ಗರಿಷ್ಠ ಫ‌ಲಿತಾಂಶ ಬರುವ ಶಾಲೆಯಲ್ಲಿ ಶೆಡ್‌ನ‌ಲ್ಲೆ ಶಿಕ್ಷಣ!


Team Udayavani, Mar 7, 2019, 5:04 AM IST

7-mach-2.jpg

ಸುಳ್ಯ : ತಾಲೂಕಿನಲ್ಲೇ ಗರಿಷ್ಠ ಫಲಿತಾಂಶ ದಾಖಲಿಸುವ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ 10 ತರಗತಿ ಕೊಠಡಿಗಳಿಗೆ ತಾತ್ಕಾಲಿಕ ಶೆಡ್‌ನಿಂದ ಮುಕ್ತಿ ಸಿಕ್ಕಿಲ್ಲ. ಎಸೆಸೆಲ್ಸಿ ಮಕ್ಕಳು ಶೆಡ್‌ನ‌ಲ್ಲೇ ಶಿಕ್ಷಣ ಪಡೆಯುತ್ತಿದ್ದಾರೆ.

ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಈ ವಿದ್ಯಾಸಂಸ್ಥೆ ಸುಳ್ಯ ನಗರದಿಂದ 2 ಕಿ.ಮೀ. ದೂರದ ಕೊಡಿಯಾಲಬೈಲಿನಲ್ಲಿ ಇದೆ. ಸಂಪರ್ಕ ರಸ್ತೆ, ಕುಡಿಯುವ ನೀರಿನ ಸೌಲಭ್ಯ, ಕಟ್ಟಡದ ವ್ಯವಸ್ಥೆ ಒದಗಿಸಿದರೆ ಈ ಸಂಸ್ಥೆ ಮಂಗಳೂರು ವಿ.ವಿ. ಮಟ್ಟದಲ್ಲಿ ಉತ್ತಮ ಸಾಧನೆ ತೋರುವ ಅವಕಾಶವಿದೆ.

ಮೂರು ಜಿಲ್ಲೆಗಳ ವಿದ್ಯಾರ್ಥಿಗಳು ಸರಕಾರಿ ವಿದ್ಯಾಸಂಸ್ಥೆಗಳಿಗೆ ವಿದ್ಯಾರ್ಥಿಗಳು ಬರುತ್ತಿಲ್ಲ ಎನ್ನುವ ಆಪಾದನೆಗೆ ತದ್ವಿರುದ್ಧ ಎನ್ನುವಂತೆ ಇಲ್ಲಿನ ಚಿತ್ರಣವಿದೆ. ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ದಾಖಲಾತಿ ಸಂಖ್ಯೆ ಹೆಚ್ಚಾಗುತ್ತಿದೆ. ಬಿಎ, ಬಿಬಿಎ, ಬಿಕಾಂ, ಬಿಎಸ್ಸಿ ತರಗತಿಗಳಿವೆ. ಕೆಲವೊಂದರಲ್ಲಿ ಎ, ಬಿ ಸೆಕ್ಷನ್‌ಗಳಿವೆ. ಪ್ರತಿ ತರಗತಿಯಲ್ಲಿ 60ಕ್ಕಿಂತ ಅಧಿಕ ವಿದ್ಯಾರ್ಥಿಗಳಿದ್ದಾರೆ. ಕಾಸರಗೋಡು, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಾರೆ. ಪ್ರಸ್ತುತ 722 ವಿದ್ಯಾರ್ಥಿಗಳಿದ್ದಾರೆ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಯಲ್ಲಿ ಈ ಸಂಸ್ಥೆ ಮಂಗಳೂರು ವಿ.ವಿ. ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡುತ್ತಿದೆ. 

ಹನ್ನೊಂದರ ಹೊತ್ತು
ಸುಳ್ಯಕ್ಕೆ 2007ರಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಜೂರಾಗಿತ್ತು. ಶಾಸಕ ಎಸ್‌.ಅಂಗಾರ ಅವರು ಅಂದಿನ ಉನ್ನತ ಶಿಕ್ಷಣ ಸಚಿವ ಡಿ.ಎಚ್‌. ಶಂಕರಮೂರ್ತಿ ಅವರ ಮೇಲೆ ಒತ್ತಡ ಹೇರಿ ಮಂಜೂರು ಮಾಡಿಸಿದ್ದರು. ಪ್ರಥಮವಾಗಿ ಸುಳ್ಯದ ಜ್ಯೋತಿ ವೃತ್ತದ ಬಳಿಯ ಅಮೃತ ಭವನದಲ್ಲಿ ಕಾಲೇಜು ಆರಂಭಗೊಂಡಿತು. 6 ವರ್ಷಗಳ ಅನಂತರ 2013ರಲ್ಲಿ ಕೊಡಿಯಾಲಬೈಲಿನ ಸ್ವಂತ ಕಟ್ಟಡಕ್ಕೆ ವರ್ಗಾವಣೆಗೊಂಡಿತ್ತು.

ಕೊಠಡಿ, ರಸ್ತೆ ಸಮಸ್ಯೆ
ಆರಂಭದಲ್ಲಿ 5 ಕೊಠಡಿಗಳಿದ್ದ ಕಾರಣ, ತಾತ್ಕಾಲಿಕ ತಗಡು ಶೆಡ್‌ ನಿರ್ಮಿಸಿ ಉಳಿದ ತರಗತಿಗಳನ್ನು ನಡೆಸಲಾಯಿತು. 

ಬಳಿಕ ವಿವಿಧ ಹಂತದಲ್ಲಿ ಅಭಿವೃದ್ಧಿಗೊಂಡು ಈಗ 15ಕ್ಕೂ ಅಧಿಕ ಕೊಠಡಿಗಳು ಇವೆ. ಆದರೆ ವಿದ್ಯಾರ್ಥಿಗಳ ಸಂಖ್ಯೆಗೆ ಅದು ಸಾಲುತ್ತಿಲ್ಲ. ಇನ್ನೂ ಕೂಡ 12 ಕೊಠಡಿಗಳ ಆವಶ್ಯಕತೆ ಇದೆ. ಹಾಗಾಗಿ ಮೈದಾನದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ ಶೆಡ್‌ನ‌ಲ್ಲಿಯೇ ಪಾಠ ಹೇಳುವ ಸ್ಥಿತಿ ಶಿಕ್ಷಕರದ್ದು. ಪಾಠ ಕೇಳುವ ಸ್ಥಿತಿ ಮಕ್ಕಳದ್ದು ಆಗಿದೆ. ಮಳೆಗಾಲದಲ್ಲಿ ಇಲ್ಲಿನ ಗೋಳು ಒಂದೆರಡಲ್ಲ. ಇದಕ್ಕಾಗಿ ಶಾಶ್ವತ ಕಟ್ಟಡ ಬೇಕು ಎನ್ನುವುದು ವಿದ್ಯಾರ್ಥಿಗಳ ಬೇಡಿಕೆ. ಜತೆಗೆ ನಗರದಿಂದ ಕಾಲೇಜಿಗೆ ಸಂಪರ್ಕಿಸುವ ಮುಖ್ಯ ರಸ್ತೆ ಹದಗೆಟ್ಟಿದೆ. ಬಸ್‌ ಓಡಾಟವು ಕಡಿಮೆಯಿದ್ದು, ಹೆಚ್ಚುವರಿ ಬಸ್‌ ಓಡಾಟಕ್ಕೆ ಕ್ರಮ ಕೈಗೊಳ್ಳಬೇಕಿದೆ.

ಕಚೇರಿ ಸಿಬಂದಿ ಇಲ್ಲ
ಕಾಲೇಜಿನಲ್ಲಿ ಪ್ರಾಂಶುಪಾಲ ಸಹಿತ 20 ಮಂಜೂರಾತಿ ಉಪನ್ಯಾಸಕ ಹುದ್ದೆಗಳಿವೆ. ಅದರಲ್ಲಿ ನಾಲ್ಕು ಉಪನ್ಯಾಸಕ ಹುದ್ದೆಗಳು ಖಾಲಿ ಇವೆ. 33 ಅತಿಥಿ ಉಪನ್ಯಾಸಕರು ಇದ್ದಾರೆ. ಕನ್ನಡ ವಿಭಾಗದಲ್ಲಿ 3 ಮಂಜೂರಾತಿ ಹುದ್ದೆಯ ಪೈಕಿ ಇಬ್ಬರು ಕರ್ತವ್ಯದಲ್ಲಿದ್ದರು. ತಿಂಗಳ ಹಿಂದೆ ಒಬ್ಬರು ಕೊಪ್ಪಳ ಜಿಲ್ಲೆಯ ಹಿಟ್ನಾಳ ಕಾಲೇಜಿಗೆ ನಿಯೋಜನೆಗೊಂಡಿದ್ದಾರೆ. ಇನ್ನೊಬ್ಬರು ಹೆರಿಗೆ ರಜೆಯಲ್ಲಿ ತೆರಳಿದ್ದಾರೆ. ಕನ್ನಡ ಪಾಠಕ್ಕೆ ಅತಿಥಿ ಉಪನ್ಯಾಸಕರನ್ನೇ ಆಶ್ರಯಿಸಬೇಕಿದೆ. ಇಲ್ಲಿ ಗ್ರಂಥಪಾಲಕರು ಇಲ್ಲ.

ಕಚೇರಿ ಸಿಬಂದಿಯೂ ಇಲ್ಲ. ಕಚೇರಿ ಸೂಪರಿಂಟೆಂಡೆಂಟ್‌, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕ ಹುದ್ದೆ ಖಾಲಿ ಇವೆ. ಕಚೇರಿ ನಿರ್ವಹಣೆ ನೆಲೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಮೂಲಕ ಇಬ್ಬರನ್ನು ನಿಯೋಜಿಸಲಾಗಿದೆ.

ಕಾಡಿದೆ ನೀರಿನ ಸಮಸ್ಯೆ
ಈ ವರ್ಷ ಕುಡಿಯುವ ನೀರಿನ ಸಮಸ್ಯೆ ಕಾಡಿದೆ. ಲಭ್ಯ ಇರುವ ಒಂದು ಕೊಳವೆಬಾವಿಯಲ್ಲಿ 10 ನಿಮಿಷ ಮಾತ್ರ ನೀರು ಸಿಗುತ್ತಿದೆ. 300 ಅಡಿ ಆಳ ಇರುವ ಈ ಕೊಳವೆ ಬಾವಿಯನ್ನು ಇನ್ನಷ್ಟು ಆಳಕ್ಕೆ ಕೊರೆಸಬೇಕು ಅಥವಾ ಹೊಸ ಕೊಳವೆಬಾವಿ ಕೊರೆಯಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಇಲ್ಲಿ ಬಹುವಾಗಿ ಕಾಡಬಹುದು. 

2.65 ಕೋಟಿ ರೂ. ಮಂಜೂರು
ಕಾಲೇಜಿನ ಕಟ್ಟಡ ನಿರ್ಮಾಣಕ್ಕೆ 2.65 ಕೋಟಿ ರೂ. ಮಂಜೂರಾಗಿದೆ. ಅದರಲ್ಲಿ ಕೆಲವು ಕೊಠಡಿಗಳನ್ನು ನಿರ್ಮಿಸಬಹುದು. ನೀರಿನ ಸಮಸ್ಯೆಗೆ ಸಂಬಂಧಿಸಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿರುವ ಶಾಸಕರು ಜಿ.ಪಂ. ಎಂಜಿನಿಯರ್‌ ಅವರಿಗೆ ತತ್‌ಕ್ಷಣ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ.
– ಡಾ| ಅಚ್ಯುತ ಪೂಜಾರಿ
ಪ್ರಾಂಶುಪಾಲರು

ವಿಶೇಷ ವರದಿ

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.