ರಸ್ತೆ ಹೊಂಡ ಮುಚ್ಚಿದ ಸುಳ್ಯ ಎಸ್.ಐ.!
Team Udayavani, Aug 9, 2018, 4:05 AM IST
ಸುಳ್ಯ: ಲಾಠಿ ಹಿಡಿಯುವ ಕೈ ಹಾರೆ ಹಿಡಿದು ರಸ್ತೆ ಹೊಂಡ ಮುಚ್ಚಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿರುವ ಅಪರೂಪದ ಘಟನೆ ಸುಳ್ಯದಲ್ಲಿ ನಡೆದಿದೆ. ಮಾಣಿ-ಮೈಸೂರು ರಸ್ತೆಯ ಪೆರಾಜೆ ಬಳಿ ಸುಳ್ಯ ಠಾಣಾ ಎಸ್.ಐ. ಮಂಜುನಾಥ ಅವರು ಹೊಂಡ ಮುಚ್ಚುವ ಕೆಲಸಕ್ಕೆ ಸಾಮಗ್ರಿಕೊಂಡು ಹೋಗಿ, ಸ್ವತಃ ಹಾರೆ ಹಿಡಿದುಹೊಂಡ ಮುಚ್ಚಿದ್ದಾರೆ. ಅವರು ಕೆಲಸ ಮಾಡುತ್ತಿರುವ ದೃಶ್ಯವನ್ನು ಸಾರ್ವಜನಿಕರು ಸೆರೆ ಹಿಡಿದಿದ್ದು, ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಕಳೆದ ಹಲವು ದಿನಗಳಿಂದ ಮಾಣಿ-ಮೈಸೂರು ಹೆದ್ದಾರಿಯ ಪೆರಾಜೆಯಲ್ಲಿ ರಸ್ತೆ ಮಧ್ಯ ಭಾಗದಲ್ಲಿ ಹೊಂಡವೊಂದು ವಾಹನ ಸಂಚಾರಕ್ಕೆ ಅಪಾಯಕಾರಿ ಆಗಿ ಪರಿಣಮಿಸಿತ್ತು. ಪ್ರಯಾಣಿಕರು ಈ ಬಗ್ಗೆ ಅಳಲು ತೋಡಿಕೊಂಡಿದ್ದರು.
ಸ್ವತಃ ದುರಸ್ತಿಗೆ ಮುಂದಾದರು: ವಾಹನ ಸವಾರರಿಗೆ ತೊಂದರೆ ಆಗುತ್ತಿರುವ ಬಗ್ಗೆ ಮಾಹಿತಿ ಪಡೆದ ಎಸ್.ಐ. ಮಂಜುನಾಥ ಅವರು ಹೊಂಡ ಮುಚ್ಚಲು ಬೇಕಾದ ಸಿಮೆಂಟ್, ಇತರ ಸಾಮಗ್ರಿ, ಹಾರೆ, ಪಿಕ್ಕಾಸು ಹಿಡಿದುಕೊಂಡು ಸ್ಥಳಕ್ಕೆ ತೆರಳಿದರು. ಪೊಲೀಸ್ ಜೀಪು ಚಾಲಕರ ಜತೆಗೂಡಿ ರಸ್ತೆ ಬದಿಯಲ್ಲಿ ಸ್ವತಃ ಹಾರೆ ಹಿಡಿದು ಹೊಂಡ ಮುಚ್ಚುವ ಕೆಲಸ ನಿರ್ವಹಿಸಿದ ಎಸ್.ಐ. ಅವರನ್ನು ಕಂಡು ಸಾರ್ವಜನಿಕರು ನಿಬ್ಬೆರೆಗಾದರು. ಒಂದಿಬ್ಬರು ಅವರಿಗೆ ಸಾಥ್ ನೀಡಿದರು. ಎಸ್.ಐ. ಅವರ ಸಾಮಾಜಿಕ ಸ್ಪಂದನೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ