ಕರಾವಳಿ: ಬೇಸಗೆ ಮಳೆ ದಾಖಲೆ


Team Udayavani, May 27, 2022, 6:56 AM IST

ಕರಾವಳಿ: ಬೇಸಗೆ ಮಳೆ ದಾಖಲೆ

ಮಂಗಳೂರು: ಕರಾವಳಿಯಲ್ಲಿ ಈ ಬಾರಿ ಬಿರುಸಿನ ಬೇಸಗೆ ಮಳೆ ಸುರಿದಿದ್ದು, ಕಳೆದ ಕೆಲವು ವರ್ಷಗಳಿಗೆ ಹೋಲಿಸಿದರೆ ದಾಖಲೆ ಮಾಡಿದೆ.

ಕರಾವಳಿ ಭಾಗದಲ್ಲಿ ಜನವರಿಯಿಂದ ಮೇ 21ರ ವರೆಗೆ ವಾಡಿಕೆಯಂತೆ ಸುರಿಯಬೇಕಿದ್ದ ಮಳೆ 96.6 ಮಿ.ಮೀ. ಆದರೆ ಈ ಬಾರಿ 306.3 ಮಿ.ಮೀ. ಮಳೆ ಸುರಿದಿದ್ದು, ಶೇ. 217ರಷ್ಟು ಹೆಚ್ಚಳವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಸುರಿದ ಮಳೆ ಶೇ. 8ರಷ್ಟು ಕಡಿಮೆ. ಆದರೆ ಮುಂಗಾರು ಆರಂಭಕ್ಕೆ ಇನ್ನೂ ಕೆಲವು ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಈ ಬಾರಿ ಬೇಸಗೆ ಮಳೆ ದಾಖಲೆಯಾಗಬಹುದು ಎನ್ನುವ ನಿರೀಕ್ಷೆಯಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ವಾಡಿಕೆಗಿಂತ ಶೇ. 138 ಹೆಚ್ಚಳ, ಬಂಟ್ವಾಳ ಶೇ. 196, ಮಂಗಳೂರು ಶೇ. 76, ಪುತ್ತೂರು ಶೇ. 205, ಸುಳ್ಯ ಶೇ. 251, ಮೂಡುಬಿದಿರೆ ಶೇ. 218, ಕಡಬದಲ್ಲಿ ಶೇ. 151, ಕಾರ್ಕಳದಲ್ಲಿ ಶೇ. 195, ಕುಂದಾಪುರದಲ್ಲಿ ಶೇ. 238, ಉಡುಪಿಯಲ್ಲಿ ಶೇ. 278, ಬೈಂದೂರು ಶೇ. 269, ಬ್ರಹ್ಮಾವರದಲ್ಲಿ ಶೇ. 215, ಕಾಪುವಿನಲ್ಲಿ ಶೇ. 202 ಮತ್ತು ಹೆಬ್ರಿಯಲ್ಲಿ ಶೇ. 212ರಷ್ಟು ಹೆಚ್ಚು ಮಳೆಯಾಗಿದೆ.

ಹವಾಮಾನ ಇಲಾಖೆ ತಜ್ಞರ ಪ್ರಕಾರ ಪೂರ್ವ ಮುಂಗಾರು ಮಳೆ ವಾಡಿಕೆಗಿಂತ ಹೆಚ್ಚು ಸುರಿದರೆ ಮುಂದೆ ಆಗಮಿಸುವ ಮುಂಗಾರು ಮಾರುತದ ಪ್ರಭಾವ ಕಡಿಮೆ ಇರುವ ಸಾಧ್ಯತೆ ಇರುತ್ತದೆ. ಬೇಸಗೆ ಮಳೆ ಕಡಿಮೆಯಾದರೆ ಭೂ ಭಾಗದಲ್ಲಿ ತೇವಾಂಶ ಕಡಿಮೆ ಇದ್ದು, ಆಗ ಉಷ್ಣಾಂಶದಲ್ಲಿ ಏರಿಕೆ ಕಂಡು ವಾತಾವರಣದ ಒತ್ತಡ ಕಡಿಮೆ ಆಗುತ್ತದೆ. ಆಗ ಮುಂಗಾರು ಮಾರುತ ವೇಗ ಪಡೆದುಕೊಳ್ಳುವ ಸಾಧ್ಯತೆ ಇರುತ್ತದೆ. ಆದರೆ ಈ ಬಾರಿ ಮುಂಗಾರು ಆಗಮಿಸಲು ಕೆಲವೇ ದಿನಗಳು ಇರುವಾಗ “ಅಸಾನಿ’ ಚಂಡಮಾರುತ ಪ್ರವೇಶಿಸಿದ್ದು, ಮುಂಗಾರು ಮಾರುತ ತೀವ್ರಗೊಳ್ಳಲು ಕಾರಣವಾಗಬಹುದು. ಹೀಗಾಗಿ ಮೇ 28ರ ಅಂದಾಜಿಗೆ ಕೇರಳ ಕರಾವಳಿಗೆ ಮುಂಗಾರು ಪ್ರವೇಶಿಸುವ ನಿರೀಕ್ಷೆ ಇದ್ದು, ಬಳಿಕ ನಮ್ಮ ಕರಾವಳಿಯನ್ನು ಸ್ಪರ್ಶಿಸುವ ನಿರೀಕ್ಷೆ ಇದೆ.

ರಾಜ್ಯದಲ್ಲೇ ಕರಾವಳಿಯಲ್ಲಿ ಅಧಿಕ ಮಳೆ :

ಕರಾವಳಿ ಭಾಗದಲ್ಲಿ 96.6 ಮಿ.ಮೀ. ವಾಡಿಕೆ ಮಳೆಯಲ್ಲಿ 306.3 ಮಿ.ಮೀ. ಮಳೆಯಾಗಿ ರಾಜ್ಯದಲ್ಲೇ ಅಧಿಕ ಶೇ. 217ರಷ್ಟು ಹೆಚ್ಚು ಮಳೆ ಸುರಿದಿದೆ. ರಾಜ್ಯಕ್ಕೆ ಹೋಲಿಕೆ ಮಾಡಿದರೆ ಬೀದರ್‌ (ಶೇ.-2) ಹೊರತುಪಡಿಸಿ ಎಲ್ಲ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ.

ಕರಾವಳಿಯಲ್ಲಿ ಪೂರ್ವ ಮುಂಗಾರು ಮಳೆ

(ವಾಡಿಕೆ ಮಳೆ: 158.2 ಮಿ.ಮೀ.)

ವರ್ಷ  ಸುರಿದ ಮಳೆ   ಶೇ.

2017    148      -13

2018    312      82

2019    44        -74

2020    149      -6

2021    514.7   225

2022    306.3   217

ಈ ಬಾರಿ ಕರಾವಳಿ  ಸಹಿತ ರಾಜ್ಯದಲ್ಲಿಯೇ ಪೂರ್ವ ಮುಂಗಾರು ಉತ್ತಮವಾಗಿತ್ತು. ಅದರಲ್ಲೂ ಅಸಾನಿ ಚಂಡಮಾರುತದ ಪರಿಣಾಮ ಹಲವು ಭಾಗಗಳಲ್ಲಿ ಮಳೆಯಾಗಿತ್ತು. – ಡಾ| ರಾಜೇಗೌಡ,  ಕೃಷಿ ವಿ.ವಿ. ಹವಾಮಾನ ವಿಜ್ಞಾನಿ 

 

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.