ಸ್ಥಾನಗಳಲ್ಲಿ ಬಿಜೆಪಿ 12, ಕಾಂಗ್ರೆಸ್‌ 5 ಹಾಗೂ ಎಸ್‌ಡಿಪಿಐ 1 ಸ್ಥಾನ ಹೊಂದಿವೆ. ಬಿಜೆಪಿ ಆಡಳಿತದಲ್ಲಿದೆ. 20 ವಾರ್ಡ್‌ ರಚನೆಯಿಂದ ವಿಭಜಿತಗೊಳ್ಳುವ ಪ್ರದೇಶದಿಂದ ಹಾಗೂ ಹೊಸ 2 ವಾರ್ಡ್‌ ನಿಂದ ಯಾವ ಪಕ್ಷಕ್ಕೆ ಲಾಭ ಆಗಬಹುದು ಎಂಬ ಲೆಕ್ಕಾಚಾರ ಆರಂಭಗೊಂಡಿದೆ.

ಈಡೇರದ ಬೇಡಿಕೆ 
ನಗರ ಪಂಚಾಯತ್‌ ಪುರಸಭೆಯಾಗಿ ಮೇಲ್ದರ್ಜೆಗೆ ಏರುವ ಅರ್ಹತೆ ಹೊಂದಿದ್ದರೂ, ಅದಕ್ಕೆ ಬೇಕಾದ ಒತ್ತಡಗಳು ವ್ಯಕ್ತವಾಗದ ಹಿನ್ನೆಲೆಯಲ್ಲಿ ಈ ಬಾರಿಯೂ ನಗರ ಪಂಚಾಯತ್‌ ಆಡಳಿತಕ್ಕೆ ಚುನಾವಣೆ ನಡೆಯಲಿದೆ. ಚುನಾವಣೆ ಪ್ರಕ್ರಿಯೆ ಮುಗಿದು, ಹೊಸ ಆಡಳಿತ ಬಂದ ಮೇಲೆ, ಪುರಸಭೆಯಾಗಿ ಮೇಲ್ದರ್ಜೆಗೇರಿದರೆ, ಆಗ ಹಾಲಿ ಜನಪ್ರತಿನಿಧಿಗಳು, ಆಡಳಿತ ವ್ಯವಸ್ಥೆ ತಾನಾಗಿಯೇ ಪುರಸಭೆಯ ವ್ಯಾಪ್ತಿಗೆ ಮುಂಭಡ್ತಿಗೊಳ್ಳಲಿದೆ. ಈ ಹಿಂದೆ ಪುತ್ತೂರು ಪುರಸಭೆ ಆಗಿದ್ದ ಸಂದರ್ಭದಲ್ಲಿ ನಗರಸಭೆಯಾಗಿ ಮೇಲ್ದರ್ಜೆಗೆ ಏರಿಕೆ ಆದಾಗಲೂ ಇದೇ ತೆರನಾಗಿತ್ತು.

ಆದೇಶ ಬಂದಿಲ್ಲ
ಚುನಾವಣೆಗೆ ಕಾಲಾವಧಿ ಇರುವುದರಿಂದ ಯಾವುದೇ ಆದೇಶಗಳು ಬಂದಿಲ್ಲ. ಆಯೋಗದ ಅಧಿಕೃತ ಸುತ್ತೋಲೆ ಬಂದ ಅನಂತರ ಪ್ರಕ್ರಿಯೆಗಳು ಆರಂಭಗೊಳ್ಳಲಿದೆ. 
– ಕುಂಞಮ್ಮ ತಹಶೀಲ್ದಾರ್‌, ಸುಳ್ಯ

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.