ಹಾಡಹಗಲೇ ಆನೆ ಪ್ರತ್ಯಕ್ಷ
Team Udayavani, Jul 22, 2017, 7:35 AM IST
ಸುಳ್ಯ: ತಾಲೂಕಿನ ಆಲೆಟ್ಟಿ ಗ್ರಾಮದ ಕೋಲ್ಚಾರುನಲ್ಲಿ ಹಾಡಹಗಲೇ ಒಂಟಿ ಸಲಗವೊಂದು ಕಾಣಿಸಿಕೊಂಡಿದ್ದು ಮಸೀದಿಗೆ ತೆರಳಿ ಹಿಂದಿರುಗುತ್ತಿದ್ದ ಮಕ್ಕಳು ಗಾಬರಿಗೊಂಡು ದಿಕ್ಕಾಪಾಲಾದ ಘಟನೆ ಶುಕ್ರವಾರ ನಡೆದಿದೆ.
ಮಕ್ಕಳು ಮಸೀದಿಯಲ್ಲಿ ಮಧ್ಯಾಹ್ನದ ಪ್ರಾರ್ಥನೆ ಮುಗಿಸಿ ಹಿಂದಿರುಗು ತ್ತಿದ್ದರು. ಈ ವೇಳೆ ಕೋಲ್ಚಾರಿನ ಮುಡಂಗೋಳಿ ಸಮೀಪ ಕಾಡಿನಿಂದಿಳಿಯುತ್ತಿದ್ದ ಆನೆಯೊಂದು ಕಾಣಿಸಿಕೊಂಡಿತು. ಗಾಬರಿಗೊಂಡ ಮಕ್ಕಳು ದಿಕ್ಕಾಪಾಲಾಗಿ ಓಡತೊಡಗಿದರೆನ್ನಲಾಗಿದೆ. ಬಳಿಕ ಆಗಮಿಸಿದ ಅರಣ್ಯ ಇಲಾಖೆ ಹಾಗೂ ಊರವರು ಆನೆಯನ್ನು ಕಾಡಿಗಟ್ಟಿದ್ದರು ಎಂದು ತಿಳಿದುಬಂದಿದೆ.
ಕೆಲವು ದಿನಗಳಿಂದ ಆನೆ ಹಿಂಡೊಂದು ಕೋಲ್ಚಾರು ಭಾಗದ ಪೈಂಬೆಚ್ಚಾಲ್, ಮಾಣಿಮರ್ದು, ಕೊçಂಗಾಜೆ ಮೊದಲಾದ ಪರಿಸರದಲ್ಲಿ ಆಗಾಗ್ಗೆ ಕಾಣಿಸಿಕೊಂಡು ಕೃಷಿ ತೋಟಕ್ಕೆ ದಾಳಿಯಿಡುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ