ರವಿವಾರ ತರಗತಿ ಪ್ರಸ್ತಾವಕ್ಕೆ ವ್ಯಾಪಕ ವಿರೋಧ


Team Udayavani, Aug 20, 2019, 5:48 AM IST

SUNDAY-CLASS

ಮಂಗಳೂರು: ಮಳೆ ಮತ್ತು ಪ್ರವಾಹದ ಕಾರಣ ಶಾಲೆಗಳಿಗೆ ನೀಡಿದ್ದ ರಜೆಯನ್ನು ಸರಿದೂಗಿಸಲು ರವಿವಾರ ತರಗತಿ ನಡೆಸುವ ಪ್ರಸ್ತಾವಕ್ಕೆ ಶೈಕ್ಷಣಿಕ ವಲಯದಿಂದ ವಿರೋಧ ವ್ಯಕ್ತವಾಗಿದೆ.

“ಶನಿವಾರ ಅಪರಾಹ್ನವೂ ತರಗತಿ ನಡೆಸುವುದಕ್ಕೆ ಯಾವುದೇ ತಕರಾರು ಇಲ್ಲ; ಆದರೆ ರವಿವಾರ ನಡೆಸುವ ಬಗ್ಗೆ ಆಕ್ಷೇಪವಿದೆ ಎಂದು ಮಂಗಳೂರು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷ ಅಲೋಶಿಯಸ್‌ ಡಿ’ಸೋಜಾ ತಿಳಿಸಿದ್ದಾರೆ.

ಮಕ್ಕಳಿಗೆ ಮಾನಸಿಕ ಒತ್ತಡ
ವಾರದ 6 ದಿನಗಳಲ್ಲಿ ಪಾಠ ಪ್ರವಚನ ಕೇಳುವ ಮಕ್ಕಳಿಗೆ ವಾರದಲ್ಲಿ ಒಂದು ದಿನವಾದರೂ ವಿಶ್ರಾಂತಿ ಬೇಕಾಗುತ್ತದೆ. 7ನೇ ದಿನವೂ ಪಾಠ ಕೇಳುವುದೆಂದರೆ ಅವರು ಮಾನಸಿಕ ಒತ್ತಡಕ್ಕೆ ಒಳಗಾಗಬಹುದು ಎಂದಿರುವ ಅವರು ಕಳೆದ ವರ್ಷ ಎಲ್ಲ ರಜೆಗಳನ್ನು ಶನಿವಾರ ಭರ್ತಿ ಮಾಡಲಾಗಿತ್ತು ಎಂದವರು ವಿವರಿಸಿದ್ದಾರೆ.

ರವಿವಾರ ಸಾರ್ವತ್ರಿಕ ರಜಾ ದಿನವಾಗಿರುವುದರಿಂದ ಅನೇಕ ಕೌಟುಂಬಿಕ ಸಮಾರಂಭಗಳು ಇರುತ್ತವೆ. ಹಲವು ತಿಂಗಳ ಹಿಂದೆಯೇ ನಿಗದಿಯಾಗಿರುವ ಕೆಲವೊಂದು ಸಭೆ ಸಮಾರಂಭಗಳನ್ನು ಬದಲಾಯಿಸಲು ಸಾಧ್ಯವಾಗದ ಪರಿಸ್ಥಿತಿ ಇರುತ್ತದೆ. ರವಿವಾರ ತರಗತಿ ನಡೆಸಿದರೆ ಮಕ್ಕಳಿಗೆ ಮಾತ್ರವಲ್ಲ, ಶಿಕ್ಷಕ-ಶಿಕ್ಷಕೇತರ ಸಿಬಂದಿಗೆ, ಶಾಲಾ ಆಡಳಿತದ ಮಂದಿಗೆ ಅಂತಹ ಸಮಾರಂಭಗಳಲ್ಲಿ ಭಾಗವಹಿಲು ಅನನುಕೂಲವಾಗುತ್ತದೆ ಎಂದಿದ್ದಾರೆ.

ರವಿವಾರ ಎಲ್ಲರಿಗೂ ಕಷ್ಟ
ರವಿವಾರ ತರಗತಿ ನಡೆಸಿದರೆ ಮಕ್ಕಳಿಗೆ ಮಕ್ಕಳಿಗೆ ಮಾತ್ರವಲ್ಲ ಶಿಕ್ಷಕರಿಗೆ, ಪೋಷಕರಿಗೆ ಸೇರಿದಂತೆ ಎಲ್ಲರಿಗೂ ಕಷ್ಟ. ಆದ್ದರಿಂದ ರವಿವಾರದ ತರಗತಿಗೆ ನಮ್ಮ ವಿರೋಧವಿದೆ ಎಂದು ದ.ಕ. ಜಿಲ್ಲಾ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷೆ ಜಯಶ್ರೀ ಉದಯವಾಣಿಗೆ ತಿಳಿಸಿದ್ದಾರೆ.

ಒಮ್ಮತದ ತೀರ್ಮಾನಕ್ಕೆ ಪ್ರಯತ್ನಿಸುವೆ
ರವಿವಾರ ತರಗತಿ ಬೇಡ ಎಂದು ಶಿಕ್ಷಕರು ತಿಳಿಸಿದ್ದಾರೆ. ಕೆಲವು ಮಕ್ಕಳ ಹೆತ್ತವರು/ ಪೋಷಕರೂ ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪಠ್ಯ ವಿಷಯ ಮುಗಿಸುವ ಒತ್ತಡ ಶಿಕ್ಷಣ ಇಲಾಖೆಗೆ ಇದೆ. ಸಂಬಂಧ ಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಒಮ್ಮತದ ತೀರ್ಮಾನಕ್ಕೆ ಬರುವ ಬಗ್ಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
– ವೇದವ್ಯಾಸ ಡಿ. ಕಾಮತ್‌, ಶಾಸಕರು, ಮಂಗಳೂರು ನಗರ ದಕ್ಷಿಣ

ಕ್ರೀಡೆಗೆ ಅಡ್ಡಿ
ಕ್ರಿಡಾಪಟುಗಳಾಗಿರುವ ಮಕ್ಕಳಿಗೆ ತರಬೇತಿ ನೀಡಲು ನಮಗೆ ಅವಕಾಶ ಇರುವುದು ರವಿವಾರ ಮಾತ್ರ. ಶಾಲಾ ದಿನಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಹೆಚ್ಚುವರಿ ತರಗತಿ, ಪ್ರತಿಭಾ ಕಾರಂಜಿ ತರಬೇತಿ ನಡೆಯುತ್ತಿದ್ದು, ಕ್ರೀಡಾ ತರಬೇತಿಗೆ ಅವಕಾಶ ಸಿಗುತ್ತಿಲ್ಲ. ರವಿವಾರವೂ ತರಗತಿ ನಡೆಸಿದರೆ ಕ್ರೀಡಾ ತರಬೇತಿ ಕೊಡುವುದು ಯಾವಾಗ? ಆದ್ದ ರಿಂದ ರವಿವಾರ ತರಗತಿಗಳು ಬೇಡ.
– ಶಿವರಾಮ ಏನೆಕಲ್ಲು, ದ.ಕ. ಜಿಲ್ಲಾ ದೈ.ಶಿಕ್ಷಕರ ಸಂಘದ ಅಧ್ಯಕ್ಷ

ವಿರಾಮ ಬೇಡವೇ?
ರವಿವಾರವೂ ತರಗತಿ ಮಾಡಿದರೆ ಮಕ್ಕಳಿಗೆ ವಿರಾಮ ಯಾವಾಗ? ವಾರದ ಏಳೂ ದಿನ ಪಾಠ ಪ್ರವಚನದಿಂದ ಅವರಿಗೆ ಮಾನಸಿಕ ಒತ್ತಡ ಆಗಬಹುದು. ಹಾಗಾಗಿ ರವಿವಾರ ತರಗತಿ ಬೇಡ. ಶನಿವಾರ ಮಧ್ಯಾಹ್ನ ಬಳಿಕ ತರಗತಿ ನಡೆಸಿ ರಜೆಯನ್ನು ಸರಿ ದೂಗಿಸುವುದು ಉತ್ತಮ.
– ಜಗದೀಶ್‌ ಶೆಟ್ಟಿ,
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಂಗಳೂರು
ದಕ್ಷಿಣ ವಲಯ ಅಧ್ಯಕ್ಷ

ಮಕ್ಕಳು ಬಂದರೆ ತಾನೇ?
ರವಿವಾರ ಮಕ್ಕಳು ಬಂದರೆ ತಾನೇ ತರಗತಿ ನಡೆಸುವುದು? ಅಂದು ಬಸ್‌ ಪಾಸ್‌ ಸೌಲಭ್ಯ ಇಲ್ಲ. ಎಲ್ಲರಿಗೂ ವಾರದಲ್ಲಿ ಒಂದು ದಿನ ವಿರಾಮ ಅಗತ್ಯ. ಆದ್ದರಿಂದ ರವಿವಾರ ತರಗತಿ ಬೇಡ. ಅಂದು ಶಾಲೆಗೆ ಹೋಗುವ ಪ್ರಶ್ನೆಯೇ ಇಲ್ಲ. ಶನಿವಾರ ಮಾಡಲಿ; ಹೋಗುತ್ತೇವೆ.
– ಚನ್ನಕೇಶವ, ದ.ಕ. ಚಿತ್ರ
ಕಲಾ ಶಿಕ್ಷಕರ ಸಂಘದ ಅಧ್ಯಕ್ಷ

ವಾರಕ್ಕೊಂದು ದಿನ ರಜೆ ಬೇಕು
ವಾರಕ್ಕೊಂದು ದಿನ ರಜೆ ಬೇಕು. ನಿಗದಿತ ಅವಧಿಯಲ್ಲೇ ಪಠ್ಯಕ್ರಮವನ್ನು ಮುಗಿಸಬೇಕೆಂದು ಬೆಳಗ್ಗೆ ಮತ್ತು ಸಂಜೆ ಹೆಚ್ಚುವರಿಯಾಗಿ ತರಗತಿ ನಡೆಸುತ್ತಿದ್ದೇವೆ. ರವಿವಾರವೂ ವಿಶ್ರಾಂತಿ ಇಲ್ಲದಿದ್ದರೆ ಹೇಗೆ? ಮಕ್ಕಳ ಮತ್ತು ಶಿಕ್ಷಕರ ಹಿತದೃಷ್ಟಿಯಿಂದ ರವಿವಾರ ತರಗತಿ ನಡೆಸುವುದು ಆರೋಗ್ಯಕರ ಬೆಳವಣಿಗೆ ಅಲ್ಲ.
– ಪಿ.ಡಿ. ಶೆಟ್ಟಿ, ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ
ಮಂಗಳೂರು ದಕ್ಷಿಣ ವಲಯ ಅಧ್ಯಕ್ಷ

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.