ಸುಳ್ಯ ತಾ.ಪಂ. ಸಾಮಾನ್ಯ ಸಭೆ : ರಸ್ತೆ ಅತಿಕ್ರಮಣ :ವರದಿಗೆ ನಿರ್ಧಾರ


Team Udayavani, Jul 11, 2017, 2:20 AM IST

1007BK1a.jpg

ಸುಳ್ಯ : ತಾಲೂಕಿನಲ್ಲಿರುವ ಜಿ.ಪಂ. ಹಾಗೂ ಲೋಕೋಪಯೋಗಿ ಇಲಾಖೆ ರಸ್ತೆಗಳ ಅತಿಕ್ರಮಣ ತಡೆೆ, ಕೃಷಿ ಇಲಾಖೆ ಸಹಾಯಧನವೂ ಸೇರಿದಂತೆ ಪ್ರಮುಖವಿಷಯಗಳ ಕುರಿತು ತಾಲೂಕು ಪಂಚಾಯತ್‌ ಸಾಮಾನ್ಯ ಸಭೆಯಲ್ಲಿ ಸುದೀರ್ಘ‌ ಚರ್ಚೆ ನಡೆಯಿತು.

ತಾಲೂಕು ಪಂಚಾಯತ್‌  ಸಭಾಂಗಣದಲ್ಲಿ ಸೋಮ ವಾರ ಅಧ್ಯಕ್ಷ ಚನಿಯ ಕಲ್ತಡ್ಕ ಅಧ್ಯಕ್ಷತೆಯಲ್ಲಿ ಸಭೆ ಜರಗಿತು. ರಸ್ತೆ ಅತಿಕ್ರಮಣ ಮತ್ತು ರಸ್ತೆಯಂಚಿನಲ್ಲಿರುವ ಕಟ್ಟಡಗಳ ತೆರವಿಗೆ ಹಿಂದಿನ ಸಭೆ ಕೈಗೊಂಡ ನಿರ್ಣಯದ ಕುರಿತಾಗಿ ಅಜ್ಜಾವರದ ರಸ್ತೆ ಬದಿಯ ಕಟ್ಟಡವನ್ನು ಪ್ರಸ್ತಾಪಿಸಿ ಜಿ.ಪಂ.ಇಂಜಿನಿಯರ್‌ ಪ್ರೀತಿ ಅವರಲ್ಲಿ ಮಾಹಿತಿ ಬಯಸಿದರು. ಈ ಬಗ್ಗೆ ಅಧಿಕಾರಿಯವರು, ಎಲ್ಲಾ ಪಂಚಾಯತ್‌ಗಳಿಗೂ ನೊಟೀಸ್‌ ಕಳುಹಿಸಲಾಗಿದೆ ಎಂದು ಚುಟುಕಾಗಿ ಉತ್ತರಿಸಿದರು. ಇದರಿಂದ ಸದಸ್ಯರು ಸಮಾಧಾನವಾಗಲಿಲ್ಲ.

ತಾಲೂಕು ಕಾರ್ಯನಿರ್ವಹಣಾ ಧಿಕಾರಿ ಮಧುಕುಮಾರ್‌ ಅವರು, ರಸ್ತೆಯಂಚಿನಲ್ಲಿ ಕಟ್ಟಡಗಳು ನಿರ್ಮಾಣವಾಗುವಾಗ ತಡೆಯಲು ಅಥವಾ ಪೂರ್ತಿ ಕೆಡವಲು ನಿಮ್ಮ ಇಲಾಖೆಯಿಂದ ಯಾವ್ಯಾವ ಕ್ರಮ ಕೈಗೊಳ್ಳಬಹುದು ಹಾಗೂ ನೊಟೀಸ್‌ ಕೊಡುವ ಮತ್ತು ಕೆಡವುವ ಅಧಿಕಾರ ಗ್ರಾ.ಪಂ. ಅಥವಾ ಜಿ.ಪಂ.ಗೆ ಇದೆಯೇ ಎಂದು ಪ್ರಶ್ನಿಸಿದರು. ಆದರೆ ಇದಕ್ಕೆ ಎಂಜಿನಿಯರ್‌ ರಿಂದ ಸೂಕ್ತ ಉತ್ತರ ಸಿಗಲಿಲ್ಲ. ಈ ಬಗ್ಗೆ ಮತ್ತೂಮ್ಮೆ ನಿರ್ಣಯ ಕೈಗೊಳ್ಳುವಂತೆ ಅಧ್ಯಕ್ಷರ ಸಹಿತ ಕೆಲವು ಸದಸ್ಯರು ಸಲಹೆ ನೀಡಿದರು.

ಸ್ಥಾಯಿ ಸಮಿತಿ ಅಧ್ಯಕ್ಷ ಆಕ್ರೋಶ
 ಈ ಸಂದರ್ಭ ಸ್ವಲ್ಪ ಗರಂ ಆದ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿ.ಪಂ., ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳ ಸಹಿತ ತರಾಟೆಗೆ ತೆಗೆದುಕೊಂಡರು. 

ಇಲ್ಲಿ ಪ್ರತೀ ಬಾರಿ ಆಗುವ ನಿರ್ಣಯಗಳಿಗೆ ಬೆಲೆ ಇಲ್ಲ. ಸಭೆ ಕೇವಲ ಕಾಲಹರಣವಷ್ಟೇ. ಇದೇ ಕಾರಣಕ್ಕೆ ಸಭೆಯಲ್ಲಿ ಮಾತ ನಾಡುವುದಿಲ್ಲವೆಂದಿದ್ದರೂ ಮಾತ ನಾಡ ಬೇಕಾದ ಒತ್ತಡವುಂಟಾಗಿದೆ. ಆಯಾಯ ಅಧಿಕಾರಿಗಳಿಗೆ ತಮ್ಮ ಕಾರ್ಯ ವ್ಯಾಪ್ತಿಯ ಬಗ್ಗೆ ಅರಿ ವಿರ ಬೇಕು. ನಿಮ್ಮ ವ್ಯಾಪ್ತಿಗೊಳಪಟ್ಟ ರಸ್ತೆಗಳ ಬಗ್ಗೆ ಗಮನಿಸುವುದಿಲ್ಲ. 

ಈ ಬಗ್ಗೆ ಅಧ್ಯಕ್ಷರೂ ಸ‌ಮರ್ಥವಾಗಿ ಮಾತನಾಡುವ ಅಗತ್ಯ ವಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಇಚ್ಛಾಶಕ್ತಿಯನ್ನು ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ಮಾತನಾಡಿದ ಜಿಲ್ಲಾ ಪಂಚಾಯತ್‌ ಸದಸ್ಯ ಹರೀಶ್‌ ಕಂಜಿಪಿಲಿ, ಅಧಿಕಾರಿಗಳು ಮಾತ್ರವಲ್ಲ. ಜನ ಪ್ರತಿನಿಧಿಗಳಿಂದಲೂ ಲೋಪವುಂಟಾ ಗುತ್ತಿದೆ. ಹಲವು ಬಾರಿ ರಸ್ತೆಯಂಚಿನಲ್ಲಿ ಕಟ್ಟಡಕ್ಕೆ ಅನುಮತಿ ಪಡೆಯಲು ನಮ್ಮ ಮೇಲೂ ಸಾಕಷ್ಟು ಒತ್ತಡ ಬರುತ್ತಿದೆ. ನ್ಯಾಯಾಲಯದ ತೀರ್ಪನ್ನೂ ಉಲ್ಲಂ ಸುವ ಪ್ರಕರಣ ಗಳಾಗುತ್ತವೆ ಎಂದರು.

ಅಂತಿಮವಾಗಿ ಕಾರ್ಯನಿರ್ವಹಣಾ ಧಿಕಾರಿಯವರು, ಈ ಬಗ್ಗೆ ಪ್ರತೀ ಪಂಚಾಯತ್‌ನಲ್ಲಿ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ವರದಿ ತರಿಸಿಕೊಳ್ಳುವಂತೆ ನೀಡಿದ ಸಲಹೆಗೆ ಅಧ್ಯಕ್ಷರು ಒಪ್ಪಿಗೆ ಸೂಚಿಸಿದರು.

ಸಹಾಯಧನ -ಅಕ್ರಮ ಶಂಕೆ
ಸದಸ್ಯ ಅಬ್ದುಲ್‌ ಗಫ‌ೂರ್‌ ಅವರು, ಪರಿಶಿಷ್ಠ ಜಾತಿಯ ರೈತಸದಸ್ಯರೋರ್ವರು ಇಲಾಖೆಯಿಂದ ಪಡೆದ ಕೃಷಿಯಂತ್ರೋಪಕರಣ ಖರೀದಿ ವೇಳೆ ಬಿಲ್‌ ನೀಡದ ಬಗ್ಗೆ ಪ್ರಸ್ತಾಪಿಸಿ ದೊಡ್ಡ ಅಕ್ರಮದ ಶಂಕೆ ವ್ಯಕ್ತಪಡಿಸಿದರು. ಈ ಬಗ್ಗೆಯೂ ವ್ಯಾಪಕ ಚರ್ಚೆ ನಡೆಯಿತು. ಇಲಾಖೆಯಲ್ಲಿ ರೈತರಿಗೆ ಶೇ.90 ರಷ್ಟು ಸಹಾಯಧನದಡಿ ನೀಡಬೇಕಿದ್ದರೂ ಅದರಂತೆ ಕೊಟ್ಟಿಲ್ಲ. ಮಾರುಕಟ್ಟೆಯಲ್ಲಿ ಅದಕ್ಕಿಂತ ಕಡಿಮೆ ದರದಲ್ಲಿ ಲಭ್ಯವಿದೆ. ಇದರಿಂದ ರೈತ ಸದಸ್ಯರಿಗೆ ಅನ್ಯಾಯವಾಗಿದೆ ಎಂದು ಹೇಳಿದ ಅಬ್ದುಲ್‌ ಗಫ‌ೂರ್‌, ಖರೀದಿ ವೇಳೆ ಬಿಲ್‌ ನೀಡದ ಏಜೆನ್ಸಿಯನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಆಗ್ರಹಿಸಿದರು. ಹರೀಶ್‌ ಕಂಜಿಪಿಲಿ, ಅಶೋಕ್‌ ನೆಕ್ರಾಜೆ, ಉದಯ್‌ಕೊಪ್ಪಡ್ಕ ಚರ್ಚೆಯಲ್ಲಿ ಪಾಲ್ಗೊಂಡರು.

ಸಂಬಂಧಿತ ಅಧಿಕಾರಿಯು, ಮಾರ್ಗ ಸೂಚಿ ಪ್ರಕಾರ ನೀಡಿದ್ದೇವೆ ಎಂದರು. ಈ ಬಗ್ಗೆ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ತನಿಖೆ ನಡೆಸಿ ತಪ್ಪು ಕಂಡುಬಂದರೆ ಯಂತ್ರ ನೀಡಿದ ಏಜೆನ್ಸಿಯನ್ನು ಕಪ್ಪುಪಟ್ಟಿಗೆ ಸೇರಿಸುವುದು, ಜಿ.ಪಂ.ಗೆ ನಿರ್ಣಯ ಕಳುಹಿಸಿ ಅಲ್ಲಿಯೂ ರೈತರಿಗಾಗುವ ಅನ್ಯಾಯದ ಬಗ್ಗೆ ಚರ್ಚೆ ನಡೆಸುವುದು ಹಾಗೂ ತೋಟಗಾರಿಕಾ ಇಲಾಖೆಯಲ್ಲಿ ಸಹಾಯಧನ ನೀಡುವ ಕ್ರಮಗಳಂತೆ ಕೃಷಿ ಇಲಾಖೆಯಲ್ಲೂ ನೀಡಲು ಕ್ರಮ ಜರುಗಿಸುವ ಕುರಿತು ಸಂಬಂಧಪಟ್ಟ ಇಲಾಖೆ ಗಮನಕ್ಕೆ ತರಲು ನಿರ್ಣಯಿಸಲಾಯಿತು.

ಗ್ರಾ.ಪಂ. ಅಧ್ಯಕ್ಷರ ದೂರು
ಸಭೆಯಲ್ಲಿ ಭಾಗವಹಿಸಿದ್ದ ದೇವಚಳ್ಳ ಗ್ರಾ.ಪಂ. ಅಧ್ಯಕ್ಷ ದಿವಾಕರ್‌ ಮುಂಡೋಡಿ, ಪಿಎಂಜಿಎಸ್‌ವೈ ಯೋಜನೆಯಡಿ ಡಾಮರೀಕರಣಗೊಂಡ ಮಾವಿನಕಟ್ಟೆ-ದೇವ ರಸ್ತೆ¤ಯ ದುರಸ್ತಿಗೆ ಸಂಬಂಧಿತ ಅಧಿಕಾರಿಗಳು ಕಾಳಜಿ ವಹಿಸುತ್ತಿಲ್ಲ, ಚರಂಡಿ ಕಾಮಗಾರಿಯನ್ನ ಕೈಗೊಂಡಿಲ್ಲ ಎಂದು ದೂರಿದರು. ಮರ್ಕಂಜ ಗ್ರಾ.ಪಂ. ಅಧ್ಯಕ್ಷ  ಪಂಚಾಯತ್‌ನಲ್ಲಿ ಗ್ರಾಮಲೆಕ್ಕಿಗರು ಸರಿಯಾಗಿ ಕಚೇರಿಗೆ ಹಾಜರಾಗದಿರುವುದರಿಂದ ಸಾರ್ವಜನಿಕರಿಗ ತೊಂದರೆಯಾಗುತ್ತಿದೆ ಎಂದು ದೂರಿದರು. ಕಳಂಜ, ಅಮರಪಟ್ನೂರು ಪಂಚಾಯತ್‌ ಅಧ್ಯಕ್ಷರುಗಳೂ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.