ಸುಳ್ಯ ನ.ಪಂ.: ಎರಡು ವಾರ್ಡ್‌ ಹೆಚ್ಚಳವಾಗಿ ಪುರಸಭೆಯಾಗಲಿದೆಯೇ?


Team Udayavani, Jul 1, 2017, 3:50 AM IST

Sullya-Panchayath-30-6.jpg

ಸುಳ್ಯ: ರಾಜ್ಯ ಸರಕಾರವು ಸ್ಥಳೀಯಾಡಳಿತ ಸಂಸ್ಥೆಗಳ ವಾರ್ಡ್‌ಗಳ ಪುನಃ ವಿಂಗಡಣೆ ಮಾಡಲು ನಿರ್ಧರಿಸಿದ್ದು, ಅದರಂತೆ ಸುಳ್ಯ ನ.ಪಂ.ನಲ್ಲಿ 2 ವಾರ್ಡ್‌ಗಳು ಹೆಚ್ಚಳವಾಗುವ ಸಾಧ್ಯತೆ ಇದೆ. ಇದುವರೆಗೆ ಇದ್ದ 18 ವಾರ್ಡ್‌ ಗಳ ಸಂಖ್ಯೆ 20ಕ್ಕೇರಲಿದೆ. ಪ್ರಸ್ತುತ ದುಗಲಡ್ಕ, ಕೊಯಿಕುಳಿ, ಜಯನಗರ, ಶಾಂತಿನಗರ, ಹಳೆಗೇಟು, ಬೀರಮಂಗಲ, ರಥಬೀದಿ (ಬಿಡಿಒ), ಅಂಬಟೆಡ್ಕ, ಕೇರ್ಪಳ, ಕುರುಂಜಿಗುಡ್ಡೆ, ಭಸ್ಮಡ್ಕ, ಕೆರೆಮೂಲೆ, ಬೂಡು, ಕಲ್ಲುಮುಟ್ಲು, ನಾವೂರು, ಕಾಯರ್ತೋಡಿ, ಬೋರು ಗುಡ್ಡೆ, ಜಟ್ಟಿಪಳ್ಳ ಹೀಗೆ 18 ವಾರ್ಡ್‌ಗಳಿದ್ದು,ಇದೀಗ ಜಯ ನಗರ ಹಳೆಗೇಟು ವ್ಯಾಪ್ತಿಯಲ್ಲಿ 19ನೇ ಮತ್ತು ಮೊಗರ್ಪಣೆ ಕೊಡಿಯಾಲಬೈಲು ರಸ್ತೆ ಬ್ರಹ್ಮನಗರದ ವ್ಯಾಪ್ತಿಯಲ್ಲಿ 20ನೇ ವಾರ್ಡ್‌ ರಚನೆಯಾಗಲಿದೆ.

ಪುರಸಭೆಯಾಗಲಿದೆಯೇ?
ಸುಳ್ಯ ನ.ಪಂ.ನ ಜನಸಂಖ್ಯೆ 2011ರ ಜನಗಣತಿ ಪ್ರಕಾರ 19,958 ಆಗಿದ್ದು, ಇದು ಪುರಸಭೆಯನ್ನಾಗಿ ಮಾಡಲು ಅಡ್ಡಿಯಾಗಿತ್ತು. ಪುರಸಭೆ ಮಾಡಲು 20,000ಕ್ಕಿಂತ ಹೆಚ್ಚು ಜನಸಂಖ್ಯೆ ಅಗತ್ಯ ವಿದೆ. ಹಾಗಾಗಿ ಸಮೀಪದ ಆಲೆಟ್ಟಿ ಗ್ರಾಮದ ಅರಂಬೂರು ಹಾಗೂ ಜಾಲ್ಸೂರು ಗ್ರಾಮದ ಕುಕ್ಕಂದೂರನ್ನು ನಗರ ವ್ಯಾಪ್ತಿಗೆ ಸೇರಿಸಿ ಇದನ್ನು ಪುರಸಭೆಯನ್ನಾಗಿ ಮಾಡಲು ಈ ಹಿಂದೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಬಗ್ಗೆ ರಾಜ್ಯ ಸರಕಾರ ಪರಿಶೀಲನೆ ನಡೆಸಿದ್ದು, ಮುಂದಿನ ವರ್ಷ ಸುಳ್ಯವನ್ನು ಪುರಸಭೆ ಎಂದು ಘೋಷಿಸುವ ಸಾಧ್ಯತೆಯೂ ಇದೆ. 2018 ಮಾರ್ಚ್‌ನಲ್ಲಿ ಈಗಿನ ನ.ಪಂ.ಆಡಳಿತದ ಅವಧಿ ಮುಗಿಯಲಿದ್ದು, ಆ ವೇಳೆಗೆ ಸುಳ್ಯ ಪುರಸಭೆಯಾಗಲಿದೆಯೇ ಅಥವಾ 20 ವಾರ್ಡ್‌ಗಳ ನ.ಪಂ. ಆಗಿಯೇ ಮುಂದುವರಿಯಲಿದೆಯೇ ಎನ್ನುವುದು ರಾಜ್ಯ ಸರಕಾರ ನಿರ್ಧಾರದ ಮೇಲಿದೆ. ಪುರಸಭೆಯಾದರೆ ಸುಳ್ಯಕ್ಕೆ ಹೆಚ್ಚಿನ ಅನುದಾನ ಸಿಗಲಿದೆ.

ಮತ್ತೆ ನಿರ್ಣಯ
ಪುರಸಭೆ ಮಾಡಲು ಹಿಂದೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಸರಕಾರವು ಪರಿಶೀಲನೆ ನಡೆಸಿತ್ತು. ಆ ಬಳಿಕ ಪ್ರಕ್ರಿಯೆ ಮುಂದುವರಿಯದ ಕಾರಣ ಜುಲೈ ತಿಂಗಳಲ್ಲಿ ವಿಶೇಷ ಸಭೆ ನಡೆಸಿ ನ.ಪಂ.ನ್ನು ಪುರಸಭೆಯನ್ನಾಗಿ ಮಾಡಬೇಕೆಂದು ಒತ್ತಾಯಿಸುವ ನಿರ್ಣಯ ಕೈಗೊಳ್ಳಲಿದ್ದೇವೆ. ನ.ಪಂ.ವ್ಯಾಪ್ತಿಗೆ ಸೇರಿಸುವ ಹತ್ತಿರದ ಯಾವ ಊರು ಸೂಕ್ತ ಎನ್ನುವ ಬಗ್ಗೆ ಸರ್ವೆ ನಡೆಸಬೇಕಾಗಿದೆ.
– ಶೀಲಾವತಿ ಮಾಧವ, ಅಧ್ಯಕ್ಷೆ , ನಗರ ಪಂಚಾಯತ್‌ ಸುಳ್ಯ

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.