ಬೇಸಗೆ ರಜೆ; ವಿದೇಶ ಪ್ರವಾಸ ಬುಕ್ಕಿಂಗ್‌ ರದ್ದುಗೊಳಿಸುತ್ತಿರುವ ಪ್ರವಾಸಿಗರು !


Team Udayavani, Mar 10, 2020, 5:15 AM IST

ಬೇಸಗೆ ರಜೆ; ವಿದೇಶ ಪ್ರವಾಸ ಬುಕ್ಕಿಂಗ್‌ ರದ್ದುಗೊಳಿಸುತ್ತಿರುವ ಪ್ರವಾಸಿಗರು !

ಮಹಾನಗರ: ದೇಶ-ವಿದೇಶಗಳಲ್ಲಿ ಕೊರೊನಾ ಭೀತಿ ಹೆಚ್ಚಾಗುತ್ತಿದ್ದಂತೆ, ಅದು ಜಾಗತಿಕ ಮಟ್ಟದಲ್ಲಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಅತಿಹೆಚ್ಚು ಪೆಟ್ಟು ಉಂಟುಮಾಡುತ್ತಿದೆ.

ಅದರಲ್ಲಿಯೂ ಮುಂಬರುವ ಬೇಸಗೆ ರಜೆಯ ದೇಶ-ವಿದೇಶ ಪ್ರವಾಸದ ಲೆಕ್ಕಾ ಚಾರವನ್ನು ಈ ಕೊರೊನಾ ವೈರಸ್‌ ಭೀತಿ ಅಕ್ಷರಶಃ ಉಲ್ಟಾ ಮಾಡಿದೆ. ಇನ್ನೇನು ಕೆಲವು ದಿನಗಳಲ್ಲಿ ಶಾಲಾ-ಕಾಲೇಜಿಗೆ ಬೇಸಗೆ ರಜೆ ಬರಲಿದ್ದು, ಆ ವೇಳೆ ದೇಶ-ವಿದೇಶಕ್ಕೆ ಪ್ರವಾಸ ಹೋಗೋಣ ಎಂದು ಯೋಚಿಸಿದ್ದವರೆಲ್ಲ ಇದೀಗ ನಿರಾಶರಾಗುತ್ತಿದ್ದಾರೆ. ಅಷ್ಟೇಅಲ್ಲ, ಈಗಾಗಲೇ ವಿದೇಶಕ್ಕೆ ತೆರಳು ವುದಕ್ಕೆ ಮುಂಚಿತವಾಗಿನ ಟಿಕೇಟ್‌ ಬುಕ್ಕಿಂಗ್‌ ಮಾಡಿಕೊಂಡಿದ್ದವರು ಅದನ್ನು ರದ್ದುಗೊಳಿಸುತ್ತಿದ್ದಾರೆ. ಇದರಿಂದ ಅತ್ತ ಟೂರ್‌-ಟ್ರಾವೆಲ್ಸ್‌ ಏಜೆನ್ಸಿ ಗಳು ಕೂಡ ಪ್ರವಾಸಿಗರಿಲ್ಲದೆ, ನಷ್ಟ ಅನು ಭವಿಸುತ್ತಿದ್ದಾರೆ. ಬೇಸಗೆ ವೇಳೆ ಶಾಲಾ-ಕಾಲೇಜುಗಳಿಗೆ ರಜೆ ಇರುವ ಕಾರಣ ಹೆಚ್ಚಿನವರು ಮನೆ ಮಂದಿಯೊಂದಿಗೆ ಪ್ರವಾಸ ಕೈಗೊಳ್ಳುತ್ತಾರೆ. ಸಾಮಾನ್ಯವಾಗಿ ಮಂಗಳೂರಿನಿಂದ ಯುರೋಪ್‌ ದೇಶಗಳು, ಸಿಂಗಾಪುರ, ಥ್ಯಾಲಂಡ್‌, ಮಲೇಶ್ಯಾ, ವಿಯೆಟ್ನಾಂಗೆ ಪ್ರವಾಸಕ್ಕೆ ಹೆಚ್ಚು ಬೇಡಿಕೆ ಬರುತ್ತದೆ. ಆದರೆ, ಈ ಬಾರಿ ಪ್ರವಾಸಕ್ಕೆ ಶೇ.75ರಷ್ಟು ಬೇಡಿಕೆ ಕಡಿಮೆಯಾಗಿದೆ ಎನ್ನುತ್ತಾರೆ ಇಲ್ಲಿನ ಪ್ರವಾಸಿ ಏಜೆನ್ಸಿಯವರು.

ಮಾರ್ಚ್‌ನಿಂದ ಮೇ ತಿಂಗಳವರೆಗೆ ವಿದೇಶಗಳಿಗೆ ತೆರಳಲು ಪ್ರವಾಸಿಗರು ಹೆಚ್ಚಾಗಿ ಬುಕ್ಕಿಂಗ್‌ ಮಾಡುತ್ತಾರೆ. ಆದರೆ ಕೊರೊನಾ ಭೀತಿಯಿಂದಾಗಿ ಈಗಾಗಲೇ ಬುಕ್ಕಿಂಗ್‌ ಮಾಡಿದವರು ಕೂಡ ರದ್ದುಗೊಳಿಸುತ್ತಿದ್ದಾರೆ.

ಅಷ್ಟೇ ಅಲ್ಲದೆ ಕೆಲವೊಂದು ಟೂರ್‌ ಏಜೆನ್ಸಿ ಕೂಡ ವಿದೇಶಿ ಪ್ರವಾಸ ಪ್ಯಾಕೇಜ್‌ ಅನ್ನು ಕೆಲವು ತಿಂಗಳ ಮಟ್ಟಿಗೆ ರದ್ದುಗೊಳಿಸಿವೆ. ಭಾರತದಲ್ಲಿ ಈಗಾಗಲೇ ಸುಮಾರು 39 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಇದೇ ಕಾರಣಕ್ಕೆ ದೇಶದೊಳಗೇ ಸುತ್ತಾಡಲೂ ಕೆಲವರು ಹಿಂಜರಿಯುತ್ತಿದ್ದಾರೆ. ಇದರಿಂದ ಟ್ಯಾಕ್ಸಿ ಮಾಲಕರು ಕೂಡ ನಷ್ಟ ಅನುಭವಿಸುತ್ತಿದ್ದಾರೆ.

10 ಟ್ರಿಪ್‌ಗೆ ಇಳಿಕೆ
ಸೀಸನ್‌ ದಿನಗಳಲ್ಲಿ ಒಂದು ಕಾರಿನಿಂದ ತಿಂಗಳಿಗೆ 20 ಟ್ರಿಪ್‌ ಆಗುತ್ತಿತ್ತು. ಸದ್ಯ 10 ಟ್ರಿಪ್‌ಗೆ ಇಳಿಕೆಯಾಗಿದೆ.ಮಾರ್ಚ್‌ನಿಂದ ಮೇವರೆಗೆ ದಕ್ಷಿಣ ಕನ್ನಡಕ್ಕೆ ಆಗಮಿಸುವ ವಿದೇಶಿ, ಅನ್ಯ ರಾಜ್ಯದ ಪ್ರವಾಸಿಗರು ಮಡಿಕೇರಿ, ಮೈಸೂರು, ಮಂಗಳೂರು ಸಹಿತ ವಿವಿಧ ಪ್ರವಾಸಿ ತಾಣಗಳಿಗೆ ತೆರಳುತ್ತಾರೆ. ಆದರೆ, ಕೆಲವು ತಿಂಗಳುಗಳಿಂದ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ.

ವಿಮಾನ ಯಾನವೂ ನಷ್ಟದಲ್ಲಿ
ದೇಶ-ವಿದೇಶಗಳಲ್ಲಿ ಕೊರೊನಾ ಭೀತಿ ಇರುವ ಕಾರಣ, ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅನೇಕ ವಿಮಾನ ಯಾನ ಈಗಾಗಲೇ ತಾತ್ಕಾಲಿಕವಾಗಿ ರದ್ದುಗೊಂಡಿವೆ. ವಿದೇಶಗಳಿಗೆ ವಿಮಾನದಲ್ಲಿ ತೆರಳುವ ಮಂದಿ ತಮ್ಮ ಪ್ರವಾಸವನ್ನು ಮೊಟಕುಗೊಳಿಸುತ್ತಿದ್ದಾರೆ.

ಅದೇ ರೀತಿ ವಿದೇಶಿಗಳಿಂದಲೂ ಭಾರತಕ್ಕೆ ಹೆಚ್ಚಿನ ಮಂದಿ ಆಗಮಿಸುತ್ತಿಲ್ಲ. ಅಲ್ಲದೆ ಕುವೈಟ್‌ ಸರಕಾರವು ಭಾರತ ಸಹಿತ 7 ದೇಶಗಳಿಗೆ ವಿಮಾನಯಾನವನ್ನು ತಾತ್ಕಾಲಿಕವಾಗಿ ನಿಲ್ಲಿದೆ. ಇದೇ ಕಾರಣಕ್ಕೆ ಮಾ. 6ರಿಂದ ಒಂದು ವಾರ ಕಾಲ ಕುವೈಟ್‌ನಿಂದ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಕುವೈಟ್‌ಗೆ ವಿಮಾನ ಸಂಚಾರ ಇರುವುದಿಲ್ಲ.

ಇದರಿಂದಾಗಿ ವಿಮಾನ ನಿಲ್ದಾಣಗಳು ಕೂಡ ನಷ್ಟದಲ್ಲಿವೆ. ನವಮಂಗಳೂರಿನ ಬಂದರಿಗೆ ಬರುವ ಪ್ರವಾಸಿ ಹಡಗುಗಳಿಗೆ ಈಗಾಗಲೇ ಮಾ. 31ರ ವರೆಗೆ ಬಂದರು ಪ್ರವೇಶಿಸದಂತೆ ನಿರ್ಬಂಧಿಸಲಾಗಿದೆ.

17 ಹಡಗು, 17,115 ಮಂದಿ ವಿದೇಶಿಗರು
2019ನೇ ವರ್ಷದ ಜನವರಿ ಎಪ್ರಿಲ್‌ನಿಂದ ಕಳೆದ ವರ್ಷದ ಕೊನೆಯವರೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಸಕ್ಕೆಂದು ಎನ್‌ಎಂಪಿಟಿಗೆ ವಿವಿಧ ಹಡಗುಗಳ ಮುಖೇನ 17,115 ಮಂದಿ ವಿದೇಶಿಗರು ಆಗಮಿಸಿದ್ದರು. ಎಪ್ರಿಲ್‌ 1ರಿಂದ ಡಿಸೆಂಬರ್‌ 24ರ ವರೆಗೆ ಒಟ್ಟು 17 ಪ್ರವಾಸಿ ಹಡಗುಗಳು ಆಗಮಿಸಿತ್ತು. ಇವುಗಳಲ್ಲಿ ಬಂದ ಪ್ರವಾಸಿಗರು ಉಭಯ ಜಿಲ್ಲೆಗಳ ವಿವಿಧ ಪ್ರವಾಸಿ ತಾಣಗಳಿಗೆ ತೆರಳುತ್ತಾರೆ. ವಿದೇಶಗಳಲ್ಲಿ ಕೊರೊನಾ ಭೀತಿ ಇದ್ದು, ಕಳೆದ ತಿಂಗಳಿನಿಂದ ಯಾವುದೇ ಪ್ರವಾಸಿ ಹಡಗುಗಳು ಎನ್‌ಎಂಪಿಟಿಗೆ ಬರುತ್ತಿಲ್ಲ.

ವಿದೇಶಿ ಪ್ರವಾಸಿಗರು ಆಗಮಿಸುತ್ತಿಲ್ಲ
ಜಿಲ್ಲೆಗೆ ವಿದೇಶಿ ಪ್ರವಾಸಿಗರು ಯಾರು ಕೂಡ ಆಗಮಿಸುತ್ತಿಲ್ಲ. ಬದಲಾಗಿ ಹೊರ ರಾಜ್ಯದ ಪ್ರವಾಸಿಗರು ಬರುತ್ತಿದ್ದಾರೆ. ಕಳೆದ ವರ್ಷ ಒಟ್ಟು 2 ಕೋಟಿಯಷ್ಟು ಪ್ರವಾಸಿಗರು ಜಿಲ್ಲೆಗೆ ಆಗಮಿಸಿದ್ದಾರೆ. ಕೊರೊನಾ ಭೀತಿ ಆರಂಭವಾ ಗಿದ್ದು, ಇದರ ಪರಿಣಾಮ ಜಿಲ್ಲೆಗೆ ಸದ್ಯ ಬೀರಿಲ್ಲ.
– ಸುಧೀರ್‌ ಗೌಡ, ದ.ಕ. ಜಿಲ್ಲಾ ಪ್ರವಾಸೋದ್ಯಮ ಸಮಾಲೋಚಕ

ಬುಕ್ಕಿಂಗ್‌ ರದ್ದುಗೊಳಿಸುತ್ತಿದ್ದಾರೆ
ಸಾಮಾನ್ಯವಾಗಿ ಬೇಸಗೆ ವೇಳೆ ಮಂಗಳೂರಿನಿಂದ ವಿದೇಶಕ್ಕೆ ಪ್ರವಾಸಕ್ಕೆ ತೆರಳಲು ಹೆಚ್ಚಿನ ಮಂದಿ ಮುಂಗಡ ಬುಕ್ಕಿಂಗ್‌ ಮಾಡುತ್ತಾರೆ. ಆದರೆ ಕೊರೊನಾ ಭೀತಿಯಿಂದಾಗಿ ಈಗಾಗಲೇ ಬುಕ್ಕಿಂಗ್‌ ಮಾಡಿದವರು ಕೂಡ ರದ್ದುಗೊಳಿಸುತ್ತಿದ್ದಾರೆ.
 - ಅರುಣ್‌, ಪ್ರವಾಸಿ ಬುಕ್ಕಿಂಗ್‌ ಏಜೆನ್ಸಿ

ಟ್ಯಾಕ್ಸಿ ಮಾಲಕರಿಗೆ ನಷ್ಟ
ವಿಮಾನ ನಿಲ್ದಾಣ, ರೈಲು ನಿಲ್ದಾಣದಿಂದ ಪ್ರಯಾಣಿಕರನ್ನು, ಪ್ರವಾಸಿಗರನ್ನು ಕರೆದೊಯ್ಯುವ ಟ್ಯಾಕ್ಸಿ ಮಾಲಕರು ನಷ್ಟ ಅನುಭವಿಸುತ್ತಿದ್ದಾರೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದಾಗಿ ನಮಗೆ ಬಾಡಿಗೆ ಕೂಡ ಸಿಗುತ್ತಿಲ್ಲ.
-ಆನಂದ್‌, ಪ್ರದ.ಕ. ಜಿಲ್ಲಾ ಟ್ಯಾಕ್ಸಿ ಮೆನ್ಸ್‌ ಆ್ಯಂಡ್‌ ಮ್ಯಾಕ್ಸಿ ಕ್ಯಾಬ್‌ ಸಂಘದ ಪ್ರ. ಕಾರ್ಯದರ್ಶಿ

-ನವೀನ್‌ ಭಟ್‌ ಇಳಂತಿಲ

ಟಾಪ್ ನ್ಯೂಸ್

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Bhojshala: ASI seeks 8 weeks time for scientific survey

Bhojshala: ವೈಜ್ಞಾನಿಕ ಸಮೀಕ್ಷೆಗೆ 8 ವಾರ ಕಾಲಾವಕಾಶ ಕೋರಿದ ಎಎಸ್‌ಐ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Apologize for the size of the wrong ad: Supreme to Ramdev

Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್‌ ಗೆ ಸುಪ್ರೀಂ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election; Vigorous fight of new faces in Dakshina Kannada

Lok Sabha Election; ದಕ್ಷಿಣ ಕನ್ನಡದಲ್ಲಿ ಹೊಸ ಮುಖಗಳ ಹುರುಪಿನ ಸೆಣಸಾಟ

Defense Expenditure: India to rank fourth in the world by 2023

Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.