ತಹಶೀಲ್ದಾರ್ ಕುಂಞಿ ಅಹಮ್ಮದ್ ಐದೇ ತಿಂಗಳಲ್ಲಿ ವರ್ಗಾವಣೆ
Team Udayavani, Jul 21, 2019, 5:12 AM IST
ಸುಳ್ಯ : ಸುಳ್ಯ ತಹಶೀಲ್ದಾರ್ ಎನ್.ಎ. ಕುಂಞಿ ಅಹಮ್ಮದ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ವರ್ಗಾಯಿಸಿ ಆದೇಶ ನೀಡಲಾಗಿದೆ.
2019 ಫೆಬ್ರವರಿಯಲ್ಲಿ ಸುಳ್ಯಕ್ಕೆ ತಹಶೀಲ್ದಾರ್ ಆಗಿ ಕರ್ತವ್ಯಕ್ಕೆ ಹಾಜರಾಗಿದ್ದರು. ಐದೇ ತಿಂಗಳಲ್ಲಿ ವರ್ಗಾವಣೆಗೊಂಡಿದ್ದಾರೆ. ತನ್ನ ಕಾರ್ಯ ವೈಖರಿಯಿಂದ ಜನಮನ್ನಣೆಗೆ ಪಾತ್ರರಾಗಿದ್ದ ಕುಂಞಿ ಅಹಮ್ಮದ್ ಅವರ ದಿಢೀರ್ ವರ್ಗಾವಣೆ ಕುರಿತಂತೆ ವ್ಯಾಪಕ ಅಸಮಾಧಾನಕ್ಕೂ ಕಾರಣವಾಗಿದೆ.
ಜನಪರ ಮತ್ತು ಜನಸ್ನೇಹಿ ಅಧಿಕಾರಿ ಆಗಿ ಸಾರ್ವಜನಿಕರ ದೂರಿಗೆ ತಕ್ಷಣ ಸ್ಪಂದಿಸುವ ಅವರ ನಡವಳಿಕೆ ಅಪಾರ ಮೆಚ್ಚುಗೆಗೆ ಪಾತ್ರವಾಗಿತ್ತು. ಕಳೆದ ಐದು ತಿಂಗಳಲ್ಲಿ ಅನೇಕ ಸಮಸ್ಯೆಗಳಿಗೆ ಅವರು ಪರಿಹಾರ ಒದಗಿಸಿದ್ದರು. ಸ್ವಚ್ಛ ಸುಳ್ಯಕ್ಕಾಗಿ ಪ್ರತಿ ವಾರ ಸ್ವಚ್ಛತಾ ಕಾರ್ಯದಲ್ಲಿ ಖುದ್ದು ತೊಡಗಿಸಿಕೊಂಡಿದ್ದರು. ಹೀಗಾಗಿ ವರ್ಷ ತುಂಬುವ ಮೊದಲೇ ವರ್ಗಾಯಿಸಿ ರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿಯೂ ತಹಶೀಲ್ದಾರ್ ಅವರನ್ನು ಸುಳ್ಯದಲ್ಲೇ ಉಳಿಸುವಂತೆ ಸಂದೇಶ ಹರಿದಾಡುತ್ತಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
MUST WATCH
ಹೊಸ ಸೇರ್ಪಡೆ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
IPL;ಮುಂಬೈ ಇಂಡಿಯನ್ಸ್ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ